AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

Video: ನಾನೂ ಬರ್ತೀನಿ ಕಂಡ್ರೋ… ಮಕ್ಕಳೊಂದಿಗೆ ಮಗುವಾಗಿ ಆಟವಾಡಿದ ಶ್ವಾನ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ಮನಸ್ಸಿಗೆ ಬಹಳನೇ ಹತ್ತಿರವಾಗುತ್ತವೆ. ಅದರಲ್ಲೂ ಪ್ರಾಣಿಗಳಿಗೆ ಸಂಬಂಧಿಸಿದ ಮುದ್ದು ಮುದ್ದಾದ ವಿಡಿಯೋಗಳು ಎಲ್ಲರಿಗೂ ಇಷ್ಟವಾಗುತ್ತದೆ. ಅಂತಹದ್ದೊಂದು ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಶ್ವಾನವೊಂದು ಪುಟಾಣಿ ಮಕ್ಕಳ ಜೊತೆ ಸೇರಿ ತಾನು ಮಗುವಿನಂತೆ ಆಟವಾಡುವ ದೃಶ್ಯ ನೋಡುಗರ ಮನ ಗೆದ್ದಿದೆ.

Video: ವಿಮಾನ ಅಪಘಾತದಲ್ಲಿ ಎಲ್ಲವೂ ಸುಟ್ಟು ಕರಕಲಾದರೂ ಭಗವದ್ಗೀತೆಗೆ ಏನು ಆಗಿಲ್ಲ ನೋಡಿ

ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಗುರುವಾರ ಪತನಗೊಂಡಿದೆ. ಈ ದುರಂತಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ವಿಮಾನ ದುರಂತ ನಡೆದ ಸ್ಥಳಕ್ಕೆ ಸಂಬಂಧಪಟ್ಟ ದೃಶ್ಯ ಎನ್ನಲಾಗುತ್ತಿರುವ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಅಪಘಾತದಲ್ಲಿ ಎಲ್ಲವೂ ಸುಟ್ಟುಕರಕಲಾದರೂ, ಆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಪತ್ತೆಯಾಗಿದೆ. ಈ ದೃಶ್ಯವನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

Video: ಪ್ರಾಮಾಣಿಕತೆಗೆ ಈ ಹಳ್ಳಿ ಹೆಸರುವಾಸಿ, ಇಲ್ಲಿ ಅಂಗಡಿಗಳಿಗೆ ಮಾಲೀಕರೇ ಇಲ್ಲ

ಮನೆಗಳಿಗೆ ಹಾಗೂ ಅಂಗಡಿಗಳಿಗೆ ಸಿಸಿಟಿವಿ ಅಳವಡಿಸುವ ಮೂಲಕ ಎಷ್ಟೇ ಬಿಗಿ ಭದ್ರತೆ ಒದಗಿಸಿದರೂ ಕೂಡ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತದೆ. ಇಂತಹ ಸುದ್ದಿಗಳನ್ನು ಆಗಾಗ ಕೇಳುತ್ತಿರುತ್ತೀರಿ. ಆದರೆ ಭಾರತದ ಈ ಗ್ರಾಮದಲ್ಲಿ ಅಂಗಡಿಗೆ ಬಿಗಿ ಭದ್ರತೆಯಿಲ್ಲ, ಮಾಲೀಕರು ಇರುವುದೇ ಇಲ್ಲವಂತೆ. ಆದರೂ ಕೂಡ ಇಲ್ಲಿಯವರೆಗೆ ಒಂದೇ ಒಂದು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ. ಈ ಕುರಿತಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಾಗಾದ್ರೆ ಗ್ರಾಮ ಇರುವುದು ಎಲ್ಲಿ, ಈ ಗ್ರಾಮದ ವಿಶೇಷತೆಯೇನು? ಎನ್ನುವ ಕುರಿತಾದ ಮಾಹಿತಿ ಇಲ್ಲಿದೆ.

