Sign In

By signing in or creating an account, you agree with Associated Broadcasting Company's Terms & Conditions and Privacy Policy.

Women

Women

ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ | ಇದು ಭಾರತದಲ್ಲಿ ಮಹಿಳೆಯರಿಗೆ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ನೀಡಲಾಗುವ ಗೌರವ. ಕಾನೂನು ಕೂಡ ಮಹಿಳೆಯರಿಗೆ ಆಸರೆಯಾಗಿದೆ. ಆದರೆ, ವಾಸ್ತವದಲ್ಲಿ ಪುರುಷಪ್ರಧಾನವಾಗಿರುವ ಈ ಸಮಾಜದಲ್ಲಿ ಮಹಿಳೆಯರಿಗೆ ಸಮಸ್ಯೆಗಳ ಮಹಾಪೂರವೇ ಇದೆ. ಅದರ ನಡುವೆಯೂ ನಾರಿಯರು ಬದಲಾಗುತ್ತಿದ್ದಾರೆ. ಸ್ವತಂತ್ರರಾಗುತ್ತಿದ್ದಾರೆ, ಸ್ವತಂತ್ರ ಪ್ರವೃತ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ದೈಹಿಕವಾಗಿ ಬಿಟ್ಟರೆ ಇವತ್ತು ಪುರುಷರಿಗಿಂತ ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ. ಹೆಣ್ಣು ಅಬಲೆಯಲ್ಲ, ಸಬಲೆ ಎಂಬುದು ಬಾರಿ ಬಾರಿ ಋಜುವಾತಾಗುತ್ತಿದೆ. ಆಕೆ ಅಡುಗೆ ಮನೆಗೆ ಈಗ ಸೀಮಿತವಾಗಿಲ್ಲ. ಬಹಳ್ಟು ಮಹಿಳಾ ಉದ್ದಿಮೆದಾರರು ಹೊರಹೊಮ್ಮುತ್ತಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ಮಹಿಳೆಯರೂ ಪಾಲ್ಗೊಳ್ಳುವುದು ಇವತ್ತಿನ ದಿನದ ಬಹಳ ಅಗತ್ಯತೆ ಆಗಿದೆ.

ಇನ್ನೂ ಹೆಚ್ಚು ಓದಿ

ಯುಪಿಐ ಇನ್ಸೆಂಟಿವ್ ಸ್ಕೀಮ್ ಸೇರಿದಂತೆ ವಿವಿಧ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

Central govt initiatives: 2,000 ರೂ ಒಳಗಿನ ಯುಪಿಐ ಹಣ ಪಾವತಿಗೆ ವರ್ತಕರು ಪ್ರೋತ್ಸಾಹಕ ಧನ ಪಡೆಯಲಿದ್ದಾರೆ. ಇದು ಗ್ರಾಹಕರಿಂದ ಸಣ್ಣ ವರ್ತಕರಿಗೆ ಮಾಡಲಾಗುವ ಯುಪಿಐ ಪೇಮೆಂಟ್​​ಗೆ ಅನ್ವಯ ಆಗುತ್ತದೆ. ಈ ಉಪಕ್ರಮಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಹಾಗೆಯೇ, ಮಹಿಳಾ ಸ್ನೇಹಿ ಪಂಚಾಯಿತಿಗಳ ನಿರ್ಮಾಣಕ್ಕೂ ಸರ್ಕಾರ ಯೋಜನೆ ಆರಂಭಿಸಿದೆ.

ಫ್ಯಾಮಿಲಿ ಪೆನ್ಷನ್ ನೀತಿಯಲ್ಲಿ ಸುಧಾರಣೆ; ವಿಚ್ಛೇದಿತೆಯರು, ವಿಧವೆಯರು, ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ

Women to benefit from reforms in family pension policies: ಮಹಿಳೆಯರಿಗೆ ಸಂಕಷ್ಟ ಸಂದರ್ಭಗಳಲ್ಲಿ ಬಲ ಸಿಗುವ ರೀತಿಯಲ್ಲಿ ಸರ್ಕಾರ ಪೆನ್ಷನ್ ಸ್ಕೀಮ್, ಮ್ಯಾಟರ್ನಿಟಿ ಲೀವ್ ಇತ್ಯಾದಿ ನೀತಿಗಳಲ್ಲಿ ಮಾರ್ಪಾಡು ತಂದಿದೆ. ವಿಚ್ಛೇದಿತ ಮಹಿಳೆಯರು ತಮ್ಮ ತಂದೆ ಅಥವಾ ತಾಯಿಯ ಪಿಂಚಣಿ ಸೌಲಭ್ಯ ಪಡೆಯಲು ಅವಕಾಶ ನೀಡಲಾಗಿದೆ. ವಿಧವೆಯರು ಮರುವಿವಾಹವಾದರೂ ತಮ್ಮ ಮೃತ ಪತಿಯ ಪಿಂಚಣಿ ಪಡೆಯಲು ಅವಕಾಶ ನೀಡಲಾಗಿದೆ.

