AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli

Virat Kohli

ಟೀಂ ಇಂಡಿಯಾವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ ನಾಯಕರ ಪೈಕಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಹೆಸರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಕೊಹ್ಲಿ ನಾಯಕತ್ವದಲ್ಲಿ ತಂಡ ಯಾವುದೇ ಐಸಿಸಿ ಟ್ರೋಫಿ ಗೆಲ್ಲದಿರಬಹುದು. ಆದರೆ ಅವರ ನಾಯಕತ್ವದಲ್ಲಿ ಭಾರತ ತಂಡ ಮೂರು ಮಾದರಿಯ ಕ್ರಿಕೆಟ್​ನ ಐಸಿಸಿ ರ್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನಕ್ಕೇರಿತ್ತು. ತಂಡದ ಪರ ಇದುವರೆಗೆ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 27 ಶತಕ, 7 ಅರ್ಧಶತಕ ಹಾಗೂ 30 ಅರ್ಧಶತಕ ಸೇರಿದಂತೆ ಒಟ್ಟು 8848 ರನ್ ಸಿಡಿಸಿದ್ದಾರೆ. ಹಾಗೆಯೇ ಏಕದಿನದಲ್ಲಿ 292 ಪಂದ್ಯಗಳನ್ನಾಡಿರುವ ವಿರಾಟ್ 50 ಶತಕ ಹಾಗೂ 72 ಅರ್ಧಶತಕ ಒಳಗೊಂಡಂತೆ 13838 ರನ್ ಕಲೆಹಾಕಿದ್ದರು. ಟಿ20 ಕ್ರಿಕೆಟ್​ನಲ್ಲೂ ಛಾಪು ಮೂಡಿಸಿರುವ ವಿರಾಟ್ 117 ಪಂದ್ಯಗಳಲ್ಲಿ 1 ಹಾಗೂ 37 ಅರ್ಧಶತಕ ಸೇರಿದಂತೆ 4037 ರನ್ ಕಲೆಹಾಕಿದ್ದಾರೆ. ಐಪಿಎಲ್​ನಲ್ಲೂ ತನ್ನ ಪಾರುಪತ್ಯ ಸೃಷ್ಟಿಸಿರುವ ವಿರಾಟ್ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದು, ಇಲ್ಲಿಯವರೆಗೆ 237 ಪಂದ್ಯಗಳನ್ನಾಡಿದ್ದು, 7 ಶತಕ ಹಾಗೂ 50 ಅರ್ಧಶತಕ ಸೇರಿದಂತೆ 7263 ರನ್ ಕಲೆಹಾಕಿದ್ದಾರೆ.

ಇನ್ನೂ ಹೆಚ್ಚು ಓದಿ

ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್

Virat Kohli: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸಿ 'ಕೊಹ್ಲಿ.. ಕೊಹ್ಲಿ..' ಎಂದು ಘೋಷಣೆ ಕೂಗಿ ಅವರನ್ನು ಮುತ್ತಿದರು. ಇದರಿಂದ ಕೊಹ್ಲಿ ತಮ್ಮ ಕಾರು ತಲುಪಲು ಹರಸಾಹಸ ಪಡಬೇಕಾಯಿತು. ಭದ್ರತಾ ಸಿಬ್ಬಂದಿಗಳು ಜನಸಂದಣಿಯನ್ನು ನಿಯಂತ್ರಿಸಲು ಶ್ರಮಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೈಲ್ವೇಸ್ ವಿರುದ್ಧ ಕಣಕ್ಕಿಳಿಯದ ವಿರಾಟ್ ಕೊಹ್ಲಿ

Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದರು. ಆದರೆ ಈ ನಿರ್ಧಾರದಿಂದ ಕಿಂಗ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಏಕದಿನ ಸರಣಿ.

IND vs NZ: ಸೆಹ್ವಾಗ್, ಪಾಂಟಿಂಗ್ ದಾಖಲೆ ಪುಡಿಗಟ್ಟಲು ಕಿಂಗ್ ಕೊಹ್ಲಿ ತಯಾರಿ

Virat Kohli: ಜನವರಿ 11 ರಿಂದ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಆರಂಭವಾಗಲಿದೆ. ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ. ಈ ಸರಣಿಯಲ್ಲಿ ಕಿವೀಸ್ ವಿರುದ್ಧದ ಒಂದೇ ಶತಕ ಕೊಹ್ಲಿಯನ್ನು ಸಾರ್ವಕಾಲಿಕ ದಾಖಲೆದಾರನನ್ನಾಗಿ ಮಾಡಲಿದೆ. ಸೆಹ್ವಾಗ್ ಮತ್ತು ರಿಕಿ ಪಾಂಟಿಂಗ್ ದಾಖಲೆ ಮುರಿದು, ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಏಕದಿನ ಶತಕ ಸಿಡಿಸಿದ ವಿಶ್ವದ ನಂ.1 ಆಟಗಾರನಾಗಲು ಕೊಹ್ಲಿ ಸಜ್ಜಾಗಿದ್ದಾರೆ.

ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

David Warner's BBL Century: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ಪರ ಆಡುತ್ತಾ ತಮ್ಮ 9ನೇ ಟಿ20 ಶತಕ ಸಿಡಿಸಿದ್ದಾರೆ. ಈ ಭರ್ಜರಿ ಶತಕದೊಂದಿಗೆ ವಾರ್ನರ್ ರೋಹಿತ್ ಶರ್ಮಾ ಅವರ ಟಿ20 ಶತಕದ ದಾಖಲೆಯನ್ನು ಮುರಿದು ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಕ್ರಿಸ್ ಗೇಲ್ ನಂತರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರರಲ್ಲಿ ಜಂಟಿ ಎರಡನೇ ಸ್ಥಾನದಲ್ಲಿದ್ದಾರೆ.

2026 ರಲ್ಲಿ ಎಷ್ಟು ಪಂದ್ಯಗಳನ್ನಾಡಲಿದ್ದಾರೆ ರೋಹಿತ್, ಕೊಹ್ಲಿ? ಇಲ್ಲಿದೆ ಪೂರ್ಣ ವಿವರ

Team India's Rohit-Kohli ODI Schedule 2026: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾಕ್ಕೆ ಯಾವಾಗ ಮರಳುತ್ತಾರೆ ಎಂಬುದು ಅಭಿಮಾನಿಗಳ ಪ್ರಶ್ನೆ. 2026ರಲ್ಲಿ ಭಾರತ 18 ಏಕದಿನ ಪಂದ್ಯಗಳನ್ನಾಡಲಿದ್ದು, ವಿಶ್ವಕಪ್ 2027ಕ್ಕೆ ಮುನ್ನ ರೋಹಿತ್ ಮತ್ತು ವಿರಾಟ್ ಅವರಿಗೆ ಹೆಚ್ಚಿನ ಅವಕಾಶಗಳಿವೆ. 2025ರಲ್ಲಿ ಇಬ್ಬರೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 2026ರ ಸಂಪೂರ್ಣ ವೇಳಾಪಟ್ಟಿ ಮತ್ತು ಅವರ ವಿಶ್ವಕಪ್ ಸಿದ್ಧತೆಗಳ ಕುರಿತು ಇಲ್ಲಿ ವಿವರವಾದ ಮಾಹಿತಿ ಲಭ್ಯವಿದೆ.

ಬೆಂಗಳೂರಿನಲ್ಲಿ ಮತ್ತೊಂದು ಪಂದ್ಯವಾಡಲಿರುವ ವಿರಾಟ್ ಕೊಹ್ಲಿ

Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕೊಹ್ಲಿ ಈವರೆಗೆ 2 ಪಂದ್ಯಗಳನ್ನಾಡಿದ್ದಾರೆ. ಇದೀಗ ಮತ್ತೊಂದು ಮ್ಯಾಚ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ 

Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ದಾಖಲೆ ನಿರ್ಮಾಣವಾಗಿದ್ದು ದೇಶೀಯ ಅಂಗಳದಲ್ಲಿ. ಅಂದರೆ 15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ.

VHT 2025-26: ತನ್ನ ವಿಕೆಟ್ ಉರುಳಿಸಿದ ಸ್ಪಿನ್ನರ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ

Virat Kohli's Gesture: ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ 77 ರನ್ ಗಳಿಸಿ ಮಿಂಚಿದರು. ಗುಜರಾತ್‌ನ ಯುವ ಸ್ಪಿನ್ನರ್ ವಿಶಾಲ್ ಜೈಸ್ವಾಲ್ ಅವರ ಎಸೆತದಲ್ಲಿ ಕೊಹ್ಲಿ ಸ್ಟಂಪ್ ಔಟ್ ಆದರು. ಪಂದ್ಯದ ನಂತರ, ಕೊಹ್ಲಿ ವಿಶಾಲ್ ಜೈಸ್ವಾಲ್‌ರನ್ನು ಭೇಟಿಯಾಗಿ, ತಮ್ಮ ವಿಕೆಟ್ ಪಡೆದ ಚೆಂಡಿನ ಮೇಲೆ ಆಟೋಗ್ರಾಫ್ ನೀಡಿ ಅಚ್ಚರಿ ಮೂಡಿಸಿದರು. ಈ ವಿಶೇಷ ಉಡುಗೊರೆ ಕ್ರೀಡಾಮನೋಭಾವಕ್ಕೆ ಉತ್ತಮ ನಿದರ್ಶನವಾಗಿದೆ.

VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ

Virat Kohli Vijay Hazare Trophy: ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಪಂದ್ಯಗಳನ್ನು ಆಡಿ ಅಬ್ಬರಿಸಿದರು. 131 ಮತ್ತು 77 ರನ್ ಗಳಿಸಿ ತಂಡಕ್ಕೆ ಜಯ ತಂದರು. ಆದರೆ ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿ 10,000 ರೂ. ಪಡೆದದ್ದು ಅಭಿಮಾನಿಗಳ ಟೀಕೆಗೆ ಗುರಿಯಾಯಿತು. ಬಿಸಿಸಿಐನಂತಹ ಶ್ರೀಮಂತ ಮಂಡಳಿ ನೀಡುವ ಅಲ್ಪ ಮೊತ್ತದ ಬಹುಮಾನದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

VHT 2025-26: ಕೇವಲ ಬೌಂಡರಿಗಳಿಂದಲೇ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ

Virat Kohli's Vijay Hazare Trophy Dominance: ವಿಜಯ್ ಹಜಾರೆ ಟ್ರೋಫಿಗೆ 15 ವರ್ಷಗಳ ಬಳಿಕ ಮರಳಿದ ವಿರಾಟ್ ಕೊಹ್ಲಿ, ದೆಹಲಿ ಪರ ಅಬ್ಬರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರೆಸಿದರು. ಎರಡು ಪಂದ್ಯಗಳಲ್ಲಿ 208 ರನ್ ಕಲೆಹಾಕಿ, ವಿಜಯ್ ಹಜಾರೆ ಟ್ರೋಫಿಯಲ್ಲಿ 1000 ರನ್ ಗಡಿ ದಾಟಿದ್ದಾರೆ. ಕೊಹ್ಲಿಯ ಪ್ರದರ್ಶನ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ?

Virat Kohli - Rohit Sharma: ವಿಜಯ ಹಝಾರೆ ಟೂರ್ನಿಯ ದ್ವಿತೀಯ ಪಂದ್ಯಗಳು ಡಿಸೆಂಬರ್ 26 ರಂದು ನಡೆಯಲಿದೆ. ಮೊದಲ ದಿನದಂತೆ ಶುಕ್ರವಾರ ಕೂಡ 32 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ ದೆಹಲಿ ಹಾಗೂ ಮುಂಬೈ ತಂಡಗಳು ಸೇರಿವೆ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದ್ವಿತೀಯ ಪಂದ್ಯದಲ್ಲೂ ಕಣಕ್ಕಿಳಿಯುವುದು ಬಹುತೇಕ ಖಚಿತ.

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ?

Virat Kohli - Rohit Sharma: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಒಂದು ಏಕದಿನ ಅಂತಾರಾಷ್ಟ್ರೀಯ ಪಂದ್ಯವಾಡಿದರೆ ಸಿಗುವ ಸಂಭಾವನೆ ಬರೋಬ್ಬರಿ 6 ಲಕ್ಷ ರೂ. ಹಾಗೆಯೇ ಟೆಸ್ಟ್ ಮ್ಯಾಚ್​ ಆಡಿದಾಗ ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ಪಡೆಯುತ್ತಿದ್ದರು. ಇನ್ನು ಟಿ20 ಪಂದ್ಯವೊಂದರಲ್ಲಿ ಕಣಕ್ಕಿಳಿದಾಗ ಪಡೆಯುತ್ತಿದ್ದ ಸಂಭಾವನೆ 3 ಲಕ್ಷ ರೂ. ಇದೀಗ ಈ ಇಬ್ಬರು ದಿಗ್ಗಜರು ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಇಲ್ಲಿ ಪ್ರತಿ ಪಂದ್ಯಕ್ಕೆ ಸಿಗುವ ವೇತನ ಎಷ್ಟು ಎಂಬುದರ ಮಾಹಿತಿ ಈ ಕೆಳಗೆ ನೀಡಲಾಗಿದೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್