Yash

Yash

1986ರ ಜನವರಿ 8ರಂದು ನವೀನ್ ಕುಮಾರ್ ಗೌಡ ಆಗಿ ಜನಿಸಿದ ಯಶ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹತ್ವದ ಪ್ರಭಾವ ಬೀರಿದ ಪ್ರಮುಖ ಭಾರತೀಯ ನಟ. ಧಾರಾವಾಹಿಗಳಲ್ಲಿ ನಟಿಸಿದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಸಿನಿಮಾ ಮೂಲಕ ಹೀರೋ ಆಗಿ ಮಿಂಚಿದರು. ಅವರು ಅಭಿನಯನದ ಮೂಲಕ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ‘ಕೆಜಿಎಫ್: ಅಧ್ಯಾಯ 1’ (2018) ಚಿತ್ರದ ಮೂಲಕ ಅಭೂತಪೂರ್ವ ಯಶಸ್ಸು ಗಳಿಸಿದರು. ಚಿತ್ರದಲ್ಲಿ ಯಶ್‌ನ ಒರಟಾದ ಮತ್ತು ಮಹತ್ವಾಕಾಂಕ್ಷೆಯ ರಾಕಿಯ ಪಾತ್ರವು ಅಪಾರ ಪ್ರಶಂಸೆಯನ್ನು ಗಳಿಸಿತು. ಇದು ಅವರನ್ನು ಪ್ಯಾನ್-ಇಂಡಿಯ ಸ್ಟಾರ್ ಆಗಿ ಮಾಡಿತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಅವರ ಭವಿಷ್ಯದ ಯೋಜನೆಗಳನ್ನು ಕುತೂಹಲದಿಂದ ನಿರೀಕ್ಷಿಸುತ್ತಿರುವ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರು ರಾಧಿಕಾ ಪಂಡಿತ್ನ ವರಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳು.

ಇನ್ನೂ ಹೆಚ್ಚು ಓದಿ

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು? ಯಶ್ ಜೊತೆ ನಟಿಸುತ್ತಿದ್ದಾರೆ

ಕಿಯಾರಾ ಅಡ್ವಾಣಿ ಅವರು ಯಶ್ ಅವರೊಂದಿಗೆ "ಟಾಕ್ಸಿಕ್" ಎಂಬ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿ ಯಶಸ್ವಿಯಾಗಿದ್ದ ಕಿಯಾರಾ, ತೆಲುಗು ಚಿತ್ರರಂಗದಲ್ಲೂ ಯಶಸ್ಸು ಕಂಡಿದ್ದಾರೆ. "ಭರತ್ ಅನೆ ನೇನು" ಮತ್ತು "ವಿನಯ ವಿಧೇಯ ರಾಮ" ಚಿತ್ರಗಳ ನಂತರ, "ಗೇಮ್ ಚೇಂಜರ್" ಚಿತ್ರದ ಮೂಲಕ ಮತ್ತಷ್ಟು ಜನಪ್ರಿಯರಾಗಿದ್ದಾರೆ. ಈಗ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂಬುದು ವಿಶೇಷ.

ಯಶ್ ಬರ್ತ್​ಡೇ ಪ್ರಯುಕ್ತ ಬಿಗ್ ಬಾಸ್ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಏನದು?

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಫ್ಯಾಮಿಲಿ ವೀಕ್ ನಂತರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಆರಂಭವಾಗಿದೆ. ಫೈನಲ್‌ಗೆ ಹೋಗಲು ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಕೇವಲ ಎರಡು ವಾರಗಳು ಮಾತ್ರ ಉಳಿದಿರುವುದರಿಂದ ಗೆಲುವು ಯಾರದ್ದಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಹೀಗಿರುವಾಗಲೇ ಯಶ್ ಬರ್ತ್​ಡೇ ದಿನ ಸ್ಪರ್ಧಿಗಳಿಗೆ ಸರ್​ಪ್ರೈಸ್ ಸಿಕ್ಕಿದೆ.

