
Viral Video
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,
ಹೆಂಡತಿ-ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಅಪಾಯಕಾರಿ ಸ್ಟಂಟ್, ವಿಡಿಯೋ ವೈರಲ್
ಕೆಲವರಿಗೆ ಬದುಕು ಎಂಜಾಯ್ ಮೆಂಟ್ ಆದರೆ, ಇನ್ನು ಕೆಲವರಿಗೆ ಮೂರು ಹೊತ್ತಿನ ತುತ್ತಿಗಾಗಿ ಹೋರಾಟ. ಐಷಾರಾಮಿ ಬದುಕು ಬಿಡಿ, ಹೊಟ್ಟೆ ತುಂಬಿಸಿಕೊಳ್ಳುವ ಸಲುವಾಗಿ ಜನರು ಮಾಡುವ ಕೆಲವು ಕೆಲಸಗಳನ್ನು ಕಂಡಾಗ ಕರುಳು ಚುರ್ ಎನ್ನುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ತನ್ನ ಹೆಂಡತಿ ಹಾಗೂ ಮೂವರು ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಎಲ್ಲರನ್ನು ರಂಜಿಸುತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರ ಕರುಳು ಚುರ್ ಎಂದಿದ್ದು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.
- Sainandha P
- Updated on: Apr 30, 2025
- 5:01 pm
ಚಲಿಸುತ್ತಿದ್ದ ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ರಸ್ತೆಗೆ ಬಿದ್ದ ಯುವಕ; ವಿಡಿಯೋ ವೈರಲ್
ಇತ್ತೀಚೆಗಿನ ದಿನಗಳಲ್ಲಿ ವಿಡಿಯೋ ಮತ್ತು ರೀಲ್ಸ್ ಮಾಡುವುದು ಟ್ರೆಂಡ್ ಆಗಿ ಬಿಟ್ಟಿದೆ. ಹೌದು ಫೇಮಸ್ ಆಗುವ ಸಲುವಾಗಿ ಕೆಲವರು ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕನು ಚಲಿಸುತ್ತಿದ್ದ ಬೈಕ್ ಮೇಲೆ ನಿಂತುಕೊಂಡು ಸ್ಟಂಟ್ ಮಾಡುತ್ತಿದ್ದು, ಆದರೆ ಕೊನೆಗೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ಅಪಾಯಕಾರಿ ಸ್ಟಂಟ್ ವಿಡಿಯೋ ನೋಡಿದ ನೆಟ್ಟಿಗರು ಈ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Sainandha P
- Updated on: Apr 30, 2025
- 12:22 pm
Viral : ಮಾಲ್ನಲ್ಲಿ ಭೀಕರ ಅಗ್ನಿ ಅವಘಡ, ತುರ್ತು ನಿರ್ಗಮನ ಮಾರ್ಗವಿಲ್ಲದೆ ಕಿಟಕಿಯಲ್ಲಿ ನೇತಾಡಿದ ಜನ
ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈ ವೇಳೆಯಲ್ಲಿ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಓಡಾಡುವುದಿದೆ. ಇಂತಹ ಅದೆಷ್ಟೋ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದಿದೆ. ಇದೀಗ ಬಹುಮಹಡಿಯ ಕಟ್ಟಡಕ್ಕೆ ಬೆಂಕಿ ಹೊತ್ತಿ ಕೊಂಡಿದ್ದು, ಈ ವೇಳೆಯಲ್ಲಿ ಜೀವ ಉಳಿಸಿಕೊಳ್ಳುವ ಸಲುವಾಗಿ ಕಿಟಕಿ ಹಿಡಿದು ವ್ಯಕ್ತಿಗಳು ನೇತಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಈ ದೃಶ್ಯ ನೋಡಿ ಆತಂಕಗೊಂಡಿದ್ದಾರೆ.
