Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast

Weather Forecast

ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್​ನಿಂದ ಸೆಪ್ಟೆಂಬರ್​ವರೆಗೆ ಇರಲಿದೆ. ಅದಾಸ ಬಳಿಕ ಚಳಿಗಾಲ ಶುರುವಾಗಲಿದೆಡ. ಕರ್ನಾಟಕದಲ್ಲಿ ಅಕ್ಟೋಬರ್​ನಿಂದ ಡಿಸೆಂಬರ್​-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ

ಇನ್ನೂ ಹೆಚ್ಚು ಓದಿ

IPL 2025: ಬೆಂಗಳೂರಿನಲ್ಲಿ ಇನ್ನೂ ಆರಂಭವಾಗದ ಪಂದ್ಯ; ಮಳೆಯಿಂದ ರದ್ದಾಗುತ್ತಾ?

IPL 2025 Match 34: ಐಪಿಎಲ್ 2025ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪಂದ್ಯ ವಿಳಂಬವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ತಡೆಯಾಗಿದ್ದು, ಪಂದ್ಯದ ಆರಂಭದಲ್ಲಿ ವಿಳಂಬ ಉಂಟಾಗಿದೆ. ಆದಾಗ್ಯೂ, ಮೈದಾನದ ಉತ್ತಮ ಒಳಚರಂಡಿ ವ್ಯವಸ್ಥೆಯಿಂದಾಗಿ ಮಳೆ ನಿಂತ ಬಳಿಕ ಪಂದ್ಯ ಶೀಘ್ರದಲ್ಲೇ ಆರಂಭವಾಗುವ ನಿರೀಕ್ಷೆ ಇದೆ.

Karnataka Rains: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಂಜೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೊಸಕೋಟೆ, ಬೆಳ್ಳೂರು, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ದುರ್ಗ, ಚನ್ನರಾಯಪಟ್ಟಣ, ಬೆಂಗಳೂರು ಎಚ್​ಎಎಲ್​, ನಾಗಮಂಗಲ, ಬೆಂಗಳೂರು, ರಾಯಲ್ಪಾಡು, ಮೊಳಕಾಲ್ಮೂರು, ಹೆಸರಘಟ್ಟ, ಹೊಸದುರ್ಗ, ಟಿಜಿ ಹಳ್ಳಿ, ಕೋಲಾರ, ಶಿರಹಟ್ಟಿ, ಜೇವರ್ಗಿ, ಲಕ್ಷ್ಮೇಶ್ವರದಲ್ಲಿ ಮಳೆಯಾಗಿದೆ.

IPL 2025: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ; ರದ್ದಾಗುತ್ತಾ ಆರ್​ಸಿಬಿ- ಪಂಜಾಬ್ ಪಂದ್ಯ?

RCB vs PBKS Bengaluru Weather Forecast: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2025ರ 34ನೇ ಪಂದ್ಯಕ್ಕೆ ಬೆಂಗಳೂರಿನಲ್ಲಿ ಮಳೆಯ ಭೀತಿ ಎದುರಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಲಘು ಮಳೆಯಾಗುವ ಸಾಧ್ಯತೆ ಇದೆ. ಆದರೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಉತ್ತಮ ಒಳಚರಂಡಿ ವ್ಯವಸ್ಥೆಯಿಂದಾಗಿ ಆಟಕ್ಕೆ ಅಡ್ಡಿಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ.

Bengaluru Weather: ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು

ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದೆ. ಶೆಕೆ ಜೊತೆ ತಾಪಮಾನ ಏರಿಕೆ ನಡುವೆ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಬೆಂಗಳೂರು ವಾತಾವರಣಕ್ಕೆ ಸಿಟಿ ಜನ ಶಾಪ್ ಹಾಕುತ್ತಿದ್ದಾರೆ. ಈ ರೀತಿಯ ವಾತಾವರಣದಿಂದ ಗರ್ಭಿಣಿಯರು ಆರೋಗ್ಯದ ಬಗ್ಗೆ ಗಮನಹರಿಸಬೇಕೆಂದು ವೈದ್ಯರು ಎಚ್ಚರಿಗೆ ನೀಡಿದ್ದಾರೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ದಾವಣಗೆರೆ,ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮತ್ತು ರಾತ್ರಿ ಮಳೆಯಾಗುತ್ತಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಬೆಂಗಳೂರಿನ ಶಾಂತಿನಗರ, ಜಯನಗರ, ಕೆ.ಆರ್. ಮಾರ್ಕೆಟ್ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ರಸ್ತೆ ಮೇಲೆ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.

Karnataka Weather: ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?

ಕರ್ನಾಟಕದ ವಿವಿಧೆಡೆ ಇಂದು ವರುಣನ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ., ಚಂಡಮಾರುತವು ಕರ್ನಾಟಕದ ಮೇಲೆ ಸಣ್ಣ ಪ್ರಮಾಣದ ಪರಿಣಾಮವನ್ನು ಬೀರುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್​, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

Monsoon 2025: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ವಾರಕ್ಕೆ 2-3 ಬಾರಿ ಮಳೆಯಾಗುತ್ತಿದೆ. ಈ ಬಾರಿ ಪ್ರತಿ ವರ್ಷಕ್ಕಿಂತ ಮೊದಲೇ ಮಳೆಗಾಲ ಶುರುವಾಗುವ ನಿರೀಕ್ಷೆಯಿದೆ. ಹಾಗೇ, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಜೂನ್ ತಿಂಗಳು ಶುರುವಾಗುತ್ತಿದ್ದಂತೆ ಭಾರತದಲ್ಲಿ ಮಾನ್ಸೂನ್ ಆರಂಭವಾಗುವ ಲಕ್ಷಣಗಳು ಹೆಚ್ಚಾಗಿವೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಚಂಡಮಾರುತದ ಪರಿಣಾಮ ಕರ್ನಾಟಕದ ಹಲವೆಡೆ ಮಲೆಯಾಗುತ್ತಿದೆ. ಹೀಗಾಗಿ ಬಿಸಿಲ ಬೇಗೆಯಿಂದ ಸ್ವಲ್ಪ ಮುಕ್ತಿ ಸಿಕ್ಕಂತಾಗಿದೆ. ಆದರೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