AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli

Virat Kohli

ಟೀಂ ಇಂಡಿಯಾವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ ನಾಯಕರ ಪೈಕಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಹೆಸರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಕೊಹ್ಲಿ ನಾಯಕತ್ವದಲ್ಲಿ ತಂಡ ಯಾವುದೇ ಐಸಿಸಿ ಟ್ರೋಫಿ ಗೆಲ್ಲದಿರಬಹುದು. ಆದರೆ ಅವರ ನಾಯಕತ್ವದಲ್ಲಿ ಭಾರತ ತಂಡ ಮೂರು ಮಾದರಿಯ ಕ್ರಿಕೆಟ್​ನ ಐಸಿಸಿ ರ್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನಕ್ಕೇರಿತ್ತು. ತಂಡದ ಪರ ಇದುವರೆಗೆ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 27 ಶತಕ, 7 ಅರ್ಧಶತಕ ಹಾಗೂ 30 ಅರ್ಧಶತಕ ಸೇರಿದಂತೆ ಒಟ್ಟು 8848 ರನ್ ಸಿಡಿಸಿದ್ದಾರೆ. ಹಾಗೆಯೇ ಏಕದಿನದಲ್ಲಿ 292 ಪಂದ್ಯಗಳನ್ನಾಡಿರುವ ವಿರಾಟ್ 50 ಶತಕ ಹಾಗೂ 72 ಅರ್ಧಶತಕ ಒಳಗೊಂಡಂತೆ 13838 ರನ್ ಕಲೆಹಾಕಿದ್ದರು. ಟಿ20 ಕ್ರಿಕೆಟ್​ನಲ್ಲೂ ಛಾಪು ಮೂಡಿಸಿರುವ ವಿರಾಟ್ 117 ಪಂದ್ಯಗಳಲ್ಲಿ 1 ಹಾಗೂ 37 ಅರ್ಧಶತಕ ಸೇರಿದಂತೆ 4037 ರನ್ ಕಲೆಹಾಕಿದ್ದಾರೆ. ಐಪಿಎಲ್​ನಲ್ಲೂ ತನ್ನ ಪಾರುಪತ್ಯ ಸೃಷ್ಟಿಸಿರುವ ವಿರಾಟ್ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದು, ಇಲ್ಲಿಯವರೆಗೆ 237 ಪಂದ್ಯಗಳನ್ನಾಡಿದ್ದು, 7 ಶತಕ ಹಾಗೂ 50 ಅರ್ಧಶತಕ ಸೇರಿದಂತೆ 7263 ರನ್ ಕಲೆಹಾಕಿದ್ದಾರೆ.

ಇನ್ನೂ ಹೆಚ್ಚು ಓದಿ

ಬರೋಬ್ಬರಿ 15 ವರ್ಷಗಳ ನಂತರ ಡೆಲ್ಲಿ ಪರ ಕಣಕ್ಕಿಳಿಯಲಿರುವ ಕಿಂಗ್ ಕೊಹ್ಲಿ

Virat Kohli Vijay Hazare Trophy: ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ದೆಹಲಿ ಸಂಭಾವ್ಯ ತಂಡದಲ್ಲಿ ಆಯ್ಕೆಯಾದ ಕೊಹ್ಲಿ, ರಿಷಭ್ ಪಂತ್ ಜೊತೆ ಕಣಕ್ಕಿಳಿಯಲಿದ್ದಾರೆ. 2027ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ಇದು ನಿರ್ಣಾಯಕವಾಗಿದೆ. ಇವರೊಂದಿಗೆ ರೋಹಿತ್ ಶರ್ಮಾ ಕೂಡ ಈ ದೇಶಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಇದು ದೇಶಿ ಕ್ರಿಕೆಟ್‌ಗೆ ಹೊಸ ಮೆರುಗು ನೀಡಲಿದೆ.