- Sainandha P
- Updated on: Apr 30, 2025
- 10:34 am
ದಾವಣಗೆರೆ: ಹಿಡಿಯುವಾಗ ಕೊರಳಿಗೆ ಸುತ್ತಿಕೊಂಡ ಕೇರೆ ಹಾವು! ಆಮೇಲೇನಾಯ್ತು? ವಿಡಿಯೋ ನೋಡಿ
ದಾವಣಗೆರೆಯ ಸ್ನೇಕ್ ಬಸಣ್ಣ ಹಾವು ಹಿಡಿಯವುದರಲ್ಲಿ ಎಕ್ಸ್ಪರ್ಟ್. ಆಗಾಗ ಅಲ್ಲಲ್ಲಿ ಹಾವು ಹಿಡಿದು ರಕ್ಷಣೆ ಮಾಡಿ ಕಾಡಿಗೆ ಬಿಡುತ್ತಾರೆ. ಆದರೆ, ಚಾಲಾಕಿ ಹಾವೊಂದು ಅವರನ್ನೇ ಯಾಮಾರಿಸಿದೆ. ಹಿಡಿಯುವ ಸಂದರ್ಭದಲ್ಲಿ ಅವರ ಕೊರಳನ್ನೇ ಸುತ್ತಿಕೊಂಡು ಭೀತಿ ಹುಟ್ಟಿಸಿದೆ. ಕೊನೆಗೆ ಅವರು ಅದ್ಹೇಗೋ ಹಾವಿನ ಕುಣಿಕೆಯಿಂದ ಬಚಾವಾಗಿ ಅದನ್ನು ಸೆರೆಹಿಡಿದಿದ್ದಾರೆ. ವಿಡಿಯೋ ಇಲ್ಲಿದೆ.
- Basavaraj Doddamani
- Updated on: Apr 30, 2025
- 10:03 am
ಕಳ್ಳನ ಕರಾಮತ್ತು: ಭಕ್ತಿಯಿಂದ ನಮಸ್ಕರಿಸಿ ಕೊರಗಜ್ಜನ ಕಟ್ಟೆ ಕಾಣಿಕೆ ಹುಂಡಿ ಕದ್ದೊಯ್ದ ಖದೀಮ
ಖದೀಮನೊಬ್ಬ ಕಾರಣಿಕ ದೈವ ಕೊರಗಜ್ಜನ ಕಟ್ಟೆಗೆ ಸುತ್ತು ಬಂದು ಕೊರಗಜ್ಜನಿಗೆ ನಮಸ್ಕರಿಸಿ ಅಲ್ಲಿದ್ದ ಹುಂಡಿಯನ್ನೇ ಹೊತ್ತೊಯ್ದ ಘಟನೆ ಮಂಗಳೂರು ನಗರದ ಮೇರಿಹಿಲ್ನಲ್ಲಿ ನಡೆದಿದೆ. ಸುತ್ತಮುತ್ತ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಖದೀಮ ಕಾಣಿಕೆ ಹುಂಡಿಗೆ ಕನ್ನ ಹಾಕಿದ್ದಾನೆ. ಆತ ಹುಂಡಿಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.
- Ashok
- Updated on: Apr 30, 2025
- 8:12 am
ಮೆಟ್ರೋ ನಿಲ್ದಾಣದಲ್ಲಿ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ
ಬಸ್ಸು, ರೈಲು, ಮೆಟ್ರೋಗಳಲ್ಲಿ ಪ್ರೇಮಿಗಳ ರೋಮ್ಯಾನ್ಸ್ ಸೇರಿದಂತೆ ಇನ್ನಿತರ ವಿಚಾರಗಳಿಂದ ಸುದ್ದಿಯಾಗುವುದೇ ಹೆಚ್ಚು. ಅದರಲ್ಲಿಯೂ ಈ ಸೋಶಿಯಲ್ ಮೀಡಿಯಾದಲ್ಲಿ ಪ್ರೇಮಿಗಳಿಗೆ ಸಂಬಂಧಿಸಿದ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೋರ್ವ ತನ್ನ ಪ್ರೇಯಸಿಯ ಪಾದಗಳನ್ನು ಸ್ಪರ್ಶಿಸಿ ನಮಸ್ಕರಿಸಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.
- Sainandha P
- Updated on: Apr 29, 2025
- 5:49 pm
Viral : ಕನ್ನಡ ಭಾಷೆ ಗೊತ್ತಿಲ್ಲ, ಚಾಟ್ ಜಿಪಿಟಿ ಬಳಸಿ ಆಟೋ ಚಾಲಕನ ಜೊತೆಗೆ ಚೌಕಾಸಿ ಮಾಡಿದ ಯುವಕ
ಇಂದಿನ ಯುವಜನತೆ ಬಹಳ ಬುದ್ಧಿವಂತರು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಷ್ಟು ನಿಪುಣರಾಗಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಕನ್ನಡ ಭಾಷೆ ಮಾತಾನಾಡಲು ಬಾರದ ಯುವಕನೊಬ್ಬನು ಚಾಟ್ ಜಿಪಿಟಿ ಬಳಸಿ ಆಟೋ ಚಾಲಕನ ಜೊತೆಗೆ ಚೌಕಾಸಿ ಮಾಡಿದ್ದಾನೆ. ಹೌದು, ಬೆಂಗಳೂರಿನಲ್ಲಿ ಯುವಕನೊಬ್ಬನು ಚಾಟ್ ಜಿಪಿಟಿ ಬಳಸಿ ಸಂವಹನ ನಡೆಸಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈತನ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.