Video: ಮರದ ಬುಡದಿಂದ ಚಿಮ್ಮಿದ ನೀರು, ದೈವಿಕ ಮರ ಎಂದ ಸ್ಥಳೀಯರು, ಅಸಲಿ ವಿಚಾರ ಇಲ್ಲಿದೆ ನೋಡಿ

ಕೆಲವರು ಎಲ್ಲವನ್ನು ಕಣ್ಣು ಮುಚ್ಚಿ ನಂಬಿಬಿಡುತ್ತಾರೆ. ಅದರ ಹಿಂದಿನ ಸತ್ಯಾಸತ್ಯತೆಯೇನು ಎನ್ನುವ ಬಗ್ಗೆ ಒಂದು ಕ್ಷಣ ಯೋಚಿಸುವುದೇ ಇಲ್ಲ. ಪುಣೆಯಲ್ಲೊಂದು ಕಡೆ ಗುಲ್ ಮೊಹರ್ ಮರದಿಂದ ನೀರು ಚಿಮ್ಮುತ್ತಿದ್ದು, ಇಲ್ಲಿನ ಸ್ಥಳೀಯ ನಿವಾಸಿಗಳು ದೈವಿಕ ಶಕ್ತಿಯುಳ್ಳ ಮರವೆಂದು ಭಾವಿಸಿ, ಪೂಜಿಸುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಇದರ ಅಸಲಿ ವಿಚಾರವು ಬೇರೇನೇ ಇದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

Video : ಕನ್ನಡದಲ್ಲಿ ಪ್ರಶ್ನೆ ಕೇಳಿ : ತೆಲುಗು ಸಂದರ್ಶಕನಿಗೆ ಬುದ್ಧಿ ಹೇಳಿದ ಬೆಂಗಳೂರಿನ ಯುವತಿ

ಕರ್ನಾಟಕದಲ್ಲಿ ಕನ್ನಡ ಭಾಷೆ ಮಾತನಾಡಿ ಕನ್ನಡ ಭಾಷೆ ಉಳಿಸಿ ಬೆಳೆಸಿ ಎನ್ನುವ ಕೂಗು ಕೇಳಿ ಬರುತ್ತಿದೆ. ಇದೇ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ರಾಯಲ್ ಚಾಲೆಂಜರ್ಸ್ ತಂಡದ ಗೆಲುವಿನ ಬಗ್ಗೆ ಬೆಂಗಳೂರಿನ ಯುವತಿಯ ಬಳಿ ಸಂದರ್ಶಕರೊಬ್ಬರು ತೆಲುಗಿನಲ್ಲಿ ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆಗಿದ್ದು ತರಾಟೆಗೆ ತೆಗೆದುಕೊಂಡಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Video : ತುತ್ತನಿಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕಣ್ಣೀರ ವಿದಾಯ ಹೇಳಿದ ಕೋತಿ

ಸ್ವಾರ್ಥ ತುಂಬಿದ ಮನುಷ್ಯನ ಪ್ರೀತಿಗಿಂತ ಮೂಕ ಪ್ರಾಣಿಗಳ ಪ್ರೀತಿಯೇ ಮೇಲು. ಹೀಗಾಗಿ ಎಷ್ಟೋ ಜನರು ಈ ಪ್ರಾಣಿಗಳ ಜೊತೆಗೆ ಒಡನಾಟ ಬೆಳೆಸಿಕೊಂಡಿರುತ್ತಾರೆ. ಆದರೆ ಇದೀಗ ಕೋತಿಯೊಂದು ತನಗೆ ತುತ್ತು ಅನ್ನ ನೀಡಿದ ಹಸಿವು ನೀಗಿಸಿದ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕಣ್ಣೀರ ವಿದಾಯ ಹೇಳಿದ್ದು, ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ಪ್ರಾಣಿಗಳ ಪ್ರೀತಿ ಪರಿಶುದ್ಧವಾದದ್ದು ಎಂದಿದ್ದಾರೆ.

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ

ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಧ್ವಜವಿದ್ದ ಕಂಟೇನರ್ ಹಡಗಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 4 ಮಂದಿ ಕಾಣೆಯಾಗಿದ್ದಾರೆ. ಇಂದು ಕೇರಳ ಕರಾವಳಿಯಲ್ಲಿ ಕಂಟೇನರ್ ಸ್ಫೋಟದ ನಂತರ ಸಿಂಗಾಪುರ ಮೂಲದ ನಡೆಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಈ ದೃಶ್ಯವನ್ನು ವಿಮಾನದಲ್ಲಿ ತೆರಳುತ್ತಿದ್ದವರು ರೆಕಾರ್ಡ್ ಮಾಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದೆ ಎಂದು ನೌಕಾಪಡೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Video : ಈ ಕಣ್ಣಲ್ಲಿ ಇನ್ನು ಏನೇನ್ ನೋಡ್ಬೇಕೋ; ಮೊಮೊಸ್ ಬಿರಿಯಾನಿ ಆಯ್ತು, ಇದೀಗ ಲಿಚಿ ಮೊಮೊಸ್ ಅಂತೆ