ರೋಹಿತ್​, ಕೊಹ್ಲಿ ಖಜಾನೆಗೆ ಕತ್ತರಿ ಹಾಕಿ, ಗಿಲ್ ಜೇಬು ತುಂಬಿಸಲು ಮುಂದಾದ ಬಿಸಿಸಿಐ

BCCI Contract: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಬಿಸಿಸಿಐ ವಾರ್ಷಿಕ ವೇತನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಟಿ20 ಹಾಗೂ ಟೆಸ್ಟ್‌ಗೆ ವಿದಾಯ ಹೇಳಿ ಕೇವಲ ಏಕದಿನ ಮಾದರಿಯಲ್ಲಿ ಆಡುತ್ತಿರುವ ಕಾರಣ ಅವರ ಗ್ರೇಡ್ ಎ+ ನಿಂದ ಎ ಗೆ ಇಳಿಯಬಹುದು. ಇತ್ತ, ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುವ ಶುಭ್​ಮನ್ ಗಿಲ್ ಎ ಗ್ರೇಡ್‌ನಿಂದ ಎ+ ಗೆ ಬಡ್ತಿ ಪಡೆಯುವ ನಿರೀಕ್ಷೆಯಿದೆ. ಡಿಸೆಂಬರ್ 22 ರ ಬಿಸಿಸಿಐ ಸಭೆಯಲ್ಲಿ ಈ ಕುರಿತು ನಿರ್ಧಾರವಾಗಲಿದೆ.

ಕೊನೆಯ 4 ಇನಿಂಗ್ಸ್​… ವಿರಾಟ್ ಕೊಹ್ಲಿಯ ದಾಖಲೆ ಮೇಲೆ ಅಭಿಷೇಕ್ ಶರ್ಮಾ ಕಣ್ಣು

India vs South Africa T20I: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಈ ಸರಣಿಯಲ್ಲಿ ಇನ್ನೂ ನಾಲ್ಕು ಮ್ಯಾಚ್​ಗಳಿವೆ. ಈ ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿಯ 9 ವರ್ಷಗಳ ಹಳೆಯ ದಾಖಲೆ ಮುರಿಯುವ ಅವಕಾಶ ಅಭಿಷೇಕ್ ಶರ್ಮಾ ಮುಂದಿದೆ.

ರೋ-ಕೊ ಜೋಡಿ ಟೀಂ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದು ಯಾವಾಗ? ದಿನಾಂಕ ಪ್ರಕಟ

Virat Kohli Rohit Sharma next match: ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಏಕದಿನ ಸರಣಿ ಗೆದ್ದಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಟಿ20 ಮತ್ತು ಟೆಸ್ಟ್‌ನಿಂದ ನಿವೃತ್ತರಾಗಿರುವ ಈ ಜೋಡಿ ಮುಂದಿನ ಸರಣಿಯಲ್ಲಿ ಯಾವಾಗ ಆಡುತ್ತಾರೆ ಎಂಬ ಕುತೂಹಲವಿದೆ. ಇವರಿಬ್ಬರು ಜನವರಿ 2026 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಅದಕ್ಕೂ ಮುನ್ನ ದೇಶೀಯ ಕ್ರಿಕೆಟ್ ಆಡುವ ಸಾಧ್ಯತೆಯಿದೆ.

ಸರಣಿ ಮುಗಿಯುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ

Virat Kohli: ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ 135 ರನ್ ಬಾರಿಸಿದ್ದ ಕಿಂಗ್ ಕೊಹ್ಲಿ ದ್ವಿತೀಯ ಪಂದ್ಯದಲ್ಲಿ 102 ರನ್ ಕಲೆಹಾಕಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಅಜೇಯ 65 ರನ್ ಸಿಡಿಸಿ ಒಟ್ಟು 302 ರನ್​ ಕಲೆಹಾಕಿದ್ದರು. ಈ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ವಿಶ್ವಕಪ್​​ಗೆ ರೋಹಿತ್, ವಿರಾಟ್ ಆಯ್ಕೆಯಾಗಲ್ವಾ? ಅಚ್ಚರಿ ಮೂಡಿಸಿದ ಗಂಭೀರ್ ಹೇಳಿಕೆ

Virat Kohli - Rohit Sharma: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದರೆ, ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದಾಗ್ಯೂ ಈ ಇಬ್ಬರು ದಿಗ್ಗಜರ ಏಕದಿನ ವಿಶ್ವಕಪ್ ಕನಸು ಅನಿಶ್ಚಿತತೆಯಿಂದ ಕೂಡಿದೆ. ಇದಕ್ಕೆ ಸಾಕ್ಷಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನೀಡಿರುವ ಹೇಳಿಕೆ.

