AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ

9 ವರ್ಷದ ವಂಶಿಕಾ ಯಾದವ್ ಎಂಬ ಬಾಲಕಿ ಅಯೋಧ್ಯೆಯ ರಾಮಲಲ್ಲಾ ದರ್ಶನಕ್ಕಾಗಿ ಫಿರೋಜಾಬಾದ್‌ನಿಂದ ಅಯೋಧ್ಯೆಗೆ 450 ಕಿ.ಮೀ ದೂರ ಸ್ಕೇಟಿಂಗ್ ಮಾಡಿದ್ದಾಳೆ. ಆಕೆಯ ಈ ಸಾಧನೆ ಹಾಗೂ ಭಕ್ತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಯೋಧ್ಯೆಯಲ್ಲಿರುವ ಬಾಲ ರಾಮನನ್ನು ಭೇಟಿ ಮಾಡಲು ಫಿರೋಜಾಬಾದ್‌ನಿಂದ ಅಯೋಧ್ಯೆಗೆ 450 ಕಿಲೋಮೀಟರ್ ಸ್ಕೇಟಿಂಗ್ ಮಾಡಿದ್ದಾಳೆ. ರಾಮನ ಮೇಲಿನ ಬಾಲಕಿಯ ಭಕ್ತಿಯ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ.

ಮೈಸೂರು: ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್

ಬ್ಯಾರಿಕೇಡ್ ಬಳಿ ಸಾಗುತ್ತಿದ್ದ ಅರಣ್ಯ ಇಲಾಖೆ ವಾಹನದತ್ತ ಕಾಡಾನೆ ಆಕ್ರಮಣಕಾರಿ ಧೋರಣೆಯಲ್ಲಿ ಚೇಸ್ ಮಾಡಿದ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ. ಮೈಸೂರಿನ ಸರಗೂರು ತಾಲ್ಲೂಕಿನ ದಡದಳ್ಳಿ ಕಾಲೋನಿಯ ಅರಣ್ಯ ಅಂಚಿನಲ್ಲಿ ನಡೆದ ಘಟನೆಯ ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

  • Ram
  • Updated on: Jan 10, 2026
  • 7:40 am

ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಭಯಭೀತರಾಗಿದ್ದು, ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಬರಲು ಸಹ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ

ವಿಜಯಪುರದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ತಿನಿಸಿದ ಲಡ್ಡನ್ನು ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಸಿಎಂ ಆಗಿ ದಾಖಲೆ ಹಿನ್ನೆಲೆಯಲ್ಲಿ ಈ ಸನ್ಮಾನ ನಡೆಯುತ್ತಿತ್ತು. ಈ ವೇಳೆ ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ಮಾಡಿದ ಲಡ್ಡುವನ್ನು ನೀಡಿದ್ದರು. ನಂತರ ಡಿಕೆಶಿ ನೀಡಿದ್ದರು. ವಿಡಿಯೋ ಇಲ್ಲಿದೆ ನೋಡಿ.

ಮಗನಿಗೆ ಚಳಿಯಾಗುತ್ತೆ! ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ತಾಯಿ

ಜಮ್ಮುವಿನ ರಣಬೀರ್ ಸಿಂಗ್ ಪುರದ ಜಸ್ವಂತ್ ಕೌರ್ ತನ್ನ ಹುತಾತ್ಮ ಮಗ ಬಿಎಸ್‌ಎಫ್ ಕಾನ್‌ಸ್ಟೆಬಲ್ ಗುರ್ನಮ್ ಸಿಂಗ್ ಪ್ರತಿಮೆಯನ್ನು ತನ್ನ ಜೀವಂತ ಮಗುವಿನಂತೆ ನೋಡಿಕೊಳ್ಳುತ್ತಾರೆ. ತೀವ್ರ ಚಳಿಗಾಲದ ನಡುವೆ ಆ ತಾಯಿ ತನ್ನ ಮಗನ ಪ್ರತಿಮೆಯನ್ನು ಕಂಬಳಿಯಿಂದ ಸುತ್ತಿದರು. ಈ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ತಡರಾತ್ರಿ ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್!

ತಮಿಳುನಾಡಿನ ಮಹಿಳೆಯೊಬ್ಬರು ತಡರಾತ್ರಿ 3 ಪ್ಯಾಕೆಟ್ ಇಲಿ ಪಾಷಾಣ ಆರ್ಡರ್ ಮಾಡಿದ್ದರು. ಆದರೆ, ಇಷ್ಟು ರಾತ್ರಿ ವೇಳೆ ಇಲಿ ಪಾಷಾಣ ಆರ್ಡರ್ ಮಾಡಿದ್ದರಿಂದ ಅನುಮಾನಗೊಂಡ ಬ್ಲಿಂಕಿಟ್ ಡೆಲಿವರಿ ಬಾಯ್ ಆ ಆರ್ಡರ್ ಅನ್ನು ಡೆಲಿವರಿ ಮಾಡಲು ನಿರಾಕರಿಸಿದರು. ಇದರಿಂದ ಆ ಮಹಿಳೆಯ ಜೀವ ಉಳಿದಿದೆ. ಅಷ್ಟಕ್ಕೂ ಆಕೆ ಇಲಿ ಪಾಷಾಣ ಆರ್ಡರ್ ಮಾಡಿದ್ದೇಕೆ? ರಾತ್ರೋರಾತ್ರಿ ಡೆಲಿವರಿ ಬಾಯ್ ಹೀರೋ ಆಗಿದ್ದು ಹೇಗೆ? ಎಂಬುದರ ಮಾಹಿತಿ ಇಲ್ಲಿದೆ.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಜಲಂಧರ್​​ನ ಜನವಸತಿ ಪ್ರದೇಶಕ್ಕೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯಿಂದ ಬಹಳ ಕಷ್ಟಪಟ್ಟು ಹಿಡಿದು, ವಾಪಾಸ್ ಕಾಡಿಗೆ ಬಿಟ್ಟಿದ್ದಾರೆ. ಜಲಂಧರ್‌ನ ಆದಂಪುರ್‌ನ ಜನವಸತಿ ಪ್ರದೇಶಕ್ಕೆ ಜಿಂಕೆ ಇದ್ದಕ್ಕಿದ್ದಂತೆ ಬಂದಾಗ ಜನರು ಭಯಭೀತರಾದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಸಹಾಯದಿಂದ ಆ ಜಿಂಕೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್

ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು.

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಈ ಸಾಕು ಗಿಳಿಯೂ ಮನೆಯೊಡತಿ ಜತೆಗೆ ನಡೆಸಿದ ಸಂಭಾಷಣೆ ಸದ್ಯ ವೈರಲ್ ಆಗಿದೆ. ಮನೆಯ ಮುದ್ದಿನ ಸಾಕು ಗಿಳಿಯೂ ತನ್ನ ಮನೆಯೊಡತಿಗೆ ಬೆದರಿಕೆ ಹಾಕಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!

ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ನೆಂಟರ ಮನೆಗೆ ಹೋಗಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಅಡುಗೆಮನೆಯ ಎಕ್ಸಾಸ್ಟ್ ಫ್ಯಾನ್‌ನ ರಂಧ್ರದಲ್ಲಿ ಕಳ್ಳ ನೇತಾಡುತ್ತಿರುವುದು ಕಂಡುಬಂದಿದೆ. ಒಬ್ಬ ಕಳ್ಳ ಎಕ್ಸಾಸ್ಟ್ ಫ್ಯಾನ್ ರಂಧ್ರದ ಮೂಲಕ ಅವರ ಮನೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದರಿಂದ ಹೊರಬರಲಾಗದೆ ಆತ ಗೋಡೆಯಲ್ಲೇ ಸಿಕ್ಕಿಹಾಕಿಕೊಂಡ. ಅಷ್ಟರಲ್ಲಿ ಮನೆಗೆ ಬಂದ ದಂಪತಿಗೆ ಗೋಡೆಯಲ್ಲಿ ಕಳ್ಳನ ಅರ್ಧ ದೇಹ ಕಂಡು ಶಾಕ್ ಆಯಿತು. ಆಮೇಲೇನಾಯ್ತು? ಎಂಬುದಕ್ಕೆ ಈ ವಿಡಿಯೋ ನೋಡಿ. 

Video: ಅಜ್ಜಿಗೆ ವಿಡಿಯೋ ಕಾಲ್ ಮಾಡುವುದನ್ನು ಹೇಳಿಕೊಟ್ಟ ಮೊಮ್ಮಗಳು

ಹಿರಿಜೀವಗಳು ಮನೆಯಲ್ಲಿ ತಮ್ಮ ಬದುಕಿನ ಅನುಭವಗಳನ್ನು ಮೊಮ್ಮಕ್ಕಳಿಗೆ ಹೇಳುತ್ತಾರೆ. ಇತ್ತ ಮೊಮ್ಮಗಳು ಕೂಡ ಹಿರಿಜೀವಗಳಿಗೆ ಗೊತ್ತಿಲ್ಲದ ಅದೆಷ್ಟೋ ವಿಷಯಗಳನ್ನು ಕಲಿಸಿ ಕೊಡುವುದಿದೆ. ಈ ವಿಡಿಯೋ ಅಜ್ಜಿ ಮೊಮ್ಮಗಳ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ. ಅಜ್ಜಿಗೆ ವಿಡಿಯೋ ಕಾಲ್ ಮಾಡುವುದನ್ನು ಹೇಗೆಂದು ಮೊಮ್ಮಗಳು ಕಲಿಸಿ ಕೊಡುತ್ತಿರುವ ದೃಶ್ಯ ಇದಾಗಿದೆ. ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆದಿದೆ.

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ನಗರದಾದ್ಯಂತ ಚಳಿಗಾಲದ ಪರಿಸ್ಥಿತಿಗಳು ತೀವ್ರಗೊಂಡಂತೆ ಚಂಡೀಗಢವು ದಟ್ಟವಾದ ಮಂಜಿನೊಂದಿಗೆ ತೀವ್ರವಾದ ಶೀತ ಅಲೆಯನ್ನು ಕಂಡಿತು. ಜನಪ್ರಿಯ ಸುಕ್ಮಾ ಸರೋವರದ ದೃಶ್ಯಗಳು ಕಡಿಮೆ ಗೋಚರತೆ ಮತ್ತು ಚಳಿಯ ಹವಾಮಾನವು ದೈನಂದಿನ ಜೀವನ ಮತ್ತು ಬೆಳಗಿನ ಚಲನೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ತೋರಿಸುತ್ತದೆ. ತಾಪಮಾನವು ಕಡಿಮೆಯಾಗುತ್ತಲೇ ಇರುವುದರಿಂದ ಮತ್ತು ಮಂಜಿನ ಪರಿಸ್ಥಿತಿಗಳು ಮುಂದುವರಿದಿರುವುದರಿಂದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ನಿವಾಸಿಗಳಿಗೆ ಸೂಚಿಸಿದ್ದಾರೆ.