What India Thinks Today WITT
ದೇಶದ ಅತಿದೊಡ್ಡ ಸುದ್ದಿಸಂಸ್ಥೆ ಟಿವಿ9 ನೆಟ್ವವರ್ಕ್ ನಡೆಸುತ್ತಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಹಿರಿಯ ರಾಜಕೀಯ ನಾಯಕರು, ಕೇಂದ್ರ ಸರ್ಕಾರದ ಸಚಿವರು, ವಿಜ್ಞಾನಿಗಳು, ಕ್ರೀಡಾ ಸಾಧಕರು, ಉದ್ಯಮಿಗಳು, ಸಿನಿಮಾ ನಟ-ನಟಿಯರು, ವಿಶ್ವದ ನಾಯಕರು ಭಾಗವಹಿಸಲಿದ್ದಾರೆ. ಈ ವೇದಿಕೆಯಲ್ಲಿ ಹಲವು ವಿಚಾರಗಳ ಕುರಿತು ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಮಾ.28ರಿಂದ ಮಾ. 29 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದು, ಅವರು ಕೂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರ ಜತೆಗೆ ಸಾಂಸ್ಕೃತಿಕ ಹಾಗೂ ಅನೇಕ ಪ್ರದರ್ಶನಗಳು ನಡೆಯಲಿದೆ.
ನನ್ನ ಪಕ್ಷಕ್ಕೆ ನಾನು ಯೋಧನಂತೆ: ಟಿವಿ9 ಶೃಂಗಸಭೆಯಲ್ಲಿ ಡಿಕೆ ಶಿವಕುಮಾರ್ ಮಾತು
ಟಿವಿ9 ನೆಟ್ವರ್ಕ್ ಈ ವರ್ಷವೂ ತನ್ನ ಪ್ರತಿಷ್ಠಿತ ಕಾರ್ಯಕ್ರಮ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯ ನಾಲ್ಕನೇ ಆವೃತ್ತಿಗೆ ದೆಹಲಿಯಲ್ಲಿ ನಿನ್ನೆ ಚಾಲನೆ ದೊರೆತಿದೆ. ಇಂದಿನ ಕಾರ್ಯಕ್ರಮದಲ್ಲಿ ಅಥಿತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿ ತಮ್ಮ ರಾಜಕೀಯ ಜೀವನದ ಬಗ್ಗೆ ಮಾತನಾಡಿದ್ದಾರೆ.
- Gangadhar Saboji
- Updated on: Mar 24, 2026
- 10:02 pm
ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ
ಟಿವಿ9 ನೆಟ್ವರ್ಕ್ ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕೂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಬಿಜೆಪಿ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ತಾರತಮ್ಯ ಮಾಡುತ್ತಿದೆ ಎಂದು ಸಿಎಂ ರೇವಂತ್ ಆರೋಪಿಸಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ನೋಡಿಕೊಳ್ಳುವವರಲ್ಲಿ ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ದಕ್ಷಿಣ ರಾಜ್ಯಗಳಿಂದ ಯಾರಾದರೂ ಇದ್ದಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
- Sushma Chakre
- Updated on: Mar 24, 2026
- 9:32 pm
WITT Summit 2026: ಪಂಜಾಬ್ನಲ್ಲಿ ದ್ವೇಷದ ಬೀಜ ಮೊಳಕೆಯೊಡುವುದಿಲ್ಲ; ವಿಟ್ ಶೃಂಗಸಭೆಯಲ್ಲಿ ಸಿಎಂ ಭಗವಂತ್ ಮಾನ್
ಪಂಜಾಬ್ನಲ್ಲಿ ಪ್ರತಿಯೊಂದು ಬೀಜವೂ ಬೆಳೆಯುತ್ತದೆ, ಆದರೆ ದ್ವೇಷದ ಬೀಜ ಮಾತ್ರ ಮೊಳಕೆಯೊಡೆಯುವುದಿಲ್ಲ. ಭಾರತ ಉಂಗುರವಾದರೆ ಪಂಜಾಬ್ ಅದರ ಮೇಲಿನ ವಜ್ರವಿದ್ದಂತೆ ಎಂದು ಪಂಜಾಬ್ನ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟಿವಿ9 WITT ಶೃಂಗಸಭೆಯಲ್ಲಿ ಮಾತನಾಡಿದ್ದಾರೆ. ವಿದ್ಯುತ್ ಬಿಲ್ಗಳನ್ನು ಮನ್ನಾ ಮಾಡುವುದು ಮತ್ತು ಯುವಕರಿಗೆ ಉದ್ಯೋಗಗಳನ್ನು ಒದಗಿಸುವುದು ಸೇರಿದಂತೆ ತಮ್ಮ ಸರ್ಕಾರ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ ಎಂದು ಅವರು ಹೇಳಿದರು.
- Sushma Chakre
- Updated on: Mar 24, 2026
- 8:48 pm
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಟಿವಿ9 ಶೃಂಗಸಭೆಯಲ್ಲಿ ಡಿಕೆ ಶಿವಕುಮಾರ್ ಮಾತು
WITT ಶೃಂಗಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ನ ಸಂಕಷ್ಟ ನಿವಾರಕ ಪಾತ್ರ, 24/7 ರಾಜಕೀಯ ಬದುಕು ಮತ್ತು ತಿಹಾರ್ ಜೈಲು ಅನುಭವ ಹಂಚಿಕೊಂಡಿದ್ದಾರೆ. ಅಸ್ಸಾಂನಲ್ಲಿ ಪಕ್ಷದ ಯುವ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ನ ಸಮಗ್ರ ನೀತಿಗಳನ್ನು ಒತ್ತಿಹೇಳಿದರು. ನಾನು ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ ಎಂದಿದ್ದಾರೆ.
