AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast

Weather Forecast

ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್​ನಿಂದ ಸೆಪ್ಟೆಂಬರ್​ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್​ನಿಂದ ಡಿಸೆಂಬರ್​-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ

ಇನ್ನೂ ಹೆಚ್ಚು ಓದಿ

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ

Karnataka Weather Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು ಆವರಿಸಿದೆ. ಬೆಂಗಳೂರಿನಲ್ಲಿ ತಾಪಮಾನ 17°C ಇರಲಿದ್ದು, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಹೆಚ್ಚಾಗಿ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ನಿರೀಕ್ಷೆಯಿಲ್ಲ. ಮುಂಜಾನೆ ವಾಹನ ಸವಾರರು ಎಚ್ಚರದಿಂದಿರಲು ಸೂಚಿಸಲಾಗಿದೆ. ಮುಂದಿನ 7 ದಿನ ಒಣಹವೆ, ಚಳಿ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣವೂ ತೀವ್ರವಿರಲಿದೆ ಎಂದು ಇಲಾಖೆ ತಿಳಿಸಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ.

ನಾಳೆಯ ಹವಾಮಾನ: ರಾಜ್ಯದ ಹಲವೆಡೆ ಚಳಿ, ಇರಲಿದೆ ಮಂಜಿನ ಅಬ್ಬರ

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ಚಳಿ ಮತ್ತು ಮಂಜು ಮುಂದುವರಿಯಲಿದೆ. ಉತ್ತರ, ಮಧ್ಯ, ದಕ್ಷಿಣ ಒಳನಾಡು ಹಾಗೂ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದ್ದು, ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಯಾದಗಿರಿ, ರಾಯಚೂರು ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಚಳಿಗಾಳಿಯಿಂದ ತತ್ತರಿಸುತ್ತಿದೆ. ರಾಜ್ಯದಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು

ಊಟಿಯಲ್ಲಿ ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ತೀವ್ರತೆ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಲಾರ ಜಿಲ್ಲೆಯಾದ್ಯಂತ ಬೆಳಗ್ಗೆ 8 ಗಂಟೆಯಾದರೂ ಸಹ ಸೂರ್ಯನ ದರ್ಶನವಿಲ್ಲದೇ ಮಂಜು ಆವರಿಸಿಕೊಂಡಿದೆ. ಮೈಕೊರೆವ ಚಳಿಯ ಜೊತೆಗೆ ದಟ್ಟವಾಗಿ ಮಂಜು ಆವರಿಸಿದ್ದು, ಒಂದು ರೀತಿ ಊಟಿಯಂತೆ ಭಾಸವಾಗುತ್ತಿದೆ. ಇನ್ನು ಮಂಜಿನಿಂದಾಗಿ ರಸ್ತೆ ಕಾಣದ ವಾಹನ ಸವಾರರು ಪರದಾಡುವಂತಾಗಿದೆ. ಹಾಗಾದ್ರೆ, ವಾತಾವರಣ ಹೇಗಿತ್ತು ಎನ್ನುವುದನ್ನು ನೀವು ಒಮ್ಮೆ ನೋಡಿ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ?

Karnataka Weather Tomorrow: ರಾಜ್ಯದ ಹಲವೆಡೆ ನಾಳೆಯೂ ಶೀತಗಾಳಿ ಮುಂದುವರಿಯಲಿದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಇರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹಾಗೂ ಸಾಧಾರಣ ಚಳಿಯ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಮಳೆ ಬರುವ ಯಾವುದೇ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಕರ್ನಾಟಕ, ಪ್ರಯಾಣ ಮಾಡುವವರು ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಒಣಹವೆ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಂಜು ಕವಿದಿದ್ದು, ತಾಪಮಾನ ಕುಸಿಯಲಿದೆ. ಬೀದರ್, ಹಾವೇರಿ, ದಾವಣಗೆರೆಯಲ್ಲಿ ಶೀತ ಅಲೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿಯೂ ಚಳಿ ಹೆಚ್ಚಾಗಲಿದೆ. ರಾಜ್ಯದಲ್ಲಿ ಮಳೆಯ ಸಾಧ್ಯತೆ ಶೂನ್ಯ. ಬೆಳಗಿನ ಪ್ರಯಾಣದ ಮಾಡುವವರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ನಾಳೆಯ ಹವಾಮಾನ: ಬೀದರ್​​ನಲ್ಲಿ ನಿಲ್ಲದ ಚಳಿ ಅಬ್ಬರ; ಹೇಗಿರಲಿದೆ ಬೆಂಗಳೂರು ವಾತಾವರಣ?

Karnataka Weather Tomorrow: ರಾಜ್ಯದಲ್ಲಿ ನಾಳೆ ಒಣಹವೆ ಮುಂದುವರಿಯಲಿದ್ದು, ಹಲವೆಡೆ ಚಳಿ ಹೆಚ್ಚಾಗಲಿದೆ. ಬೀದರ್‌ನಲ್ಲಿ ಚಳಿ ಅಬ್ಬರ ಮುಂದುವರಿದು, ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣದ ಜೊತೆ ಚಳಿಯ ಅನುಭವವಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮಳೆಯ ಸೂಚನೆ ಇಲ್ಲ. ರಾಜ್ಯದ ಪ್ರಮುಖ ನಗರಗಳ ಕನಿಷ್ಠ ಉಷ್ಣಾಂಶ ಎಷ್ಟು ಎನ್ನುವ ಮಾಹಿತಿಯೂ ಇಲ್ಲಿದೆ.

ಕರ್ನಾಟಕ ಹವಾಮಾನ ವರದಿ: ವಿಜಯಪುರದಲ್ಲಿ ದಾಖಲಾಯ್ತು 7 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಬೆಂಗಳೂರು, ಕಲಬುರುಗಿ ಸೇರಿ ಹಕವೆಡೆ ಮೈಕೊರೆಯುವ ಚಳಿ ಹೆಚ್ಚುತ್ತಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪ್ರಭಾವ ಹೆಚ್ಚಾಗುತ್ತಿದ್ದು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ ಘೋಷಿಸಲಾಗಿದೆ. ವಿಜಯಪುರದಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ಹೀಗಾಗಿ ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