AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ರಸ್ತೆ ಕಾಮಗಾರಿಯ ಸಮಯದಲ್ಲಿ ಅಗೆದ ಮಣ್ಣಿನಲ್ಲಿ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ವಿಶಾಖಪಟ್ಟಣದ ಮಧುರವಾಡದಲ್ಲಿ ಪತ್ತೆಯಾದ ಈ ಕಲ್ಲಿನ ವಿಗ್ರಹ ಪ್ರಾಚೀನವಾದುದು ಎಂದು ಸ್ಥಳೀಯರು ನಂಬಿದ್ದರೂ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪುರಾತತ್ವ ಇಲಾಖೆಯ ಅಧಿಕಾರಿಗಳು ಕ್ಷೇತ್ರಕ್ಕೆ ಇಳಿದಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಶ್ರೀರಾಮನ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ.

ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು

ಊಟಿಯಲ್ಲಿ ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Video: ಅಬ್ಬಬ್ಬಾ… ಇದೇನಿದು ಅಚ್ಚರಿ; ನಾಯಿ ಮರಿಗಳೊಂದಿಗೆ ಆಟವಾಡಿದ ಸಿಂಹಗಳು

ಕಾಡು ಪ್ರಾಣಿಗಳು ಆಹಾರವನ್ನರಸುತ್ತಾ ನಾಡಿನತ್ತ ಬರುವುದು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿಬಿಟ್ಟಿದೆ. ಅದೇ ರೀತಿ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿಯೂ ಕಾಡು ಪ್ರಾಣಿಗಳ, ವಿಶೇಷವಾಗಿ ಸಿಂಹಗಳು ಮತ್ತು ಚಿರತೆಗಳ ಸಂಚಾರ ಹೆಚ್ಚಾಗಿದ್ದು, ಅಚ್ಚರಿಯ ಸಂಗತಿ ಏನೆಂದ್ರೆ ಇಲ್ಲಿನ ಊರೊಳಗೆ ಎಂಟ್ರಿಕೊಟ್ಟ ಎರಡು ಸಿಂಹಗಳು ನಾಯಿಮರಿಯೊಂದಿಗೆ ಆಟವಾಡಿವೆ. ಈ ದೃಶ್ಯ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಥಾವೆ ವಾಲಿ ಮಾತಾ' ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಆಂಧ್ರಪ್ರದೇಶದ ಶ್ರೀಕಾಳಹಸ್ತಿ ದೇವಸ್ಥಾನಕ್ಕೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದರು. ಅವರು ರಾಹು-ಕೇತು ಪೂಜೆಯಲ್ಲಿ ಭಾಗವಹಿಸಿದರು. ದೇವಾಲಯದ ಐತಿಹಾಸಿಕ ಶಿಲ್ಪಗಳು ಮತ್ತು ರಚನೆಗಳಿಂದ ತೀವ್ರವಾಗಿ ಪ್ರಭಾವಿತರಾದರು. ದೇವಾಲಯದ ವಿಶಿಷ್ಟ ವೈಶಿಷ್ಟ್ಯಗಳ ಬಗ್ಗೆ ಅರ್ಚಕರಿಂದ ತಿಳಿದುಕೊಂಡಾಗ ದೇವರು ಮತ್ತು ದೇವತೆಯ ಮೇಲಿನ ಅವರ ಭಕ್ತಿ ಮತ್ತಷ್ಟು ಹೆಚ್ಚಾಯಿತು.

ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ರೈಲನ್ನು ಇಳಿಯುವ ಭರದಲ್ಲಿ ರೈಲು ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ಯಾರೇ ಆಗಲಿ, ತಾವು ಪ್ರೀತಿಸುವ ವಿಷ್ಯ ಹೆತ್ತವರಿಗೆ ಹೇಳಲು ಹಿಂದೇಟು ಹಾಕ್ತಾರೆ. ತಂದೆಗೆ ಈ ವಿಷ್ಯ ಗೊತ್ತಾದ್ರೆ ಏನ್ ಹೇಳ್ತಾರೆ ಅನ್ನೋ ಭಯ. ಆದರೆ ಇಲ್ಲೊಬ್ಬ ಮಗಳು ತಂದೆಗೆ ತನ್ನ ಪ್ರೀತಿ ವಿಷಯ ತಿಳಿಸಿದ್ದಾಳೆ. ಮಗಳು ಹೀಗೆನ್ನುತ್ತಿದ್ದಂತೆ ತಂದೆ ಕೊಟ್ಟ ರಿಯಾಕ್ಷನ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.

