AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast

Weather Forecast

ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್​ನಿಂದ ಸೆಪ್ಟೆಂಬರ್​ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್​ನಿಂದ ಡಿಸೆಂಬರ್​-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ

ಇನ್ನೂ ಹೆಚ್ಚು ಓದಿ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ

Karnataka Weather: ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಜೊತೆಗೆ ಚಳಿ ಮುಂದುವರಿಯಲಿದೆ. ಮುಂದಿನ ಮೂರು ದಿನಗಳಲ್ಲಿ ಕೆಲವು ಕಡೆ ಮಳೆ ಮತ್ತು ಚಳಿ ಹೆಚ್ಚಾಗುವ ಸಂಭವವಿದೆ. ಸಂಕ್ರಾಂತಿ ಸಮಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ

Karnataka Weather: ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದ್ದು, ಇಂದೂ ಸಹ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ

Karnataka Weather: ಹೊಸ ವರ್ಷದಂದು ಕರ್ನಾಟಕದಲ್ಲಿ ವಾತಾವರಣ ಬದಲಾಗಿದೆ. ಉತ್ತರ ಒಳನಾಡಿಗೆ ಶೀತ ಮಾರುತಗಳು ಆವರಿಸಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ವಿಜಯಪುರ, ಬೆಳಗಾವಿ ಸೇರಿ ಹಲವೆಡೆ ತೀವ್ರ ಚಳಿ ದಾಖಲಾಗಿದೆ. ಬೆಂಗಳೂರು ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ತಂಪಾದ ರಾತ್ರಿಗಳನ್ನು ನಿರೀಕ್ಷಿಸಲಾಗಿದೆ. ಬಹುತೇಕ ಕಡೆ ಒಣ ಹವಾಮಾನ ಮುಂದುವರಿಯಲಿದೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ

Karnataka Weather: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ಆದರೆ ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ

Karnataka Weather: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ನಾಳೆಯವರೆಗೂ ಈ ವಾತಾವರಣ ಹೀಗೆ ಇರಲಿದ್ದು, ನಂತರ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ಇಂದಿನಿಂದ ಮುಂದಿನ ಮೂರು ದಿನಗಳ ವರೆಗೂ ವಾತಾವರಣ ಹೀಗೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಶೀತದಲೆಯ ಪ್ರಭಾವಕ್ಕೆ ತತ್ತರಿಸಿದ್ದು, ಎಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ

Karnataka Weather Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು ಆವರಿಸಿದೆ. ಬೆಂಗಳೂರಿನಲ್ಲಿ ತಾಪಮಾನ 17°C ಇರಲಿದ್ದು, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಹೆಚ್ಚಾಗಿ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ನಿರೀಕ್ಷೆಯಿಲ್ಲ. ಮುಂಜಾನೆ ವಾಹನ ಸವಾರರು ಎಚ್ಚರದಿಂದಿರಲು ಸೂಚಿಸಲಾಗಿದೆ. ಮುಂದಿನ 7 ದಿನ ಒಣಹವೆ, ಚಳಿ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣವೂ ತೀವ್ರವಿರಲಿದೆ ಎಂದು ಇಲಾಖೆ ತಿಳಿಸಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ.

ನಾಳೆಯ ಹವಾಮಾನ: ರಾಜ್ಯದ ಹಲವೆಡೆ ಚಳಿ, ಇರಲಿದೆ ಮಂಜಿನ ಅಬ್ಬರ

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ಚಳಿ ಮತ್ತು ಮಂಜು ಮುಂದುವರಿಯಲಿದೆ. ಉತ್ತರ, ಮಧ್ಯ, ದಕ್ಷಿಣ ಒಳನಾಡು ಹಾಗೂ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದ್ದು, ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಯಾದಗಿರಿ, ರಾಯಚೂರು ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಚಳಿಗಾಳಿಯಿಂದ ತತ್ತರಿಸುತ್ತಿದೆ. ರಾಜ್ಯದಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.