AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today WITT

What India Thinks Today WITT

ದೇಶದ ಅತಿದೊಡ್ಡ ಸುದ್ದಿಸಂಸ್ಥೆ ಟಿವಿ9 ನೆಟ್​​ವವರ್ಕ್​​​ ನಡೆಸುತ್ತಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಹಿರಿಯ ರಾಜಕೀಯ ನಾಯಕರು, ಕೇಂದ್ರ ಸರ್ಕಾರದ ಸಚಿವರು, ವಿಜ್ಞಾನಿಗಳು, ಕ್ರೀಡಾ ಸಾಧಕರು, ಉದ್ಯಮಿಗಳು, ಸಿನಿಮಾ ನಟ-ನಟಿಯರು, ವಿಶ್ವದ ನಾಯಕರು ಭಾಗವಹಿಸಲಿದ್ದಾರೆ. ಈ ವೇದಿಕೆಯಲ್ಲಿ ಹಲವು ವಿಚಾರಗಳ ಕುರಿತು ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಮಾ.28ರಿಂದ ಮಾ. 29 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದು, ಅವರು ಕೂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರ ಜತೆಗೆ ಸಾಂಸ್ಕೃತಿಕ ಹಾಗೂ ಅನೇಕ ಪ್ರದರ್ಶನಗಳು ನಡೆಯಲಿದೆ.

ಇನ್ನೂ ಹೆಚ್ಚು ಓದಿ

IMEC: ಗ್ಲೋಬಲ್ ಸಮಿಟ್​​ನಲ್ಲಿ IMEC ಬಗ್ಗೆ ಚರ್ಚೆ; ಭಾರತಕ್ಕೆ ಈ ಕಾರಿಡಾರ್ ವರದಾನ ಹೇಗೆ?

India Middle-east Europe Economic Corridor: ಮಧ್ಯಪ್ರಾಚ್ಯದ ಕೆಲ ದೇಶಗಳು, ಯೂರೋಪ್, ಅಮೆರಿಕ ಮತ್ತು ಭಾರತ ಭಾಗಿಯಾಗಿರುವ ಐಎಂಇಸಿ ಕಾರಿಡಾರ್ ಭಾರತಕ್ಕೆ ಗೇಮ್ ಚೇಂಜರ್ ಆಗಬಹುದು. ಈ ಕಾರಿಡಾರ್ ಬಗ್ಗೆ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದಲ್ಲಿ ತಜ್ಞರು ಮಾತನಾಡಿದ್ದಾರೆ. ಈ ಯೋಜನೆ ಭಾರತಕ್ಕೆ ಹಾಗೂ ವಿಶ್ವದ ಆರ್ಥಿಕತೆಗೆ ಎಷ್ಟು ಸಹಕಾರಿಯಾಗಬಲ್ಲುದು ಎಂದು ಚರ್ಚಿಸಿದ್ದಾರೆ.

News9 global summit: ಭಾರತ-ಯುಎಇ ಸಂಬಂಧಕ್ಕೆ ವಿಶ್ವಾಸದ ತಳಹದಿ: ನ್ಯೂಸ್9 ಸಮಿಟ್​​ನಲ್ಲಿ ರಾಯಭಾರಿ ಸಂಜಯ್ ಸುಧೀರ್ ಹೇಳಿಕೆ

Indian envoy to UAE Sunjay Sudhir at News9 Global Summit: ಭಾರತ ಮತ್ತು ಯುಎಇ ನಡುವಿನ ಸಂಬಂಧವು ಕಾಲದ ಪರೀಕ್ಷೆಯನ್ನು ಗೆದ್ದು ಮಾಗಿದೆ ಎಂದು ಯುಎಇಗೆ ಭಾರತದ ರಾಜಭಾರಿಯಾಗಿರುವ ಸಂಜಯ್ ಸುಧೀರ್ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ದೇಶಗಳ ಸಂಬಂಧ ಗಾಢವಾಗಿದ್ದು, ವಿಶ್ವಾಸದ ತಳಹದಿಯಲ್ಲಿ ಗಟ್ಟಿಗೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

