AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women

Women

ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ | ಇದು ಭಾರತದಲ್ಲಿ ಮಹಿಳೆಯರಿಗೆ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ನೀಡಲಾಗುವ ಗೌರವ. ಕಾನೂನು ಕೂಡ ಮಹಿಳೆಯರಿಗೆ ಆಸರೆಯಾಗಿದೆ. ಆದರೆ, ವಾಸ್ತವದಲ್ಲಿ ಪುರುಷಪ್ರಧಾನವಾಗಿರುವ ಈ ಸಮಾಜದಲ್ಲಿ ಮಹಿಳೆಯರಿಗೆ ಸಮಸ್ಯೆಗಳ ಮಹಾಪೂರವೇ ಇದೆ. ಅದರ ನಡುವೆಯೂ ನಾರಿಯರು ಬದಲಾಗುತ್ತಿದ್ದಾರೆ. ಸ್ವತಂತ್ರರಾಗುತ್ತಿದ್ದಾರೆ, ಸ್ವತಂತ್ರ ಪ್ರವೃತ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ದೈಹಿಕವಾಗಿ ಬಿಟ್ಟರೆ ಇವತ್ತು ಪುರುಷರಿಗಿಂತ ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ. ಹೆಣ್ಣು ಅಬಲೆಯಲ್ಲ, ಸಬಲೆ ಎಂಬುದು ಬಾರಿ ಬಾರಿ ಋಜುವಾತಾಗುತ್ತಿದೆ. ಆಕೆ ಅಡುಗೆ ಮನೆಗೆ ಈಗ ಸೀಮಿತವಾಗಿಲ್ಲ. ಬಹಳ್ಟು ಮಹಿಳಾ ಉದ್ದಿಮೆದಾರರು ಹೊರಹೊಮ್ಮುತ್ತಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ಮಹಿಳೆಯರೂ ಪಾಲ್ಗೊಳ್ಳುವುದು ಇವತ್ತಿನ ದಿನದ ಬಹಳ ಅಗತ್ಯತೆ ಆಗಿದೆ.

ಇನ್ನೂ ಹೆಚ್ಚು ಓದಿ

ಆಫ್ರಿಕಾ ಮಾರುಕಟ್ಟೆಯಲ್ಲಿ ಭಾರತೀಯ ಕಂಪನಿಗಳ ಅಬ್ಬರ; ಸ್ಥಳೀಯ ಉತ್ಪಾದನೆಗೂ ಮುಂದು

Africa becoming growth engine for Indian FMCG giants: ಮುಂದಿನ ದಿನಗಳು ಭಾರತ, ಆಫ್ರಿಕಾದಂತಹ ತೃತೀಯ ಜಗತ್ತಿಗೆ ಸೇರಿವೆ. ಆಫ್ರಿಕನ್ ದೇಶಗಳು ಉತ್ತಮ ಬೆಳವಣಿಗೆ ಹೊಂದುತ್ತಿದ್ದು, ಆಫ್ರಿಕಾ ಮಾರುಕಟ್ಟೆ ವಿಸ್ತಾರಗೊಳ್ಳುತ್ತಿದೆ. ಭಾರತೀಯ ಕಂಪನಿಗಳಿಗೆ ಆಫ್ರಿಕಾ ರಫ್ತು ಮಾರುಕಟ್ಟೆಯಾಗಿ ಉಳಿಯದೆ ಗ್ರೋತ್ ಎಂಜಿನ್ ಎನಿಸಿವೆ.

370 ರೂ. ಬಿರಿಯಾನಿ ವಿವಾದ: ಮುಖ ಮುಚ್ಚಿಕೊಂಡು ತಿರುಗಾಡುವ ಹಂತಕ್ಕೆ ಬಂದ ಪ್ರಣೀತ್ ಮೋರೆ

ಈ ಮೊದಲು ಭಾರಿ ಹುಮ್ಮಸ್ಸಿನಲ್ಲಿ ಜೋಕ್ ಮಾಡುತ್ತಿದ್ದ ಪ್ರಣೀತ್ ಮೋರೆ ಈಗ ಮುಖ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ. ಮಾಧ್ಯಮದವರು ಕೇಳಿದ ಪ್ರಶ್ನೆಗೂ ಕೂಡ ಅವರು ಉತ್ತರ ನೀಡಿಲ್ಲ. ತಮ್ಮ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಕಾಮಿಡಿ ಮಾಡಿದ್ದಕ್ಕೆ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗವು ವಿಚಾರಣೆಗೆ ಕರೆಸಿದೆ.