ಇತ್ತೀಚಿನ ದಿನಗಳಲ್ಲಿ ವಿಯರ್ಡ್ ಕಾಂಬಿನೇಷನ್ ಫುಡ್ ಬಹಳನೇ ಟ್ರೆಂಡ್ ಆಗಿದೆ. ಐಸ್ ಕ್ರೀಮ್ ರೋಲ್, ಒರಿಯೊ ಬಜ್ಜಿ, ಮಸಾಲೆ ದೋಸೆ ಐಸ್ ಕ್ರೀಮ್, ಗುಲಾಬ್ ಜಾಮೂನ್ ದೋಸೆ ಹೀಗೆ ವಿಲಕ್ಷಣ ಆಹಾರಗಳ ಕುರಿತಾದ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವ್ಯಕ್ತಿಯೊಬ್ಬರು ಮಾಡಿದ ಲಿಚಿ ಮೊಮೊಸ್ ಆಹಾರ ಪ್ರಿಯರ ಗಮನ ಸೆಳೆದಿದೆ. ಬಳಕೆದಾರರು ವ್ಯಕ್ತಿಯೂ ಈ ವಿಚಿತ್ರ ಆಹಾರ ತಯಾರಿಸಿರುವುದನ್ನು ನೋಡಿ ಗರಂ ಆಗಿದ್ದಾರೆ.

Video : ಕಾಶ್ಮೀರದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌​​​​ನಲ್ಲಿ ಮಗನ ಹುಟ್ಟುಹಬ್ಬ ಆಚರಿಸಿದ ದಂಪತಿ

ಪ್ರತಿಯೊಬ್ಬ ತಂದೆ ತಾಯಂದಿರು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಬಯಸುತ್ತಾರೆ. ಆದರೆ ಇದೀಗ ವಾರಣಾಸಿ ದಂಪತಿಗಳಿಬ್ಬರೂ ತಮ್ಮ ಮಗನ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸುವ ಮೂಲಕ ಸುದ್ದಿಯಾಗಿದ್ದಾರೆ. ಹೌದು, ದಂಪತಿಗಳು ಕಾಶ್ಮೀರದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ತಮ್ಮ ಮಗನ ಜನ್ಮದಿನವನ್ನು ಆಚರಿಸುವ ಮೂಲಕ ಆ ಕ್ಷಣವನ್ನು ಸ್ಮರಣೀಯವಾಗಿಸಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

Video : ಎಷ್ಟು ಸುಂದರ ಕ್ಷಣವಿದು : ಪತ್ನಿಯ ಗೆಲುವಿನ ಕ್ಷಣವನ್ನು ಸಂಭ್ರಮಿಸಿದ ಪತಿ

ಮದುವೆಯಾದ ಬಳಿಕ ಹೆಣ್ಣು ಮಕ್ಕಳು ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಗಂಡ ಮನೆ ಮಕ್ಕಳು ಎಂದು ತನ್ನ ಕುಟುಂಬಕ್ಕಾಗಿ ತನ್ನ ಆಸೆ ಆಕಾಂಕ್ಷೆಗಳನ್ನು ತ್ಯಜಿಸಬೇಕಾಗುತ್ತದೆ. ಆದರೆ ತನ್ನ ಕನಸುಗಳಿಗೆ ಬೆಂಬಲ ನೀಡುವ ಪತಿ ಸಿಕ್ಕರೆ ಆಕೆಯಷ್ಟು ಅದೃಷ್ಟವಂತೆ ಬೇರೆ ಯಾರು ಇಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪತ್ನಿ ವೇದಿಕೆಯ ಮೇಲೆ ಗೆಲುವಿನ ಕಿರೀಟ ಅಲಂಕರಿಸಿದರೆ ಪತಿ ಸಿಳ್ಳೆ ಹೊಡೆದು ಆ ಕ್ಷಣವನ್ನು ಸಂಭ್ರಮಿಸಿರುವ ವಿಡಿಯೋವೊಂದು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