News9 Global Summit: ಭಾರತ-ಯುಎಇ ಸಂಬಂಧವು ಯಾವುದೇ ಒಪ್ಪಂದಗಳಿಗಿಂತಲೂ ಮಿಗಿಲು: ಸಚಿವ ಹರ್ದೀಪ್ ಸಿಂಗ್ ಪುರಿ

Union Petroleum Minister Hardeep Singh Puri at News9 Global Summit: ಭಾರತ ಮತ್ತು ಯುಎಇ ನಡುವಿನ ಸಹಭಾಗಿತ್ವವು ಯಾವುದೇ ಅಂಕಿ ಅಂಶಗಳು, ಒಪ್ಪಂದಗಳಿಗಿಂತ ಮಿತಿಲಾಗಿದೆ. ಅದು ಜನರಿಗೆ ಸಂಬಂಧ ಪಟ್ಟಿದ್ದಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಯುಎಇಯಲ್ಲಿ ನಡೆದ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಿದ ಸಚಿವರು, ಎರಡೂ ದೇಶಗಳ ನಡುವಿನ ತಾಳಮೇಳದ ಬಗ್ಗೆ ಮಾತನಾಡಿದರು.

News9 Summit: ಭಾರತಕ್ಕೆ ಜಾಗತಿಕ ಧ್ವನಿಯಾಗಿದೆ ಟಿವಿ9: ನ್ಯೂಸ್9 ಗ್ಲೋಬಲ್ ಸಮಿಟ್​​ಗೆ ಚಾಲನೆ ಕೊಟ್ಟ ಟಿವಿ9 ನೆಟ್ವರ್ಕ್ ಎಂಡಿ ಬರುಣ್ ದಾಸ್

TV9 Network MD & CEO Barun Das at News9 Global Summit: ಎರಡನೇ ಆವೃತ್ತಿಯ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮ ಜೂನ್ 19ರಂದು ಯುಎಇಯಲ್ಲಿ ಚಾಲನೆಗೊಂಡಿದೆ. ಮೊದಲ ಆವೃತ್ತಿಯು 2024ರಲ್ಲಿ ಜರ್ಮನಿಯಲ್ಲಿ ನಡೆದಿತ್ತು. ಯುಎಇಯಲ್ಲಿನ ಗ್ಲೋಬಲ್ ಸಮಿಟ್ ಕಾರ್ಯಕ್ರಮಕ್ಕೆ ಟಿವಿ9 ನೆಟ್ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಚಾಲನೆ ನೀಡಿದರು. ಸ್ವಾಗತ ಭಾಷಣ ಮಾಡಿದ ಅವರು ಭಾರತ ಮತ್ತು ಯುಎಇ ನಡುವಿನ ವ್ಯಾಪಾರ ಸಂಬಂಧ ಮತ್ತು ನಾಯಕತ್ವವನ್ನು ಶ್ಲಾಘಿಸಿದರು.

ಟಿವಿ9 ನೆಟ್‌ವರ್ಕ್ ಆಯೋಜಿಸಿದ್ದ ಇಂಡಿಯನ್ ಟೈಗರ್ಸ್ ಆ್ಯಂಡ್ ಟೈಗ್ರೆಸ್ ಅಭಿಯಾನಕ್ಕೆ ಕ್ರೀಡಾ ಸಚಿವ ಮಾಂಡವಿಯಾ ಶ್ಲಾಘನೆ

