Weather Forecast
ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್ನಿಂದ ಸೆಪ್ಟೆಂಬರ್ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್ನಿಂದ ಡಿಸೆಂಬರ್-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ನಿಂದ 20 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುತ್ತದೆ
ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ?
ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಮುಂದುವರಿದಿದೆ. ರಾಜಧಾನಿ ಬೆಂಗಳೂರಿನಲ್ಲಿ 35-37°C ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. 40°C ಗಿಂತ ಹೆಚ್ಚಿನ ತಾಪಮಾನ ಇರುವ ಜಿಲ್ಲೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
- Akshay Pallamajalu
- Updated on: Apr 16, 2026
- 6:16 am
ಕರ್ನಾಟಕ ಹವಾಮಾನ ವರದಿ: ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೀಟ್ ವೇವ್ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- Bhavana Hegde
- Updated on: Apr 15, 2026
- 7:55 am
ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ
ರಾಜ್ಯಾದ್ಯಂತ ಉರಿಯುತ್ತಿರುವ ಬೇಸಿಗೆಯ ಬಿಸಿಲು ಜನಜೀವನವನ್ನು ಕಂಗೆಡಿಸಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದೆ. ಇನ್ನು ವಿಶೇಷವಾಗಿ ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದ್ದು, ಈ ಬಾರಿಯ ಬಿಸಿಲು ಜನರ ನೆತ್ತಿ ಸುಟ್ಟಿದೆ.
- Vinay Kashappanavar
- Updated on: Apr 14, 2026
- 9:37 pm
ಬಿಸಿಲಿಂದ ದೂರವಿರಿ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ
ಬೇಸಿಗೆ ಆರಂಭವಾಗುತ್ತಿದ್ದಂತೆ ದೇಶಾದ್ಯಂತ ತಾಪಮಾನ ಏರಿಕೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಛತ್ತೀಸ್ಗಢ, ಒಡಿಶಾ ಮತ್ತು ಪೂರ್ವ ಮಧ್ಯಪ್ರದೇಶದ ಪ್ರತ್ಯೇಕ ಪ್ರದೇಶಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಇದರ ಜೊತೆಗೆ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ಗುಜರಾತ್, ಸೌರಾಷ್ಟ್ರ ಮತ್ತು ಕಚ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಬಿಸಿ ಗಾಳಿ ಮುಂದುವರಿಯುವ ನಿರೀಕ್ಷೆಯಿದೆ. ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ಕರಾವಳಿ ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ.
- Sushma Chakre
- Updated on: Apr 13, 2026
- 6:07 pm
ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ, ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ
Karnataka Weather Today: ಕರ್ನಾಟಕದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರಿಲ್ 13 ಮತ್ತು 14 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ಮೈಸೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಕರಾವಳಿಯಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದೆ.
- Ganapathi Sharma
- Updated on: Apr 13, 2026
- 6:50 am
ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೀಟ್ ವೇವ್ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- Bhavana Hegde
- Updated on: Apr 12, 2026
- 7:32 am
“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!
ಗದಗ ಜಿಲ್ಲೆಯಲ್ಲಿ ತಾಪಮಾನ 38-40°C ಏರಿಕೆಯಾಗಿದ್ದು, ಬಿಸಿಲಿನ ಝಳಕ್ಕೆ ಸರ್ಕಾರಿ ನೌಕರರು ಹೈರಾಣಾಗಿದ್ದಾರೆ. ಬೇಸಿಗೆಯ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು, ಕೆಲಸದಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲಸದ ಅವಧಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1:30 ರವರೆಗೆ ಬದಲಾಯಿಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ನೌಕರರು ಗಡುವು ನೀಡಿದ್ದಾರೆ. ಉತ್ತರ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಈಗಾಗಲೇ ಸಮಯ ಬದಲಾವಣೆ ಮಾಡಲಾಗಿದೆ.
- Sanjeev Pandre
- Updated on: Apr 11, 2026
- 3:23 pm
ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಹೆಚ್ಚಾಯ್ತು ತಾಪಮಾನ; ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!
Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೀಟ್ ವೇವ್ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- Bhavana Hegde
- Updated on: Apr 11, 2026
- 7:36 am
Karnataka Weather Update: ಬೆಂಗಳೂರಲ್ಲಿ ಅಬ್ಬರಿಸಿದ ವರುಣ; ರಾಜ್ಯದ ಎಲ್ಲೆಲ್ಲಿ ನಾಳೆ ಮಳೆ?
ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಮಳೆ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದ್ದು, ಏಪ್ರಿಲ್ 10-12ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವಾಮಾನವಿರಲಿದೆ.
- Prasanna Hegde
- Updated on: Apr 10, 2026
- 7:46 pm
Karnataka Weather: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ: ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕಲಬುರಗಿ, ರಾಯಚೂರಿನಲ್ಲಿ 42 ಡಿಗ್ರಿ ಸೆಲ್ಶಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಮುನ್ಸೂಚನೆ ಇದ್ದು, ಉಷ್ಣ ಅಲೆ ಭೀತಿ ಎದುರಾಗಿದೆ. ಮತ್ತೊಂದೆಡೆ, ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಹಾಸನ ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆಯಿದೆ. ಸಂಪೂರ್ಣ ಹವಾಮಾನ ಮುನ್ಸೂಚನೆ ಇಲ್ಲಿದೆ.
- Ganapathi Sharma
- Updated on: Apr 10, 2026
- 7:34 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ, ಹಲವೆಡೆ ಶುಷ್ಕ ವಾತಾವರಣ
Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಆದರೆ ಇಂದು ಕೇವಲ ಮೂರು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Bhavana Hegde
- Updated on: Apr 8, 2026
- 7:55 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ರಾಮನಗರದಲ್ಲಿ ಮಳೆಯಾಗುವ ಮುನ್ಸೂಚನೆ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Bhavana Hegde
- Updated on: Apr 7, 2026
- 7:39 am