ಅಚ್ಚರಿ ಎನಿಸಿದರೂ ಸತ್ಯ… ವಿರಾಟ್ ಕೊಹ್ಲಿ ಹೀಗೆ ಬ್ಯಾಟ್ ಬೀಸಿದ್ದು ಇದೇ ಮೊದಲು

Virat Kohli Records: ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 302 ರನ್​ ಕಲೆಹಾಕುವ ಮೂಲಕ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಇದು ಕಿಂಗ್ ಕೊಹ್ಲಿಯ 12ನೇ ಏಕದಿನ ಸರಣಿ ಶ್ರೇಷ್ಠ ಪ್ರಶಸ್ತಿ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸಚಿನ್ ತೆಂಡೂಲ್ಕರ್ (15 ಬಾರಿ) ಅತ್ಯಧಿಕ ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.

IND vs SA: ವಿರಾಟ್ ಕೊಹ್ಲಿಯ ನೋ-ಲುಕ್ ಸಿಕ್ಸ್​ಗೆ ದಂಗಾದ ಇಡೀ ಸ್ಟೇಡಿಯಂ: ವಿಡಿಯೋ ನೋಡಿ

India vs South Africa 3rd ODI: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ಮುಂದುವರಿಸಿ, ನೋ-ಲುಕ್ ಸಿಕ್ಸ್ ಬಾರಿಸಿದರು. 34 ನೇ ಓವರ್‌ನ ಕೊನೆಯ ಎಸೆತದಲ್ಲಿ, 37 ವರ್ಷದ ಕೊಹ್ಲಿ ಮುಂದೆ ಬಂದು ಬೌಲರ್ ಕಾರ್ಬಿನ್ ಬಾಷ್ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದು ಎಲ್ಲರನ್ನೂ ದಂಗಾಗಿಸಿತು.

ಗಂಭೀರ್​ನ ಕ್ಯಾರೇ ಮಾಡದ ವಿರಾಟ್ ಕೊಹ್ಲಿ: ವಿಡಿಯೋ ವೈರಲ್

Virat Kohli vs Gautam Gambhir: ವಿಶಾಖಪಟ್ಟಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 47.5 ಓವರ್​ಗಳಲ್ಲಿ 270 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 39.5 ಓವರ್​ಗಳಲ್ಲಿ ಚೇಸ್ ಮಾಡಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಕ್ರಿಕೆಟ್​ ಇತಿಹಾಸದಲ್ಲೇ ಯಾರಿಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ವಿಶಾಖಪಟ್ಟಣದಲ್ಲಿ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ. ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ಕಿಂಗ್ ಕೊಹ್ಲಿ ಮೂರು ಶತಕ ಬಾರಿಸಿದ್ದರು. ಇದೀಗ ಮೂರನೇ ಹಾಫ್ ಸೆಂಚುರಿಯೊಂದಿಗೆ ಭರ್ಜರಿ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

IND vs SA: ‘ಹೌದು ಕಳೆದ 2-3 ವರ್ಷಗಳು..’ ಸರಣಿ ಶ್ರೇಷ್ಠ ಗೆದ್ದ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು?

Virat Kohli: ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ, ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡಿತು. ಸರಣಿಶ್ರೇಷ್ಠ ವಿರಾಟ್ ಕೊಹ್ಲಿ (135, 102, 65*) ಭರ್ಜರಿ ಪ್ರದರ್ಶನ ನೀಡಿದರು. ಈ ಗೆಲುವು, ವಿಶೇಷವಾಗಿ ತಮ್ಮ ಹೊಸ ಬ್ಯಾಟಿಂಗ್ ಶೈಲಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಕೊಹ್ಲಿ ಹರ್ಷ ವ್ಯಕ್ತಪಡಿಸಿದರು. ಇದು ತಂಡಕ್ಕೆ ಇನ್ನಷ್ಟು ಪ್ರಯೋಜನ ನೀಡಲಿದೆ ಎಂದರು.

IND vs SA: 12 ಸಿಕ್ಸರ್‌, 24 ಬೌಂಡರಿ, 302 ರನ್‌..! ಏಕದಿನದಲ್ಲಿ 12ನೇ ಸರಣಿ ಶ್ರೇಷ್ಠ ಗೆದ್ದ ಕೊಹ್ಲಿ

Virat Kohli's ODI Masterclass: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಕೆಗೆ ಒಳಗಾಗಿದ್ದ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಎರಡು ಶತಕ ಹಾಗೂ ಒಂದು ಅರ್ಧಶತಕದೊಂದಿಗೆ 302 ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ತಮ್ಮ ಆಟದ ಮೂಲಕವೇ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ ಕೊಹ್ಲಿ, ಚೇಸಿಂಗ್ ಕಿಂಗ್ ಎಂದೇ ಖ್ಯಾತರಾಗಿರುವ ತಮ್ಮ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸಿದರು.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