- Gangadhar Saboji
- Updated on: Mar 24, 2026
- 8:32 pm
WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ
TV9 ನೆಟ್ವರ್ಕ್ ಆಯೋಜಿಸಿರುವ WITT ಶೃಂಗಸಭೆಯಲ್ಲಿ ಇಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಭಾಗವಹಿಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ. ಕೇಂದ್ರ ಸರ್ಕಾರ ಕಲ್ಲಿದ್ದಲು ಭದ್ರತೆಗೆ ಒತ್ತು ನೀಡುವುದರ ಜೊತೆಗೆ ನಿರ್ಣಾಯಕ ಖನಿಜಗಳ ಮೇಲೆ ಸ್ವಾವಲಂಬಿಯಾಗಲು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ನಿನ್ನೆ ಆರಂಭವಾದ ಈ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಭಾಷಣ ಮಾಡಿದ್ದರು.
- Sushma Chakre
- Updated on: Mar 24, 2026
- 7:22 pm
WITT Summit 2026: ಸ್ಟಾರ್ಟಪ್ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನ ಸಂಬದ್ಧವಾಗಿರಬೇಕು ಎಂದ ತಜ್ಞರು
What India Thinks Today (WITT) Summit 2026: ನವದೆಹಲಿಯ ಅಶೋಕಾ ಹೋಟೆಲ್ನಲ್ಲಿ ಟಿವಿ9 ನೆಟ್ವರ್ಕ್ ಆಯೋಜಿಸಿರುವ ಡಬ್ಲ್ಯುಐಟಿಟಿ ಸಮಿಟ್ 2026 ಕಾರ್ಯಕ್ರಮದಲ್ಲಿ ನಾಲ್ವರು ತಜ್ಞರು ಸ್ಟಾರ್ಟಪ್ಗಳ ಮೌಲ್ಯದ ಬಗ್ಗೆ ಮಾತನಾಡಿದರು. ಸ್ಟಾರ್ಟಪ್ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನವು ತಾಳೆಯಾಗಬೇಕು ಎನ್ನುವುದು ಈ ತಜ್ಞರ ಒಮ್ಮತದ ಅನಿಸಿಕೆ.
- Vijaya Sarathy SN
- Updated on: Mar 24, 2026
- 1:39 pm
PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ
TV9 ನೆಟ್ವರ್ಕ್ ಆಯೋಜಿಸಿರುವ'ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆ 2026' ದೆಹಲಿಯಲ್ಲಿ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಶೃಂಗಸಭೆಯಲ್ಲಿ ಇಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ಶೃಂಗಸಭೆಯಲ್ಲಿ ಜಾಗತಿಕ ಸಂಘರ್ಷಗಳ ಕುರಿತು ಭಾರತದ ಕಾರ್ಯತಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ಇಂದು ಜಗತ್ತು ಎದುರಿಸುತ್ತಿರುವ ಗಂಭೀರ ಪರಿಸ್ಥಿತಿಗಳು ತೀವ್ರ ಕಳವಳಕಾರಿ ಎಂದು ಅವರು ಹೇಳಿದರು.
- Sushma Chakre
- Updated on: Mar 23, 2026
- 10:50 pm
PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್ನಲ್ಲಿ ಮೋದಿ ಮಾತನಾಡಿ, ಭಾರತದ ಆರ್ಥಿಕತೆ, ಭಾರತದ ಸಾಧನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.
- Ramesh B Jawalagera
- Updated on: Mar 23, 2026
- 10:34 pm
WITT Summit 2026: ಪ್ರಧಾನಿ ನರೇಂದ್ರ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಇಂದು ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್ ಜೂಪಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ನಾಳೆಯೂ ನಡೆಯುವ ಈ ಶೃಂಗಸಭೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ, ರಾಜಸ್ಥಾನದ ಸಿಎಂ ಭಜನ್ಲಾಲ್ ಶರ್ಮಾ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್ ಭಾಗವಹಿಸಲಿದ್ದಾರೆ.
- Sushma Chakre
- Updated on: Mar 23, 2026
- 10:34 pm
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್
ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ.
- Ramesh B Jawalagera
- Updated on: Mar 23, 2026
- 10:18 pm
PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ಟಿವಿ9 ನೆಟ್ವರ್ಕ್ ಆಯೋಜಿಸಿರುವ ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ (WITT Summit- 2026)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಅಭಿವೃದ್ಧಿಯ ಪಥದ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಟಿವಿ9ನ ಈ WITT ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.
- Sushma Chakre
- Updated on: Mar 23, 2026
- 10:03 pm
WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ
My Home Group Executive Vice Chairman Jupally Ramu Rao speech at WITT Summit 2026: ಟಿವಿ9 ನೆಟ್ವರ್ಕ್ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯ 2026ರ ಆವೃತ್ತಿಗೆ ಇಂದು ಸೋಮವಾರ ಚಾಲನೆ ಸಿಕ್ಕಿದೆ. ಮೈ ಹೋಮ್ ಗ್ರೂಪ್ನ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತ ಮಾಡಿದರು. ಜೂಪಲ್ಲಿ ಅವರು ಮಾಡಿದ ಭಾಷಣದ ಕೆಲ ಮುಖ್ಯಾಂಶಗಳು ಇಲ್ಲಿವೆ.
- Vijaya Sarathy SN
- Updated on: Mar 23, 2026
- 9:27 pm