ಜನ್ಮದಿನದಂದು ರಾಧಿಕಾ ಜೊತೆ ಯಶ್ ಡೇಟ್​ ನೈಟ್; ಇಲ್ಲಿವೆ ಸುಂದರ ಫೋಟೋಗಳು

ನಟ ಯಶ್ ಪಾಲಿಗೆ ಜನವರಿ 8 ವಿಶೇಷ. ಅಂದು ಅವರ ಬರ್ತ್​ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಹಾರತುರಾಯಿಗಳ ಸಹವಾಸಕ್ಕೆ ಹೋಗದೆ ಫ್ಯಾನ್ಸ್ ಸಾಮಾಜಿಕ ಕೆಲಸಗಳ ಮೂಲಕ ಬರ್ತ್​ಡೇ ಆಚರಿಸುತ್ತಿದ್ದಾರೆ, ಈ ಮಧ್ಯೆ ಯಶ್ ಅವರ ಬರ್ತ್​ಡೇನ ಆಪ್ತರ ಜೊತೆ ಆಚರಿಸಿಕೊಂಡಿದ್ದಾರೆ.

‘ಟಾಕ್ಸಿಕ್’ ಗ್ಲಿಂಪ್ಸ್​ಗೆ ಮಲಯಾಳಂ ಚಿತ್ರರಂಗದ ವಿರೋಧ; ಗೀತು ಮೋಹನ್​ದಾಸ್​ಗೆ ನೇರ ಪ್ರಶ್ನೆ  

ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾದ ಬಳಿಕ ಮಹಿಳಾ ವಿರೋಧಿ ದೃಶ್ಯಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮಲಯಾಳಂ ನಿರ್ದೇಶಕ ನಿತಿನ್ ಅವರು ಗೀತು ಮೋಹನ್‌ದಾಸ್ ಅವರ ಹಿಂದಿನ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ. ಚಿತ್ರದಲ್ಲಿ ಮಹಿಳೆಯರನ್ನು ಅವಮಾನಿಸುವ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಡಲ ಕಿನಾರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರಗಳು

Yash Birthday: ನಟ ಯಶ್ ಹುಟ್ಟುಹಬ್ಬ ಇಂದು (ಜನವರಿ 08). ಹುಟ್ಟುಹಬ್ಬದಂದು ಮನೆಯಲ್ಲಿ ಇರುವುದಿಲ್ಲವೆಂದು ಯಶ್ ಮೊದಲೇ ಹೇಳಿದ್ದರು. ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಯಶ್, ಕುಟುಂಬ ಹಾಗೂ ಚಿತ್ರತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಣೆಯ ಕೆಲ ಸುಂದರ ಚಿತ್ರಗಳು ಇಲ್ಲಿವೆ ನೋಡಿ...

KGF 3: ಯಶ್ ಬರ್ತ್​ಡೇ ದಿನ ‘ಕೆಜಿಎಫ್ 3’ ಅಪ್​ಡೇಟ್ಸ್​ಗಾಗಿ ಕಾದು ಕುಳಿತವರಿಗೆ ಸಿಕ್ಕಿದ್ದೇನು?

‘ಕೆಜಿಎಫ್ 2’ ಚಿತ್ರದ ಯಶಸ್ಸಿನ ನಂತರ, ’ಕೆಜಿಎಫ್ 3’ ಬಗ್ಗೆ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆ ಇತ್ತು. ಆದರೆ ಯಶ್ ಅವರ ಜನ್ಮದಿನದಂದು ಯಾವುದೇ ಅಪ್ಡೇಟ್ ಸಿಕ್ಕಿಲ್ಲ. ನಿರ್ಮಾಪಕರು 4-5 ತಿಂಗಳಲ್ಲಿ ಅಪ್ಡೇಟ್ ನೀಡುವುದಾಗಿ ಹೇಳಿದ್ದಾರೆ. ಈಗ ಅಭಿಮಾನಿಗಳು ಏಪ್ರಿಲ್ 14 (ಕೆಜಿಎಫ್ 2 ರಿಲೀಸ್ ದಿನಾಂಕ) ರಂದು ಅಪ್ಡೇಟ್ ಬರಲಿದೆ ಎಂದು ಆಶಿಸುತ್ತಿದ್ದಾರೆ.

