
Weather Forecast
ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್ನಿಂದ ಸೆಪ್ಟೆಂಬರ್ವರೆಗೆ ಇರಲಿದೆ. ಅದಾಸ ಬಳಿಕ ಚಳಿಗಾಲ ಶುರುವಾಗಲಿದೆಡ. ಕರ್ನಾಟಕದಲ್ಲಿ ಅಕ್ಟೋಬರ್ನಿಂದ ಡಿಸೆಂಬರ್-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ನಿಂದ 20 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುತ್ತದೆ
ಕರ್ನಾಟಕದ ಹಲವೆಡೆ ದಿಢೀರ್ ವರುಣಾರ್ಭಟ: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ
ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಬೆನ್ನಲ್ಲೇ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ, ಮೇಖ್ರಿ ಸರ್ಕಲ್, ಭೂಪಸಂದ್ರ ಸೇರಿ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಮಳೆಯಿಂದ ವಾತಾವರಣ ತಂಪಾಗಿದ್ದು, ಉರಿ ಬಿಸಿಲಿನಿಂದ ತತ್ತರಿಸಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
- Sunil MH
- Updated on: Mar 22, 2025
- 5:27 pm
ಉತ್ತರ ಕರ್ನಾಟಕಕ್ಕೆ ಬಿಸಿಲಾಘಾತ: ರಾಜ್ಯ ವಿಪತ್ತು ಎಂದು ಘೋಷಿಸಲು ಆಗ್ರಹ
ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿದ್ದು, ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ 43 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೃದ್ಧರು ಮತ್ತು ಮಕ್ಕಳು ಹೆಚ್ಚು ಅಪಾಯದಲ್ಲಿದ್ದಾರೆ. ತಜ್ಞರು ಈ ಪರಿಸ್ಥಿತಿಯನ್ನು ರಾಜ್ಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ.
- Ganapathi Sharma
- Updated on: Mar 21, 2025
- 2:49 pm
KKR vs RCB Weather Report: ಫ್ಯಾನ್ಸ್ಗೆ ಕೆಟ್ಟ ಸುದ್ದಿ: ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಕೆಕೆಆರ್-ಆರ್ಸಿಬಿ ಪಂದ್ಯ ರದ್ದಾಗುವ ಸಾಧ್ಯತೆ
IPL 2025 Match 1st Weather Report: ಐಪಿಎಲ್ 2025 ರ ಋತುವು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಗಲಿದ್ದು, ಜನಪ್ರಿಯ ಗಾಯಕಿಯರಾದ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಪ್ರದರ್ಶನ ನೀಡಲಿದ್ದಾರೆ. ಆದಾಗ್ಯೂ, ಮಾರ್ಚ್ 22 ರವರೆಗೆ ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
- Preethi Bhat Gunavante
- Updated on: Mar 21, 2025
- 11:16 am
Karnataka Weather: ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 25ರಿಂದ ಮಳೆಯಾಗಲಿದೆ.
- Nayana Rajeev
- Updated on: Mar 21, 2025
- 7:19 am
Karnataka Weather: ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ, ಮಾರ್ಚ್ 23ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
- Nayana Rajeev
- Updated on: Mar 20, 2025
- 7:21 am
ಬೆಂಗಳೂರಿನಲ್ಲಿ ಉಷ್ಣಾಘಾತ ಸಂಬಂಧಿತ ಸಾವು ಹೆಚ್ಚಳ ಸಾಧ್ಯತೆ: ಆಘಾತಕಾರಿ ವರದಿ ಬಹಿರಂಗ
ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಉಷ್ಣಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇತ್ತೀಚಿನ ಅಧ್ಯಯನ ವರದಿ ಎಚ್ಚರಿಸಿದೆ. ಉಷ್ಣ ಅಲೆಗಳನ್ನು ತಡೆಯಲು ದೀರ್ಘಾವಧಿಯ ಪರಿಹಾರ ಕ್ರಮಗಳ ಅಗತ್ಯವಿದೆ. ಬೆಂಗಳೂರಿನಲ್ಲಿ ಈಗಾಗಲೇ ತಾಪಮಾನ ಏರಿಕೆಯಾಗಿದ್ದು, ಮುಂಬರುವ ವರ್ಷಗಳಲ್ಲಿ ಇದು ಮುಂದುವರೆಯುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.
- Ganapathi Sharma
- Updated on: Mar 19, 2025
- 11:39 am
Karnataka Weather: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಮಳೆಯಾಗುತ್ತಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
- Nayana Rajeev
- Updated on: Mar 19, 2025
- 7:22 am
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಎಲ್ಲೆಡೆ ಬಿಸಿಲ ತಾಪ ಹೆಚ್ಚಾಗಿದೆ. ಸರಗೂರು ಹಾಗೂ ಎಚ್ಡಿ ಕೋಟೆಯಲ್ಲಿ ಮಳೆಯಾಗಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಮುಂದುವರೆಯಲಿದೆ.
- Nayana Rajeev
- Updated on: Mar 18, 2025
- 7:19 am
ಹೆಚ್ಚಾಗಲಿದೆ ಬೆಂಗಳೂರಿನ ತಾಪಮಾನ: 39 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ, ಬೀಸಲಿದೆ ಬಿಸಿ ಗಾಳಿ
ಬೇಸಿಗೆ ಶುರುವಾಗಿದೆ. ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ, ಕಚೇರಿಗಳಲ್ಲಿ ಏರ್ ಕೂಲರ್ಗಳನ್ನ ಹಾಕೊಂಡು ಕೂರುವ ಪರಿಸ್ಥಿತಿ ಇದೆ ಬೆಂಗಳೂರಿನಲ್ಲಿ. ಹೀಗಿರುವಾಗ ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿಯಾಗಲಿದೆ.
- Web contact
- Updated on: Mar 17, 2025
- 7:34 am
Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ
ಕರ್ನಾಟಕದ ಕೆಲವು ಭಾಗಗಳಲ್ಲಿ ಶಾಖದ ಅಲೆ ಇದ್ದರೆ ಇನ್ನೂ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.
- Nayana Rajeev
- Updated on: Mar 17, 2025
- 7:24 am