ಟಿವಿ9 ನೆಟ್‌ವರ್ಕ್ ಆಯೋಜಿಸಿದ್ದ ಇಂಡಿಯನ್ ಟೈಗರ್ಸ್ ಮತ್ತು ಟೈಗ್ರೆಸ್ ಅಭಿಯಾನವನ್ನು ಇಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಶ್ಲಾಘಿಸಿದ್ದಾರೆ. ಈ ಅಭಿಯಾನದ ಬಗ್ಗೆ ಅವರು ಹೃದಯಸ್ಪರ್ಶಿ ಮಾತುಗಳನ್ನಾಡಿದ್ದಾರೆ. ಏಪ್ರಿಲ್ 2024 ರಲ್ಲಿ ಪ್ರಾರಂಭವಾದ ಈ ಅಭಿಯಾನವು ವಿಶ್ವದ ಅತಿದೊಡ್ಡ ಫುಟ್ಬಾಲ್ ಪ್ರತಿಭಾನ್ವೇಷಣಾ ಕಾರ್ಯಕ್ರಮವಾಗಿತ್ತು.

ಟಿವಿ9 WITTಯಲ್ಲಿ ಪ್ರಧಾನಿ ಮೋದಿ ಭಾಷಣ; ಅಬುಧಾಬಿಯಿಂದ ವೀಕ್ಷಿಸಿದ ಲುಲು ಗ್ರೂಪ್ ಮಾಲೀಕ

Lulu Group chairman Yusuff Ali listens PM Modi's speech at TV9 WITT: ಮಾರ್ಚ್ 28 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಟಿವಿ9ನ WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಟಿವಿ9 ನಲ್ಲಿ ಅವರ ಭಾಷಣ ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಕೇಳಿಬಂತು. ಅಬುಧಾಬಿಯ ಉದ್ಯಮಿ ಯೂಸುಫ್ ಅಲಿ ಮತ್ತು ಅವರ ತಂಡದವರು ಪ್ರಧಾನ ಮಂತ್ರಿಯವರ ಭಾಷಣವನ್ನು ಅಲ್ಲಿಂದಲೇ ಆಲಿಸಿದರು.

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ; WITT ಶೃಂಗಸಭೆಯಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

ತಮ್ಮ ಭಾಷಣದ ಸಮಯದಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ತಾಯಿಯ ಅಜ್ಜನ ಹೋರಾಟಗಳನ್ನು ನೆನಪಿಸಿಕೊಂಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಗೆದ್ದಾಗ, ನನ್ನ ಗೆಲುವನ್ನು ಅವರಿಗೆ ಅರ್ಪಿಸಿದ್ದೆ ಎಂದು ಅವರು ಹೇಳಿದರು. ತಮ್ಮ ರಾಜಕೀಯ ಪ್ರಯಾಣದ ಬಗ್ಗೆ ಮಾತನಾಡುತ್ತಾ, ಸ್ಮೃತಿ ಇರಾನಿ ತಮ್ಮನ್ನು ತಾವು ತನ್ನನ್ನು ಎಂದಿಗೂ ರಾಜಕಾರಣಿ ಎಂದು ಪರಿಗಣಿಸಲಿಲ್ಲ ಎಂದು ಒತ್ತಿ ಹೇಳಿದರು. "ನಾಯಿಯ ಬಾಲ ಎಂದಿಗೂ ನೇರವಾಗುವುದಿಲ್ಲ. ನನ್ನ ಗುರಿ ಯಾವಾಗಲೂ ರಾಜಕೀಯಕ್ಕಿಂತ ಹೆಚ್ಚಾಗಿ ಸಮಾಜ ಸೇವೆ ಮಾಡುವುದಾಗಿದೆ" ಎಂದು ಹೇಳಿದರು.