‘ಟಾಕ್ಸಿಕ್’ ಗ್ಲಿಂಪ್ಸ್​ನಲ್ಲಿ ಯಶ್ ಲುಕ್ ಹೇಗಿದೆ? ಇಲ್ಲಿವೆ ವಿವಿಧ ಪೋಸ್

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ.

Toxic Movie: ಟಾಕ್ಸಿಕ್ ಗ್ಲಿಂಪ್ಸ್ ರಿಲೀಸ್; ಮಸ್ತ್ ಆಗಿ ಕ್ಲಬ್​ಗೆ ಎಂಟ್ರಿ ಕೊಟ್ಟ ಯಶ್

Toxic Birthday Peek: ರಾಕಿಂಗ್ ಸ್ಟಾರ್ ಯಶ್ ಅವರಿಗೆ ಇಂದು (ಜನವರಿ 8) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ದಿನದಂದು ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಪ್​ಡೇಟ್ ಸಿಗಲಿದೆ ಎಂದು ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಅಪ್​ಡೇಟ್ ಕೊಟ್ಟಿತ್ತು. ಆ ಸಮಯ ಈಗ ಸಮೀಪಿಸಿದೆ. ಈ ಚಿತ್ರದ ಗ್ಲಿಂಪ್ಸ್​ನ ರಿಲೀಸ್ ಮಾಡಲಾಗಿದೆ.

ಕುಟುಂಬ ಹಾಗೂ ಸಿನಿಮಾ ಟೀಂ ಜೊತೆ ಜೊತೆ ಯಶ್ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್

ಯಶ್ ಅವರ ಹುಟ್ಟುಹಬ್ಬವನ್ನು ಆಪ್ತರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಅವರನ್ನು ಅಭಿನಂದಿಸುತ್ತಾ ಇದ್ದಾರೆ. ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅವರ ಭವಿಷ್ಯದ ಸಿನಿಮಾಗಳಾದ ‘ಟಾಕ್ಸಿಕ್’ ಹಾಗೂ ‘ರಾಮಾಯಣದ’ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ.

ಒಂದಿನ ದೊಡ್ಡ ಸ್ಟಾರ್ ಆಗ್ತೀನಿ ಎಂದಿದ್ದ ಯಶ್; ಮಾಡಿ ತೋರಿಸಿದ ನಟ

ರಾಕಿಂಗ್ ಸ್ಟಾರ್ ಯಶ್ ಅವರ ಯಶಸ್ವಿ ಹೀರೋಗಳಲ್ಲಿ ಒಬ್ಬರು. ಕೆಲವರ ನಿರ್ಲಕ್ಷ್ಯವನ್ನು ಸವಾಲಾಗಿ ಸ್ವೀಕರಿಸಿ, 'ಕೆಜಿಎಫ್' ಚಿತ್ರದ ಮೂಲಕ ಅವರು ಪಡೆದ ಅಪಾರ ಜನಪ್ರಿಯತೆ ಮತ್ತು ಈಗ ಪ್ಯಾನ್ ವರ್ಲ್ಡ್ ಸ್ಟಾರ್ ಆಗುವ ಅವರ ಆಕಾಂಕ್ಷೆಯನ್ನು ಅವರು ಹೊಂದಿದ್ದಾರೆ. ಅವರ ಭವಿಷ್ಯದ ಚಿತ್ರಗಳು 'ಟಾಕ್ಸಿಕ್' ಮತ್ತು 'ರಾಮಾಯಣ' ಕುರಿತಾದ ಮಾಹಿತಿಯನ್ನು ಲೇಖನ ಒಳಗೊಂಡಿದೆ.

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