ಮಹಿಳಾ ದಿನಾಚರಣೆ ವಿಶೇಷ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿ ರಥಕ್ಕೆ ಮಹಿಳಾ ಸಾರಥಿ

ಚಿಕ್ಕಬಳ್ಳಾಪುರ ಜಿಲ್ಲೆಯ ತಿಪ್ಪೇನಹಳ್ಳಿ ಗ್ರಾಮದ ನಂದಿನಿ ಎಂಬುವರು ಗ್ರಾಮ ಪಂಚಾಯತಿಯ ಸ್ವಚ್ಛತಾ ವಾಹನದ ಚಾಲಕಿಯಾಗಿದ್ದಾರೆ. ನಂದಾದೀಪ ಸ್ವಸಹಾಯ ಸಂಘದ ಸಹಾಯದಿಂದ ಚಾಲನಾ ತರಬೇತಿ ಪಡೆದ ಅವರು, ಪುರುಷರಿಗಿಂತ ಕಡಿಮೆಯಿಲ್ಲದೆ ವಾಹನ ಚಾಲನೆ ಮಾಡುತ್ತಿದ್ದಾರೆ. ಅವರ ದುಡಿಮೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ.

Womens Car: ಜಾಗ್ವಾರ್- ಆಡಿ ಅಲ್ಲ: ಈ ಕಾರುಗಳು ಮಹಿಳೆಯರ ಮೊದಲ ಆಯ್ಕೆಯಂತೆ

Womens Car: ಭಾರತದ ಬೆಳೆಯುತ್ತಿರುವ ಕಾರು ಮಾರುಕಟ್ಟೆಯಲ್ಲಿ, ಕಾರು ಖರೀದಿದಾರರಲ್ಲಿ ಮಹಿಳೆಯರ ಪಾಲು ವೇಗವಾಗಿ ಹೆಚ್ಚುತ್ತಿದೆ ಎಂದು ಆಟೋಮೊಬೈಲ್ ಉದ್ಯಮ ತಜ್ಞರು ಹೇಳುತ್ತಾರೆ. ಕಳೆದ ಐದು ವರ್ಷಗಳಲ್ಲಿ ಕಾರುಗಳನ್ನು ಖರೀದಿಸುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ ಎಂದು ವಾಹನ ಮಾರಾಟದ ದತ್ತಾಂಶಗಳು ತೋರಿಸುತ್ತವೆ.

Akka Cafe: ಕರ್ನಾಟಕ ಬಜೆಟ್: ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘಗಳ ಸ್ಥಾಪನೆ

Karnataka Budget 2025-26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4.09 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಗೃಹ ಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆಗಳಿಗೆ 28,608 ಕೋಟಿ ರೂ ಹಾಗೂ 10,100 ಕೋಟಿ ರೂ ನೀಡಿದ್ದಾರೆ. ರಾಜ್ಯಾದ್ಯಂತ ಅಕ್ಕ ಕೆಫೆ ಮತ್ತು ಅಕ್ಕ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಸ್ಥಾಪನೆಯಾಗಲಿದೆ.

ನಮೋ ಆ್ಯಪ್ ಮೂಲಕ ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳುವ ಸುವರ್ಣಾವಕಾಶ

ಮೈಲಿಗಲ್ಲುಗಳನ್ನು ಸಾಧಿಸಿದ, ನಾವೀನ್ಯತೆಗಳನ್ನು ಮುನ್ನಡೆಸಿದ ಅಥವಾ ಅರ್ಥಪೂರ್ಣ ಪರಿಣಾಮವನ್ನು ಬೀರಿದ ಮಹಿಳೆಯರು ಈಗ ಈ ವೇದಿಕೆಯ ಮೂಲಕ ತಮ್ಮ ಕಥೆಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ಒಂದು ಅನನ್ಯ ಅವಕಾಶವನ್ನು ಹೊಂದಿದ್ದಾರೆ. ಮಾರ್ಚ್ 8, ಅಂತರರಾಷ್ಟ್ರೀಯ ಮಹಿಳಾ ದಿನದಂದು ನಾವು ಜೀವನದ ಎಲ್ಲಾ ಹಂತಗಳ ಮಹಿಳೆಯರ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸಾಧನೆಗಳನ್ನು ಆಚರಿಸುತ್ತೇವೆ. ವಿಶೇಷ ಮನ್ ಕಿ ಬಾತ್ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೂರ್ತಿದಾಯಕ ಉಪಕ್ರಮವನ್ನು ಘೋಷಿಸಿದರು. ಅವರು ತಮ್ಮ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ ಅಸಾಧಾರಣ ಮಹಿಳೆಯರಿಗೆ ಒಂದು ದಿನಕ್ಕಾಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮುಡಿಪಾಗಿಡಲಿದ್ದಾರೆ.

