AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast

Weather Forecast

ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್​ನಿಂದ ಸೆಪ್ಟೆಂಬರ್​ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್​ನಿಂದ ಡಿಸೆಂಬರ್​-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ

ಇನ್ನೂ ಹೆಚ್ಚು ಓದಿ

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಕರ್ನಾಟಕ ಹವಾಮಾನ: 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ; ಉತ್ತರ ಕರ್ನಾಟದಲ್ಲಿ ಬಿಸಿಲಿನಬ್ಬರ

Karnataka Weather: ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲಿನ ಅಬ್ಬರ ಮುಂದುವರಿಯಲಿದ್ದರೆ, ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ನಗರದಲ್ಲಿ ಮಳೆ ಸಾಧ್ಯತೆ ಕಡಿಮೆ. ಇನ್ನು ಕರ್ನಾಟಕದಲ್ಲಿ ಮೇ 11ರ ವರೆಗೆ ಮಳೆ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

Karnataka Weather Forecast; ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ (IMD) ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ.

ಕರ್ನಾಟಕ ಹವಾಮಾನ: 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​?

Karnataka Weather: ಕರ್ನಾಟಕದಲ್ಲಿ ಮೇ 8ರಂದು ಹವಾಮಾನ ವೈಪರೀತ್ಯ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ 42°C ತೀವ್ರ ಉಷ್ಣ ಅಲೆ ಇರಲಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣದ ಅಥವಾ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಳೆಯ ಸಾಧ್ಯತೆ ಕಡಿಮೆ. ರಾಯಚೂರು, ಕಲಬುರಗಿಯಲ್ಲಿ ಬಿಸಿಲು ಹೆಚ್ಚಿರಲಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ​

Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದ್ದು, ಹಾಸನ ಸೇರಿದಂತೆ 4 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣಾರ್ಭಟವಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ

Karnataka Weather Forecast: ಇಂದಿನಿಂದ ಮೇ 12 ರವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಒಣ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು KSNDMC ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ

ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ, ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಸಾಧಾರಣ ಮಳೆ ನಿರೀಕ್ಷೆ. ಮಲೆನಾಡು ಭಾಗದಲ್ಲಿ ಹೆಚ್ಚಿದ ಮಳೆಯು ಕಾಫಿ ಬೆಳೆಗಾರರಿಗೆ ಆಶಾದಾಯಕವಾಗಿದೆ. ಆದರೆ, ಉತ್ತರ ಕರ್ನಾಟಕದ ಬೆಳಗಾವಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ 38°C ದಾಟಿ ತೀವ್ರ ಬಿಸಿಲು ಮುಂದುವರಿಯಲಿದೆ. ಮುಂದಿನ 3 ದಿನ ರಾಜ್ಯದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕಕ್ಕೆ ಮೇ 6 ರಿಂದ ಗುಡುಗು ಸಹಿತ ಮಳೆ ಸಿಹಿ ಸುದ್ದಿ. ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲೂ ಮಳೆಯ ನಿರೀಕ್ಷೆಯಿದೆ. ಬಿರುಗಾಳಿ, ಸಿಡಿಲು ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ತಾಪಮಾನದಲ್ಲಿ ಕೊಂಚ ಬದಲಾವಣೆ ಕಂಡುಬಂದಿದೆ.

ಲೈವ್ ವೆದರ್​ನಿಂದ ಹಿಡಿದು ವಿವಿಧ ಅಲರ್ಟ್​ಗಳವರೆಗೆ ಹಲವು ಫೀಚರ್​ಗಳನ್ನು ಹೊಂದಿರುವ ಮೌಸಮ್ ಆ್ಯಪ್

IMD Mausam App: ಕೇಂದ್ರ ಹವಾಮಾನ ಇಲಾಖೆಯ (IMD) 'ಮೌಸಮ್' ಆ್ಯಪ್ ರೈತರು ಮತ್ತು ಸಾರ್ವಜನಿಕರಿಗೆ ನಿಖರ ಹವಾಮಾನ ಮುನ್ಸೂಚನೆ ನೀಡುತ್ತದೆ. ಮಳೆ, ಗಾಳಿ, ಸಿಡಿಲು-ಮಿಂಚು ಕುರಿತು ನೈಜ-ಸಮಯದ ಎಚ್ಚರಿಕೆಗಳನ್ನು ಒದಗಿಸುತ್ತದೆ. ನೌಕಾಸ್ಟ್, ನಗರ ಮುನ್ಸೂಚನೆ, ಬಣ್ಣದ ಕೋಡ್ ಎಚ್ಚರಿಕೆಗಳಂತಹ ವೈಶಿಷ್ಟ್ಯಗಳ ಮೂಲಕ ಜೀವ ಮತ್ತು ಆಸ್ತಿ ನಷ್ಟ ತಡೆಯಲು ಸಹಕಾರಿಯಾಗಿದೆ. ಇದು ಕೃಷಿಕರಿಗೆ ಮತ್ತು ಸಾಮಾನ್ಯ ಜನರಿಗೆ ಪ್ರಮುಖ ಮಾಹಿತಿಯನ್ನು ಒದಗಿಸುವ ಸಮಗ್ರ ಸಾಧನ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​

Karnataka Weather: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಸುರಿದ ಮಳೆಗೆ ಮೈಸೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ವಾಹನ ಸಂಚಾರದಲ್ಲಿ ತೀವ್ರ ಅಡೆತಡೆಗಳು ಉಂಟಾಗಿವೆ. ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣಾರ್ಭಟವಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು!

Karnataka Weather: ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಹಲವೆಡೆ ಬೆಳ್ಳಂಬೆಳಗ್ಗೆ ಏಕಾಏಕಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣಾರ್ಭಟವಿರಲಿದೆ ಎಂದು ಇಲಾಖೆ ತಿಳಿಸಿದೆ.

Bengaluru Rains: ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ ಅಬ್ಬರ, ಮೆಜೆಸ್ಟಿಕ್-ಶಾಂತಿನಗರ ಸೇರಿ ಹಲವೆಡೆ ವರ್ಷಧಾರೆ

ಮೆಜೆಸ್ಟಿಕ್, ಶಾಂತಿನಗರ, ಯಶವಂತಪುರ, ಕೆಆರ್ ಮಾರುಕಟ್ಟೆ ಸೇರಿದಂತೆ ಬೆಂಗಳೂರು ನಗರದ ಅನೇಕ ಕಡೆಗಳಲ್ಲಿ ಸೋಮವಾರ (ಮೇ 4) ಬೆಳಗ್ಗೆಯೇ ತುಸು ಹೊತ್ತು ಭಾರಿ ಮಳೆ ಸುರಿದಿದೆ. ಕೆಆರ್ ಮಾರುಕಟ್ಟೆಯಲ್ಲಿ ಮಳೆಯಿಂದಾಗಿ ವ್ಯಾಪಾರಿಗಳು, ಗ್ರಾಹಕರು ಕಿರಿಕಿರಿ ಅನುಭವಿಸಿದರು. ಬೆಂಗಳೂರಿನಲ್ಲಿ ಮುಂದಿನ 72 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್