AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

Video: ಅಜ್ಜಿಯ ಮುಂದೆ ಪ್ರತ್ಯಕ್ಷನಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ

ಹಿರಿಜೀವಗಳೇ ಹಾಗೆ, ತಮ್ಮ ಮೊಮ್ಮಕ್ಕಳ ಆಗಮನವನ್ನು ಸಂಭ್ರಮಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮೊಮ್ಮಗನು ಬಹಳ ದಿನಗಳ ನಂತರ ಅಜ್ಜಿಯನ್ನು ಕಾಣಲು ಬಂದಿದ್ದು, ಮೊಮ್ಮಗನನ್ನು ನೋಡಿದ ಅಜ್ಜಿಯ ಖುಷಿಯೇ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಕೆಲವು ದೃಶ್ಯಗಳು ಒಳ್ಳೆತನಕ್ಕೆ ಸಾಕ್ಷಿಯಾಗುತ್ತದೆ. ಇಲ್ಲೊಬ್ಬಳು ಪುಟ್ಟ ಬಾಲಕಿ ಬೀದಿ ನಾಯಿ ಕಂಡೊಡನೆ ಮಾಡಿದ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಆರ್ಡರ್ ಮಾಡಿದ ಆರು ನಿಮಿಷಕ್ಕೆ ಕೈ ಸೇರಿತು ಪ್ರಾಡಕ್ಟ್; ಬ್ಲಿಂಕಿಟ್‌ನ ಕ್ಷಿಪ್ರ ಸೇವೆ ಕಂಡು ವಿದೇಶಿಗ ಶಾಕ್

ಇತ್ತೀಚೆಗಿನ ದಿನಗಳಲ್ಲಿ ತಮಗೆ ಬೇಕಾದ ಪ್ರತಿಯೊಂದು ವಸ್ತುಗಳನ್ನು ಆನ್ಲೈನ್ ನಲ್ಲಿ ಖರೀದಿ ಮಾಡುವವರೇ ಹೆಚ್ಚು. ವಿದೇಶಿಗರು ಕೂಡ ಭಾರತಕ್ಕೆ ಬಂದರೆ ಆನ್ಲೈನ್ ನಲ್ಲಿ ವಸ್ತುಗಳನ್ನು ಆರ್ಡರ್ ಮಾಡುತ್ತಾರೆ. ಆದರೆ ವಿದೇಶಿಗರೊಬ್ಬರು ಬ್ಲಿಂಕಿಟ್‌ ನಲ್ಲಿ ಆರ್ಡರ್ ಮಾಡಿದ್ದ ವಸ್ತು ಕ್ಷಣಾರ್ಧದಲ್ಲಿ ಮನೆ ಬಾಗಿಲಿಗೆ ಬಂದಿದೆ. ಈ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು?

ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ ಶಾಸಕರ ಗಮನಕ್ಕೆ ಬಂದಾಗ ಅವರೇ ಮಧ್ಯಪ್ರವೇಶಿಸಿದರು. ಯಾವುದೇ ಸಮಸ್ಯೆ ಇದ್ದರೆ ನೋಟಿಸ್ ನೀಡಬೇಕು, ಆದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಏಕೆ? ಎಂದು ಅವರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ವಿದ್ಯುತ್ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದಾಗ ಅವರೂ ಸಹ ಅನುಭವಿಸುವಂತಾಗಲಿ ಎಂದು ಶಾಸಕರು ಆ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!

ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

Video: ಬೆಂಗಳೂರು ಜೀವನ ಇಷ್ಟೊಂದು ದುಬಾರಿ ಏಕೆ? ಎಂದು ಪ್ರಶ್ನಿಸಿದ ಮಹಿಳೆ

ಕೈ ತುಂಬಾ ಸಂಬಳ ಇದ್ರೂ ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಜೀವನ ನಡೆಸೋದು ಕಷ್ಟ. ಇಂತಹದ್ದೇ ಅನುಭವ ಬೆಂಗಳೂರಿನ ಮಹಿಳೆಗೆ ಆಗಿದೆ. ಈ ನಗರದಲ್ಲಿ ದೈನಂದಿನ ಜೀವನ ಏಕೆ ಇಷ್ಟೊಂದು ದುಬಾರಿಯಾಗಿದೆ ಎಂದು ಪ್ರಶ್ನೆ ಮಾಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ

ಬೀದಿನಾಯಿಗಳ ಅಟ್ಟಹಾಸಕ್ಕೆ ಬೆಳಗಾವಿ ಜನ ನಲುಗಿ ಹೋಗಿದ್ದಾರೆ. ರಸ್ತೆಯಲ್ಲಿ ಹೋಗುವುದಕ್ಕೂ ಹಿಂದೇಟು ಹಾಕುವಂತಾಗಿದೆ. ಒಬ್ಬೊಬ್ಬರೇ ರಸ್ತೆ ಮೇಲೆ ಕಾಲಿಡುವಂತೆಯೇ ಇಲ್ಲ. ಜೋಶಿಮಾಳ ಏರಿಯಾದಲ್ಲಿರುವ ಜನರಿಗೆ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ಪಡೆ ಕಟ್ಟಿಕೊಂಡು ಬೀದಿನಾಯಿಗಳ ಗ್ಯಾಂಗ್ ಅಟ್ಯಾಕ್ ಮಾಡೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ

ಥೈಲ್ಯಾಂಡ್ ಸೇನೆಯು ಕಾಂಬೋಡಿಯಾದಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಬುಲ್ಡೋಜರ್ ಬಳಸಿ ಕೆಡವಿದೆ. ಗಡಿ ವಿವಾದದ ಭಾಗವಾಗಿರುವ ಈ ಕ್ರಮವು ಭಾರತ ಸೇರಿದಂತೆ ವಿಶ್ವದಾದ್ಯಂತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಥೈಲ್ಯಾಂಡ್ ಈ ಪ್ರದೇಶವನ್ನು ತನ್ನದು ಎಂದು ಹೇಳಿಕೊಳ್ಳುತ್ತದೆ. ಈ ಘಟನೆಯು ಥೈಲ್ಯಾಂಡ್-ಕಾಂಬೋಡಿಯಾದ ಗಡಿಯಲ್ಲಿ ಮಿಲಿಟರಿ ಘರ್ಷಣೆಯನ್ನು ಹೆಚ್ಚಿಸಿದ್ದು, ಎರಡೂ ಕಡೆಗಳಲ್ಲಿ ಸಾವು-ನೋವುಗಳು ಸಂಭವಿಸಿವೆ.

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್‌ನಲ್ಲಿ 85 ಲಕ್ಷ ರೂ. ಸಾಗಿಸುತ್ತಿದ್ದ ಅಕೌಂಟೆಂಟ್​​​ನನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವಾಹನದಿಂದ ಕೆಳಗಿಳಿಸಿ ದರೋಡೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಶಂಕಿತರ ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಪ್ರತಿ ಆರೋಪಿಯನ್ನು ಹಿಡಿದುಕೊಟ್ಟವರಿಗೂ 50,000 ರೂ. ಬಹುಮಾನ ಘೋಷಿಸಿದ್ದಾರೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ ಅಡ್ಡಹಾಕಿ ದುಡ್ಡು ಕಸಿದುಕೊಂಡಿದ್ದಾರೆ.

ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಎದುರಲ್ಲೇ ತೀವ್ರ ಮಾತಿನ ಜಟಾಪಟಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಸಚಿವರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ನಂತರ ರೈಲ್ವೆ ಕಾಮಗಾರಿಗಳ ವೀಕ್ಷಣೆ ಮುಂದುವರಿದಿದೆ.

ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!

ಆನೇಕಲ್ ಪ್ರದೇಶದ ತಮಿಳುನಾಡು ಗಡಿ ಭಾಗದ ಗ್ರಾಮಗಳಲ್ಲಿ ಕಾಡಾನೆಗಳ ನಿರಂತರ ಓಡಾಟ, ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳನ್ನು ಕಾಡಿನೊಳಗೆ ಅಟ್ಟುವುದರ ಜೊತೆಗೆ, ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿವೆ. ಈ ಮಧ್ಯೆ, 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್ ಆಗಿದೆ.

  • Ramu Ram
  • Updated on: Dec 25, 2025
  • 12:30 pm