- Sainandha P
- Updated on: Apr 29, 2025
- 4:39 pm
ಅಮೆರಿಕದ ಕೃಷ್ಣ ಮಂದಿರದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕಾದ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ ಈ ವೇಳೆ ಕಾರ್ಯಕ್ರಮ ಸಂಯೋಜಕರ ಬಳಿ ಮಾಹಿತಿ ಪಡೆದು ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಉಡುಪಿಯ ಶ್ರೀ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರ ಅಮೆರಿಕದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಶಿ, ನಕ್ಷತ್ರಗಳನ್ನು ಹೇಳಿ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಪೂಜೆ ಸಲ್ಲಿಸಿದ್ದಾರೆ.
- Prajwal Amin
- Updated on: Apr 29, 2025
- 3:10 pm
ಅಂಧ ವ್ಯಕ್ತಿಯ ಗಾಯನಕ್ಕೆ ಮನಸೋತ ರೈಲ್ವೆ ಸಹಪ್ರಯಾಣಿಕರು, ವಿಡಿಯೋ ವೈರಲ್
ಅಂಗವಿಕಲತೆ ದೇಹಕ್ಕೆ ಸಂಬಂಧಿಸಿದ್ದು ಮನಸ್ಸಿಗೆ ಅಲ್ಲವೇ ಅಲ್ಲ, ನಮ್ಮ ಬಳಿ ಏನು ಇದ್ದರೂ, ಇಲ್ಲದಿದ್ದರೂ, ನಮಗೆಂದು ಇರುವ ನಾಲ್ಕು ದಿನವನ್ನು ಸಂತೋಷದಿಂದ ಕಳೆಯಬೇಕು. ಇದಕ್ಕೆ ಇಲ್ಲೊಬ್ಬರು ಅಂಧ ವ್ಯಕ್ತಿಯೂ ಉದಾಹರಣೆಯಂತಿದ್ದಾರೆ. ಕಣ್ಣಿಲ್ಲದೇ ಇದ್ದರೂ ರೈಲಿನಲ್ಲಿ ಪ್ರಯಾಣಿಸುತ್ತಾ ತನ್ನ ಅದ್ಭುತ ಕಂಠದಿಂದ ಹಿಂದಿ ಹಾಡನ್ನು ಹಾಡಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.
- Sainandha P
- Updated on: Apr 29, 2025
- 2:38 pm
ಚಿನ್ನ ಕರಗಿಸಿ ಹಣವನ್ನು ನೇರ ಖಾತೆಗೆ ಜಮಾ ಮಾಡುತ್ತೆ ಗೋಲ್ಡ್ ಎಟಿಎಂ ಮೆಷಿನ್
ಹಣದ ಸಮಸ್ಯೆ ಎಂದ ಕೂಡಲೇ ಮೊದಲು ನೆನಪಾಗುವುದೇ ಈ ಚಿನ್ನ. ಹೌದು ಚಿನ್ನವನ್ನು ಬ್ಯಾಂಕ್ ಅಥವಾ ಸೊಸೈಟಿಯಲ್ಲಿ ಗಿರವಿ ಇಟ್ಟು ಹಣವನ್ನು ಹೊಂದಿಸಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಬ್ಯಾಂಕ್ ಗೆ ಹೋಗಿ ಎಷ್ಟೋ ಹೊತ್ತು ಕಾಯಬೇಕಾಗುತ್ತದೆ. ಆದರೆ ಚೀನಾದಲ್ಲಿ ಹೊಸ ಟೆಕ್ನಾಲಜಿಯೊಂದು ಬಂದಿದ್ದು, ಚಿನ್ನ ಗಿರವಿ ಇಟ್ಟು ಹಣ ಪಡೆಯಲು ಬ್ಯಾಂಕ್ ಗೆ ಅಲೆಯಬೇಕಾಗಿಲ್ಲ. ಈ ಮೆಷಿನ್ ಯೊಳಗೆ ಚಿನ್ನವಿಟ್ಟರೆ, ಅದಕ್ಕೆ ಸರಿಸಮಾನವಾದ ಮೊತ್ತವು ನೇರವಾಗಿ ಬ್ಯಾಂಕ್ ಖಾತೆಗೆ ಬಂದು ಸೇರುತ್ತದೆ. ಹೌದು, ಚಿನ್ನ ಕರಗಿಸಿ ಹಣ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಯಂತ್ರದ ವಿಡಿಯೋವೊಂದು ವೈರಲ್ ಆಗಿದೆ.
- Sainandha P
- Updated on: Apr 29, 2025
- 11:00 am