WITT Summit: 2025ರ ಅಂತ್ಯದೊಳಗೆ ಸ್ವದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಭಾರತದ ಮೊದಲ LLM ಮತ್ತು ಚಿಪ್ ಅನ್ನು 2025ರ ಅಂತ್ಯದ ವೇಳೆಗೆ ಬಿಡುಗಡೆ ಮಾಡಲಾಗುವುದು ಎಂದು WITT 2025 ಜಾಗತಿಕ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಭಾರತವು ತನ್ನ ಮೊದಲ ಸ್ವದೇಶಿ AI ಮಾದರಿ ಮತ್ತು ಸೆಮಿಕಂಡಕ್ಟರ್ ಚಿಪ್ ಅನ್ನು ಈ ವರ್ಷದ ಅಂತ್ಯದ ವೇಳೆಗೆ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ನಿನ್ನೆಯಿಂದ ಆರಂಭವಾದ ವಾಟ್ ಇಂಡಿಯಾ ಥಿಂಕ್ಸ್​ ಟುಡೇ ಜಾಗತಿಕ ಶೃಂಗಸಭೆ ಇಂದು ಮುಕ್ತಾಯವಾಗಲಿದೆ. ಭಾರತವು ತನ್ನದೇ ಆದ ಚಿಪ್‌ಗಳನ್ನು ತಯಾರಿಸಲು ಹೇಗೆ ತಯಾರಿ ನಡೆಸುತ್ತಿದೆ ಮತ್ತು ಆನ್‌ಲೈನ್ ವಿಷಯಕ್ಕಾಗಿ ನಮ್ಮದೇ ಆದ ಸಾಂಸ್ಕೃತಿಕ ರೂಢಿಗಳನ್ನು ರಚಿಸುವ ಮಹತ್ವವನ್ನು ಅವರು ಎತ್ತಿ ತೋರಿಸಿದರು.

ಬಿಜೆಪಿ ಎಲ್ಲಾ ಭಾಷೆಯನ್ನೂ ಗೌರವಿಸುತ್ತದೆ, ದಕ್ಷಿಣ ಭಾರತವನ್ನು ನಿರ್ಲಕ್ಷ್ಯಿಸುತ್ತಿಲ್ಲ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ

ಟಿವಿ9 ನೆಟ್​ವರ್ಕ್ ಆಯೋಜಿಸಿರುವ WITT 2025 ಶೃಂಗಸಭೆಯಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಅವರು ತಮಿಳುನಾಡು ಸಿಎಂ ಸ್ಟಾಲಿನ್ ರಾಜಕೀಯ ಲಾಭಕ್ಕಾಗಿ ಹಿಂದಿ ವಿರೋಧಿ ವಿಷಯವನ್ನು ಎತ್ತುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಎಲ್ಲಾ ಮಾತೃಭಾಷೆಗಳನ್ನು ಗೌರವಿಸುತ್ತದೆ ಮತ್ತು ದಕ್ಷಿಣ ಭಾರತವನ್ನು ನಿರ್ಲಕ್ಷಿಸುವುದಿಲ್ಲ ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಹಿಂದಿ ಹೇರಿಕೆಯ ಆರೋಪವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

WITT Global Summit 2025: ಅತಿ ಹೆಚ್ಚು ಬೇಡಿಕೆಯಿರುವ ಖನಿಜ ಸಂಪತ್ತು ದೇಶದಲ್ಲಿದೆ, ಪತ್ತೆ ಹಚ್ಚಿ ಹೊರತೆಗೆಯುವ ಪ್ರಯತ್ನವಾಗಲಿ : ಅನಿಲ್ ಅಗರ್ವಾಲ್

ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಜಾಗತಿಕ ಶೃಂಗಸಭೆಯ ಮೂರನೇ ಆವೃತ್ತಿ ನಿನ್ನೆ ಇಂದು ಎರಡು ದಿನಗಳ ಕಾಲ ನಡೆಯುತ್ತಿದೆ. ಎರಡನೇ ದಿನದ ಕಾರ್ಯಕ್ರಮದಲ್ಲಿ ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಭಾಗವಹಿಸಿದ್ದು, 'ಜಗತ್ತಿನಲ್ಲಿ ಅತಿ ಹೆಚ್ಚು ಬೇಡಿಕೆಯಿರುವ ಖನಿಜಗಳು ದೇಶದಲ್ಲಿವೆ. ಅದನ್ನು ಹೊರತೆಗೆಯುವ ಬಗ್ಗೆ ವಿವರಿಸಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