370 ರೂ. ಬಿರಿಯಾನಿ ವಿವಾದ: ಪ್ರಣಿತ್ ಮೋರೆ, ಹಿಮಾಂಶು, ಡಾ. ಸೆಜಲ್​ಗೆ ಮಹಿಳಾ ಆಯೋಗ ನೋಟಿಸ್

ಕಾಮಿಡಿ ಶೋನಲ್ಲಿ ಮಹಿಳೆಯರ ಬಗ್ಗೆ ಮತ್ತು ಪುರುಷರ ಮೃತದೇಹಗಳ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದಕ್ಕಾಗಿ ಪ್ರಣಿತ್ ಮೋರೆ, ಹಿಮಾಂಶು ಜಾಂಗ್ರಾ ಮತ್ತು ಡಾ. ಸೇಜಲ್​ ಪವಾರ್​ಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪೊಲೀಸರು ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್

ಶೇ. 90ರಷ್ಟು ಮಹಿಳಾ ರಾಜಕಾರಣಿಗಳು ಹಿರಿಯ ನಾಯಕರ ಬೆಡ್ ರೂಂನೊಳಗೆ ಹೋಗಿ ರಾಜಿ ಮಾಡಿಕೊಂಡಿರುತ್ತಾರೆ ಎಂಬ ಬಿಹಾರದ ಪೂರ್ನಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ರಾಜಕೀಯದಲ್ಲಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಹೇಳುವ ಮೂಲಕ ಅವರು ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ್ದಾರೆ. ರಾಜಿ ಮಾಡಿಕೊಳ್ಳದೆ ಮಹಿಳೆಯರು ರಾಜಕೀಯದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬಸವಣ್ಣನವರೇ ಮಹಿಳಾ ಮೀಸಲಾತಿಯ ಆದ್ಯ ಪ್ರವರ್ತಕ, ಮಹಿಳಾ ಮೀಸಲಾತಿಗೆ ಎಲ್ಲಾ ಪಕ್ಷಗಳು ಕೈಜೋಡಿಸಬೇಕು: ಜಯಮೃತ್ಯುಂಜಯ ಶ್ರೀ

ಜಯಮೃತ್ಯುಂಜಯ ಶ್ರೀ ಅವರು ಮಹಿಳಾ ಮೀಸಲಾತಿಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಕರೆ ನೀಡಿದ್ದಾರೆ. 12ನೇ ಶತಮಾನದ ಬಸವಣ್ಣನವರ ಮಹಿಳಾ ಸಬಲೀಕರಣದ ಆದರ್ಶಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರ ಶೀಘ್ರವೇ ರಾಜಕೀಯ ಮೀಸಲಾತಿ ಜಾರಿಗೊಳಿಸಬೇಕು ಎಂದಿದ್ದಾರೆ. ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಸ್ವಾಮೀಜಿ, ಇದು ತಮ್ಮ ಹೋರಾಟ ಹತ್ತಿಕ್ಕುವ ಯತ್ನ ಎಂದು ಹೇಳಿದ್ದಾರೆ.

ಈ ವಂದೇ ಭಾರತ್ ರೈಲಿನಲ್ಲಿ ಪುರುಷ ಸಿಬ್ಬಂದಿಯೇ ಇರ್ಲಿಲ್ಲ, ಎಲ್ಲರೂ ಮಹಿಳೆಯರೇ!

ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು–ಮೈಸೂರು ನಡುವಿನ ವಂದೇ ಭಾರತ್ನಎಕ್ಸ್​​ಪ್ರೆಸ್ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ನೈಋತ್ಯ ರೈಲ್ವೆ ನಡೆಸಿದ ಈ ವಿಶೇಷ ಕಾರ್ಯಕ್ರಮವು ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆಯಾಗಿ ಗಮನಸೆಳೆಯಿತು. ಮಹಿಳಾ ಸಿಬ್ಬಂದಿಯಿಂದಲೇ ವಂದೇ ಭಾರತ್ ರೈಲು ಕಾರ್ಯಾಚರಣೆ ನಡೆಸಿದ ವಿಡಿಯೋ ಇಲ್ಲಿದೆ ನೋಡಿ.

ತಮ್ಮ ಜೀವನದಲ್ಲಿ ಪ್ರಭಾವ ಬೀರಿದ ಮಹಿಳೆಯರನ್ನು ಸ್ಮರಿಸಿದ ಗೌತಮ್ ಅದಾನಿ

Gautam Adani shares personal post on International Women's Day: ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಂದು ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಲಿಂಕ್ಡ್​ಇನ್​ನಲ್ಲಿ ಭಾವುಕವಾದ ಪೋಸ್ಟ್ ಹಾಕಿದ್ದಾರೆ. ತಮ್ಮ ಜೀವನದಲ್ಲಿ ಬಹಳವೇ ಪ್ರಭಾವ ಬೀರಿದ ಮಹಿಳೆಯರನ್ನು ಅವರು ಈ ಪೋಸ್ಟ್​ನಲ್ಲಿ ನೆನದು, ಗೌರವಿಸಿದ್ದಾರೆ. ಅಮ್ಮ, ಹೆಂಡತಿ, ಸೊಸೆಯಂದಿರು ಮತ್ತು ಮೊಮ್ಮಕ್ಕಳು ತಮ್ಮ ಬೆಳವಣಿಗೆಯ ಉದ್ದಕ್ಕೂ ಹೇಗೆ ಪ್ರಭಾವ ಬೀರಿದ್ದಾರೆ ಎಂದು ಅದಾನಿ ವಿವರಿಸಿದ್ದಾರೆ.

ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರೇ ಹೆಚ್ಚು ಫಲಾನುಭವಿಗಳು

Financial schemes helping upliftment of women: ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಪಿಎಂ ಸ್ವನಿಧಿ, ಪಿಎಂ ಮುದ್ರಾ ಮತ್ತು ಪಿಎಂ ಜನ್ ಧನ್ ಯೋಜನೆಗಳೂ ಇವೆ. ಸ್ವನಿಧಿ ಮತ್ತು ಮುದ್ರಾ ಯೋಜನೆಗಳು ಸಣ್ಣಪುಟ್ಟ ವ್ಯಾಪಾರಿಗಳಿಗೆ ಬಹಳ ಮುಖ್ಯವಾದ ಅಡಮಾನರಹಿತವಾದ ಸಾಲ ನೀಡಲಾಗುತ್ತದೆ. ಇವುಗಳ ಫಲಾನುಭವಿಗಳಲ್ಲಿ ಮಹಿಳೆಯರೇ ಅಧಿಕ.

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ

Women entrepreneur Disha Garg's inspiring journey: ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿಶಾಗೆ ಹಿಮ್ಮೆಟ್ಟುವುದನ್ನು ಬಿಟ್ಟು ಬೇರೆ ದಾರಿ ಇದ್ದಂತಿರಲಿಲ್ಲ. ಈ ಕ್ಲಿಷ್ಟ ಸಂದರ್ಭಗಳಿಗೆ ಬಲಿಯಾಗುವ ಬದಲು, ಅವರು ಹೊಸ ಬದುಕಿನ ದಾರಿ ಕಂಡುಕೊಳ್ಳತೊಡಗಿದರು.