ಭಾರತದ ಕೃಷಿ ತಂತ್ರಜ್ಞಾನ ಕ್ಷೇತ್ರಕ್ಕೆ ಪುಷ್ಟಿ ನೀಡುತ್ತಿರುವ ನಮೋ ಡ್ರೋನ್ ದೀದಿ, ಕಿಸಾನ್ ಡ್ರೋನ್ ಮತ್ತಿತರ ಸ್ಕೀಮ್​ಗಳು…

Govt empowering rural women through drone and other schemes: ಸರ್ಕಾರ ಜಾರಿಗೆ ತಂದಿರುವ ನಮೋ ಡ್ರೋನ್ ದೀದಿ ಯೋಜನೆ, ಕಿಸಾನ್ ಡ್ರೋನ್ ಯೋಜನೆಗಳು ಕೃಷಿ ಕ್ಷೇತ್ರವನ್ನು ಬಲಪಡಿಸುತ್ತಿವೆ ಎನ್ನಲಾಗಿದೆ. ಮಹಿಳಾ ನೇತೃತ್ವದ 15,000 ಸ್ವಸಹಾಯ ಸಂಘಗಳನ್ನು ಬಲಪಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ನಮೋ ಡ್ರೋನ್ ದೀದಿ ಯೋಜನೆಯಲ್ಲಿ ಮಹಿಳೆಯರಿಗೆ ಡ್ರೋನ್ ಖರೀದಿಸಲು ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ.

Union Budget 2025: 5 ಲಕ್ಷ ಎಸ್ ಸಿ / ಎಸ್ ಟಿ, ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂವರೆಗೆ ಸಾಲ ಸೌಲಭ್ಯ 

ಎಲ್ಲರೂ ಕಾಯುತ್ತಿದ್ದ ಕಾದು ಕುಳಿತ್ತಿದ್ದ ಸಮಯ ಬಂದಿದ್ದು, ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಹಿಂದಿನ ಕೆಲ ಬಜೆಟ್​ಗಳಲ್ಲಿ ಮಹಿಳೆಯರಿಗೆ ಹೆಚ್ಚು ಒತ್ತು ಕೊಡಲಾಗಿತ್ತು. ಈ ಬಜೆಟ್​ನಲ್ಲೂ ಅದು ಮುಂದುವರೆದಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದು ಬಡವರು, ಮಹಿಳೆ, ರೈತರು, ಯುವಕರನ್ನು ಕೇಂದ್ರೀಕರಿಸಿದ ಬಜೆಟ್; ನಿರ್ಮಲಾ ಸೀತಾರಾಮನ್

Budget 2025: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಮುಂದಿನ ಐದು ವರ್ಷಗಳನ್ನು 'ಸಬ್ಕಾ ವಿಕಾಸ್' ಅನ್ನು ಸಾಕಾರಗೊಳಿಸುವ ಒಂದು ಅನನ್ಯ ಅವಕಾಶವೆಂದು ನಾವು ಪರಿಗಣಿಸಿದ್ದೇವೆ. ಇದು ಎಲ್ಲಾ ಪ್ರದೇಶಗಳ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2023ರ ಬಜೆಟ್​ನಲ್ಲಿ ಆರಂಭಗೊಂಡಿದ್ದ ಈ ಮಹಿಳಾ ಸ್ಕೀಮ್ ಮಾರ್ಚ್ 31ಕ್ಕೆ ಅಂತ್ಯ; ಈ ಬಜೆಟ್​ನಲ್ಲಿ ವಿಸ್ತರಣೆಯಾಗುತ್ತಾ?

Mahila Samman Savings Certificate scheme: 2023ರ ಬಜೆಟ್​ನಲ್ಲಿ ಆರಂಭವಾಗಿದ್ದ ಮಹಿಳಾ ಸಮ್ಮಾನ್ ಸೇವಿಂಗ್ಸ್ ಸರ್ಟಿಫಿಕೇಟ್ ಸ್ಕೀಮ್ ಅನ್ನು ಈ ಬಜೆಟ್​ನಲ್ಲಿ ವಿಸ್ತರಣೆ ಮಾಡುವ ನಿರೀಕ್ಷೆ ಇದೆ. ಸದ್ಯಕ್ಕೆ ಅದು 2025ರ ಮಾರ್ಚ್ 31ರವರೆಗೆ ಮಾತ್ರ ಲಭ್ಯ ಇದೆ. ಈ ಠೇವಣಿ ಸ್ಕೀಮ್ ಅನ್ನು ಮತ್ತಷ್ಟು ಕಾಲ ಆಫರ್​ನಲ್ಲಿ ಇಡಬೇಕೆಂಬ ಬೇಡಿಕೆ ಇದೆ. ಒಂದು ಸಾವಿರ ರೂನಿಂದ ಎರಡು ಲಕ್ಷ ರೂವರೆಗೆ ಎರಡು ವರ್ಷಕ್ಕೆ ಠೇವಣಿ ಇಡುವ ಸ್ಕೀಮ್ ಇದಾಗಿದೆ.

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?