Weather Forecast
ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್ನಿಂದ ಸೆಪ್ಟೆಂಬರ್ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್ನಿಂದ ಡಿಸೆಂಬರ್-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ನಿಂದ 20 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುತ್ತದೆ
TV9 Kannada News highlights: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಗೆ ಒಪ್ಪಿದ ಕೋರ್ಟ್, ದರ್ಶನ್ಗೆ ಶಾಕ್
Karnataka News Today Live Updates: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಆರ್ಮಿ ಗೋಡೆ ಕುಸಿದು ಹಸುಗಳು ಮೃತಪಟ್ಟಿವೆ. ಮಂಡ್ಯದಲ್ಲಿ ಭೂ ಅಕ್ರಮದ ಆರೋಪಗಳ ನಡುವೆ ನಾಗಮಂಗಲ ಕಚೇರಿ ಕಸದ ಬುಟ್ಟಿಯಲ್ಲಿ ಭೂ ದಾಖಲೆಗಳು ಪತ್ತೆಯಾಗಿವೆ. ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಂದಿದೆ. ಜೊತೆಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ವೇಣುಗೋಪಾಲ್ ಕೆಪಿಸಿಸಿ ಸಭೆಗಳಿಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇವು ಸೆಪ್ಟೆಂಬರ್ 16ರ ಪ್ರಮುಖ ರಾಜ್ಯ ಸುದ್ದಿ.
- Akshay Pallamajalu
- Updated on: Sep 16, 2026
- 10:20 pm
ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಎಲ್ಲೆಲ್ಲಿ ‘ಯೆಲ್ಲೋ ಅಲರ್ಟ್’?
ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಮುಂಗಾರು ಹಾಗೂ ವಾಯುಭಾರ ಕುಸಿತದಿಂದ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು, ಒಳನಾಡು ಜಿಲ್ಲೆಗಳು ಹಾಗೂ ಬೆಂಗಳೂರಿನಲ್ಲಿ ಮುಂದಿನ 24-48 ಗಂಟೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
- Akshay Pallamajalu
- Updated on: Sep 16, 2026
- 6:20 am
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ: ನಜ್ಜುಗುಜ್ಜಾದ ಆಟೋ, ರಾಜಧಾನಿಯಲ್ಲಿ ಮಳೆಯ ಅವಾಂತರ
ಬೆಂಗಳೂರಿನಲ್ಲಿ ಸುರಿದ ರಣ ಮಳೆಗೆ ಮಲ್ಲತ್ತಹಳ್ಳಿ ಬಳಿ ಬೃಹತ್ ಮರ ರಸ್ತೆಗೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಅಲ್ಲೇ ನಿಲ್ಲಿಸಿದ್ದ ಆಟೋ ರಿಕ್ಷಾ ಜಖಂ ಆಗಿದೆ. ಅದೃಷ್ಟವಶಾತ್ ಆಟೋದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದರು. ನಗರದಲ್ಲಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ.
- Shivaprasad B
- Updated on: Sep 16, 2026
- 6:00 am
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ,ವಾಹನ ಸವಾರರು ಪರದಾಟ
ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಹೌದು...ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿದಿದೆ. ನಗರದ ಕೇಂದ್ರ ಹಾಗೂ ಉತ್ತರ ಭಾಗಗಳಾದ ಮೆಜೆಸ್ಟಿಕ್, ಎಂ.ಜಿ. ರಸ್ತೆ, ವಿಧಾನಸೌಧ, ಮಲ್ಲೇಶ್ವರ ಮತ್ತು ಹೆಬ್ಬಾಳ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಕಂಡುಬಂತು. ಇದರಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಚೇರಿಗಳಿಂದ ಮನೆಗೆ ಮರಳುತ್ತಿದ್ದ ಸವಾರರು ಟ್ರಾಫಿಕ್ ಜಾಮ್ನಿಂದಾಗಿ ತೀವ್ರ ಪರದಾಟ ಅನುಭವಿಸಿದರು.
- Sunil MH
- Updated on: Sep 15, 2026
- 7:41 pm
ಮಳೆ ಕೊರತೆ, ಒಣ ಹವೆ ಪರಿಣಾಮ ಬೆಂಗಳೂರಿನ ತಾಪಮಾನ ಏರಿಕೆ: ಏರ್ಪೋರ್ಟ್ನಲ್ಲಿ ಉಷ್ಣಾಂಶ 5.7 ಡಿಗ್ರಿ ಸೆಲ್ಶಿಯಸ್ ಹೆಚ್ಚಳ
ಮಳೆಯ ಕೊರತೆಯಿಂದ ಬೆಂಗಳೂರಿನಲ್ಲಿ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.9 ಡಿಗ್ರಿ ಸೆಲ್ಶಿಯಸ್ ದಾಖಲಾಗಿದ್ದು, ವಾಡಿಕೆಗಿಂತ 5.7 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗಿದೆ. ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 33 ಡಿಗ್ರಿ ಸೆಲ್ಶಿಯಸ್ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
- Ganapathi Sharma
- Updated on: Sep 15, 2026
- 7:58 am
ರಾಜ್ಯದ ಹವಾಮಾನ ವರದಿ: ಹಲವೆಡೆ ಮೋಡಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ರಾಜ್ಯದಲ್ಲಿ ಮುಂಗಾರು ಮಳೆ ಕೊಂಚ ತಗ್ಗಿದ್ದರೂ, ಪ್ರಮುಖ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಲಘುವಿನಿಂದ ಸಾಧಾರಣ ಮಳೆಯ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಗಾಳಿ ಬೀಸಲಿದೆ. ಉತ್ತರ ಕರ್ನಾಟಕ ಒಣಹವೆ ಹೊಂದಿದ್ದು, ಮಳೆಯೊಂದಿಗೆ ಗುಡುಗು-ಮಿಂಚು ಸಾಧ್ಯತೆ ಇದೆ. ರೈತರು ಮುನ್ನೆಚ್ಚರಿಕೆ ವಹಿಸಬೇಕು. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
- Akshay Pallamajalu
- Updated on: Sep 15, 2026
- 6:16 am
ರಾಜ್ಯದ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸೆಪ್ಟೆಂಬರ್ 14 ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದಿಂದ ವೈರಲ್ ಸೋಂಕುಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಬಿಸಿ ನೀರು ಕುಡಿಯುವುದು ಹಾಗೂ ಮಾಸ್ಕ್ ಧರಿಸುವುದು ಸುರಕ್ಷಿತ ಎಂದು ಆರೋಗ್ಯ ಸಲಹೆ ನೀಡಲಾಗಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರೆಯಲಿದೆ.
- Akshay Pallamajalu
- Updated on: Sep 14, 2026
- 6:27 am
ಕರ್ನಾಟಕದ ಹವಾಮಾನ ಮುನ್ಸೂಚನೆ: ರಾಜ್ಯದ ವಿವಿಧ ಭಾಗಗಳಲ್ಲಿ ಕ್ಷೀಣಿಸಿದ ಮುಂಗಾರು
ಕರಾವಳಿ ಮತ್ತು ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ನಾಳೆಯಿಂದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಕರ್ನಾಟಕದ ಇಂದಿನ ಹಾಗೂ ನಾಳೆಯ ಹವಾಮಾನ ವರದಿ ಇಲ್ಲಿದೆ.
- Bhavana Hegde
- Updated on: Sep 13, 2026
- 7:06 am
ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ಮತ್ತಷ್ಟು ದುರ್ಬಲ, 13 ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರದಲ್ಲಿ 2 ಸೆಂ.ಮೀ ಮಳೆಯಾಗಿದ್ದು, ಸೆಪ್ಟೆಂಬರ್ 13ರಂದು ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ಏತನ್ಮಧ್ಯೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
- Ganapathi Sharma
- Updated on: Sep 12, 2026
- 6:32 am
ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ವಿವಿಧೆಡೆ ಸಾಧಾರಣ ಮಳೆಯ ಮುನ್ಸೂಚನೆ
ಕರ್ನಾಟಕ ಮಳೆ ಮುನ್ಸೂಚನೆ ಸೆಪ್ಟೆಂಬರ್ 11: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕೆಲವೆಡೆ ಮಾತ್ರ ಮಳೆಯಾಗಿದೆ. ಸೆಪ್ಟೆಂಬರ್ 11 ಮತ್ತು 12ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕಳಸದಲ್ಲಿ ಗರಿಷ್ಠ 3 ಸೆಂ.ಮೀ ಮಳೆ ದಾಖಲಾಗಿದೆ.
- Ganapathi Sharma
- Updated on: Sep 11, 2026
- 6:31 am
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ಉಷ್ಣಾಂಶ
ಮಳೆಗಾಲದ ನಡುವೆಯೂ ಬೆಂಗಳೂರಿನಲ್ಲಿ ಅಸಾಮಾನ್ಯ ಬಿಸಿಲಿನ ತಾಪ ಹೆಚ್ಚಾಗಿದ್ದು, ಕಳೆದ ಒಂದು ವಾರದಿಂದ 31.22°C ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಸೆಪ್ಟೆಂಬರ್ನಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅತಿ ಹೆಚ್ಚು ತಾಪಮಾನವಾಗಿದೆ. ಎಲ್ ನಿನೋ ಪರಿಣಾಮ, ಮಳೆ ಮತ್ತು ಮೋಡಗಳ ಕೊರತೆಯಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರುವ ಸಾಧ್ಯತೆಯಿದೆ.
- Arun Kumar R
- Updated on: Sep 10, 2026
- 11:56 am
ಕರ್ನಾಟಕದಲ್ಲಿ ಮಳೆಗಾಲದಲ್ಲೇ ಹೆಚ್ಚಾಗಲಿದೆ ತಾಪಮಾನ! ಬೆಂಗಳೂರಿನಲ್ಲಿ ಈಗಾಗಲೇ 4 ಡಿಗ್ರಿ ಸೆಲ್ಶಿಯಸ್ ಹೆಚ್ಚಳ
ಕರ್ನಾಟಕದಲ್ಲಿ ಈ ವರ್ಷ ಮಳೆಗಾಲದಲ್ಲೇ ಬೇಸಿಗೆಯ ಅನುಭವ ಆಗಲಿದೆಯೇ? ಇಂಥದ್ದೊಂದು ಪ್ರಶ್ನೆ ಈಗ ಉದ್ಭವಿಸಿದೆ. ಮುಂಗಾರು ಮಳೆಯ ಕೊರತೆ, ಬಿಸಿಲಿನ ಝಳ ಹೆಚ್ಚಳದಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ 3-4 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಹೆಚ್ಚಿರಲಿದೆ.
- Ganapathi Sharma
- Updated on: Sep 9, 2026
- 12:14 pm