Inspiring: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ

Inspiring Story of Prachi Poddar of Jagannath Stones: ಪ್ರಾಚಿ ಪೊದ್ದಾರ್‌ಗೆ ಹಣಕಾಸು ವಿಷಯದಲ್ಲಿ ಆಸಕ್ತಿ ಇತ್ತು. ಕಾಲೇಜು ದಿನಗಳಲ್ಲಿ, ಗಣಿತ ಮತ್ತು ಅಕೌಂಟೆನ್ಸಿ ವಿಷಯಗಳು ಪ್ರಾಚಿ ಗಮನ ಸೆಳೆದವು. ಮ್ಯಾನೇಜ್ಮೆಂಟ್ ಕೋರ್ಸ್ ಸೇರಲು ಇದೂ ಒಂದು ಕಾರಣವಾಯಿತು. ಬೆಂಗಳೂರಿನ ಐಐಎಂನಲ್ಲಿ ಮ್ಯಾನೇಜ್ಮೆಂಟ್ ಅಧ್ಯಯನ ಮಾಡಿದ ಬಳಿಕ ತವರಿಗೆ ಮರಳಿ, ಮನೆಯವರು ನೋಡಿದ್ದ ಗಂಡನ್ನು ವಿವಾಹಿತರಾದರು. ಆದರೆ, ಮದುವೆ ಬಳಿಕ ಅವರು ತಮ್ಮನ್ನು ತಾವು ಮಿತಿಗೊಳಿಸಲಿಲ್ಲ. ಅವರ ಫೈನಾನ್ಷಿಯಲ್ ಜ್ಞಾನವು ಹೊಸ ಆಲೋಚನೆಗಳನ್ನು ಹುಟ್ಟುಹಾಕಿತು.

Inspiring Story: ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ದೀಪಾ ದೇವರಾಜನ್

Purple Dreams ಸಂಸ್ಥಾಪಕಿ ದೀಪಾ ದೇವರಾಜನ್ ಅವರು, ಆಕಾಶದ ಆಚೆ ಇನ್ನೊಂದು ಆಕಾಶ ಇರಬಹುದೆಂಬ ಆಲೋಚನೆಯೊಂದಿಗೆ ತನ್ನ ದಿನವನ್ನು ಪ್ರಾರಂಭಿಸುತ್ತಾರಂತೆ. "ಮಗು, ನಾವು ದಕ್ಷಿಣದವರು, ನೀನು ಯಾವುದೇ ವ್ಯವಹಾರ ನಡೆಸಲು ಸಾಧ್ಯವಾಗುವುದಿಲ್ಲ. ಮೊದಲು ನೀನು ಓದಬೇಕು, ನಂತರ ಒಳ್ಳೆಯ ಕೆಲಸ ಗಳಿಸಬೇಕು, ಮತ್ತು ನಂತರ ಸಾಕಷ್ಟು ಹಣ ಸಂಪಾದನೆ ಮಾಡಿ ಬಳಿಕ ಮದುವೆ ಆಗಬೇಕು" ಎಂದು ತನ್ನ ತಾಯಿ ಒಮ್ಮೆ ಹೇಳಿದ್ದಾಗಿ ಅವರು ನೆನಪಿಸಿಕೊಳ್ಳುತ್ತಾರೆ.

ನಿರ್ಮಲಾ ಸೀತಾರಾಮನ್ ಸಹಿ ನಕಲು ಮಾಡಿ ಮಹಿಳೆಯೊಬ್ಬಳಿಂದ ಕೋಟಿ ರೂ ವಸೂಲಿ ಮಾಡಿದ ದುಷ್ಕರ್ಮಿಗಳು

Pune Woman lost Rs 99 lakh to scammers: ದುಷ್ಕರ್ಮಿಗಳ ನಕಲಿ ದಾಖಲೆಗಳ ಸುಳಿಗೆ ಸಿಲುಕಿದ ಪುಣೆಯ ಮಹಿಳೆಯೊಬ್ಬರು 99 ಲಕ್ಷ ರೂ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. 62 ವರ್ಷದ ನಿವೃತ್ತ ಐಎಎಸ್ ಅಧಿಕಾರಿಯಾದ ಈ ಮಹಿಳೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಅರೆಸ್ಟ್ ವಾರಂಟ್, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಖದೀಮರು ಮಹಿಳೆಯ ಬ್ಯಾಂಕ್ ಅಕೌಂಟ್​ಗಳಿಂದ ಎಲ್ಲಾ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ.

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್