Video: ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ಶ್ವಾನ ಹಾಗೂ ಮಕ್ಕಳ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ಈ ಶ್ವಾನ ಎಷ್ಟು ಬುದ್ದಿವಂತಿಕೆ ಹೊಂದಿದೆ ಎಂದು ತಿಳಿಯುತ್ತದೆ. ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಹೆತ್ತವರು ಕಲಿಸಿ ಕೊಡುತ್ತಿದ್ದಂತೆ ಸಾಕು ನಾಯಿಯು ಮುದ್ದಾಗಿ ರಿಯಾಕ್ಷನ್ ಕೊಟ್ಟಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ರೆಸ್ಟೋರೆಂಟ್ ಬಿಲ್ ನೋಡಿ ಶಾಕ್ ಆದ ಅನಿವಾಸಿ ಭಾರತೀಯ ಬಾಲಕ, ಕಾರಣ ಇದೇ ನೋಡಿ

ಸಾಮಾನ್ಯವಾಗಿ ಪ್ರಸಿದ್ಧ ರೆಸ್ಟೋರೆಂಟ್‌ಗಳಲ್ಲಿ ಊಟ ತಿಂಡಿ ಸವಿದಾಗ ಬಿಲ್ ಕೂಡ ಅಷ್ಟೇ ದೊಡ್ಡ ಮೊತ್ತದಾಗಿರುತ್ತದೆ. ಚೈನ್ನೈ ರೆಸ್ಟೋರೆಂಟ್‌ಯೊಂದರಲ್ಲಿ ಪಡೆದ ಬಿಲ್‌ ನೋಡಿ ಅನಿವಾಸಿ ಭಾರತೀಯ ಬಾಲಕ ಶಾಕ್ ಆಗಿದ್ದಾನೆ. ಬಿಲ್ ನೋಡಿ ಈತ ನೀಡಿದ ರಿಯಾಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ

ಸೈಕ್ಲಿಂಗ್ ಅಪಘಾತದಲ್ಲಿ ತಮ್ಮನನ್ನು ಉಳಿಸಲು ಅಣ್ಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಈ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಸಹೋದರ ಧೈರ್ಯವನ್ನು ಪ್ರದರ್ಶಿಸುವ ಹೃದಯಸ್ಪರ್ಶಿ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಡಿಸೆಂಬರ್ 11ರಂದು ನಡೆದ ಈ ದೃಶ್ಯದಲ್ಲಿ, ಇಬ್ಬರು ಅಣ್ಣ-ತಮ್ಮಂದಿರು ಗುಡ್ಡಗಾಡು ರಸ್ತೆಯ ಬಳಿಯ ಉದ್ಯಾನದಂತಹ ಪ್ರದೇಶದಲ್ಲಿ ತಮ್ಮ ಮನೆಯ ಹೊರಗೆ ಸೈಕಲ್ ತುಳಿಯುತ್ತಿರುವುದನ್ನು ನೋಡಬಹುದು. ಆದರೆ ಹಠಾತ್ ಅಪಘಾತವು ಬಹುತೇಕ ದುರಂತವಾಗಿ ಬದಲಾಗುತ್ತದೆ.

Video: ಹೆಲ್ಮೆಟ್ ಧರಿಸದ ಬೈಕ್ ಸವಾರನನ್ನು ತಡೆದು ನಿಲ್ಲಿಸಿದ ಪೊಲೀಸರು, ಈ ವ್ಯಕ್ತಿ ನೀಡಿದ ಉತ್ತರಕ್ಕೆ ಪೊಲೀಸರೇ ಶಾಕ್

ಹೆಲ್ಮೆಟ್ ಧರಿಸುವುದು ಕಡ್ಡಾಯ. ಆದರೆ ಕೆಲವರು ಈ ರೂಲ್ಸ್ ಬ್ರೇಕ್ ಮಾಡ್ತಾರೆ. ಪೊಲೀಸರ ಕೈಯಲ್ಲಿ ತಗಲಾಕಿ ಕೊಳ್ತಾರೆ. ಇಲ್ಲೊಬ್ಬ ಬೈಕ್ ಸವಾರ ಹೆಲ್ಮೆಟ್ ಹಾಕಿಕೊಳ್ಳದೇ ಸಿಕ್ಕಿ ಬಿದ್ದಿದ್ದಾನೆ. ಟ್ರಾಫಿಕ್ ಪೊಲೀಸರ ಹೆಲ್ಮೆಟ್ ಎಲ್ಲಿ ಎನ್ನುತ್ತಿದ್ದಂತೆ ಪ್ರಾಮಾಣಿಕ ಉತ್ತರ ನೀಡಿದ್ದಾನೆ. ಈ ವ್ಯಕ್ತಿಯ ಮಾತು ಕೇಳಿ ಪೊಲೀಸರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.