AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash

Yash

1986ರ ಜನವರಿ 8ರಂದು ನವೀನ್ ಕುಮಾರ್ ಗೌಡ ಆಗಿ ಜನಿಸಿದ ಯಶ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹತ್ವದ ಪ್ರಭಾವ ಬೀರಿದ ಪ್ರಮುಖ ಭಾರತೀಯ ನಟ. ಧಾರಾವಾಹಿಗಳಲ್ಲಿ ನಟಿಸಿದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಸಿನಿಮಾ ಮೂಲಕ ಹೀರೋ ಆಗಿ ಮಿಂಚಿದರು. ಅವರು ಅಭಿನಯನದ ಮೂಲಕ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ‘ಕೆಜಿಎಫ್: ಅಧ್ಯಾಯ 1’ (2018) ಚಿತ್ರದ ಮೂಲಕ ಅಭೂತಪೂರ್ವ ಯಶಸ್ಸು ಗಳಿಸಿದರು. ಚಿತ್ರದಲ್ಲಿ ಯಶ್‌ನ ಒರಟಾದ ಮತ್ತು ಮಹತ್ವಾಕಾಂಕ್ಷೆಯ ರಾಕಿಯ ಪಾತ್ರವು ಅಪಾರ ಪ್ರಶಂಸೆಯನ್ನು ಗಳಿಸಿತು. ಇದು ಅವರನ್ನು ಪ್ಯಾನ್-ಇಂಡಿಯ ಸ್ಟಾರ್ ಆಗಿ ಮಾಡಿತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಅವರ ಭವಿಷ್ಯದ ಯೋಜನೆಗಳನ್ನು ಕುತೂಹಲದಿಂದ ನಿರೀಕ್ಷಿಸುತ್ತಿರುವ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರು ರಾಧಿಕಾ ಪಂಡಿತ್ನ ವರಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳು.

ಇನ್ನೂ ಹೆಚ್ಚು ಓದಿ

ಯಶ್ ನಟನೆಯ ‘ಟಾಕ್ಸಿಕ್’ ಎದುರು ರಿಲೀಸ್ ಆಗ್ತಿದೆ ಐದು ದೊಡ್ಡ ಸಿನಿಮಾಗಳು

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19, 2026 ರಂದು ಈದ್/ಯುಗಾದಿ ಸಂದರ್ಭದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಐದು ದೊಡ್ಡ ಸಿನಿಮಾಗಳು ಪೈಪೋಟಿ ನೀಡಲಿವೆ. ಎಲ್ಲರೂ ಇದೇ ದಿನ ಆಯ್ಕೆ ಮಾಡಿಕೊಳ್ಳಲು ಹಲವು ಕಾರಣಗಳು ಇವೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ಗಾಗಿ ಒಂದಾದ ಎರಡು ದೊಡ್ಡ ಶಕ್ತಿಗಳು; ಯಶ್ ಫ್ಯಾನ್ಸ್​ಗೆ ಹಬ್ಬದೂಟ ಫಿಕ್ಸ್

ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ 100 ದಿನ ಬಾಕಿ. ಶೂಟಿಂಗ್ ಮುಗಿದಿದ್ದು, ಪ್ರಚಾರಕ್ಕೆ ತಂಡ ಸಿದ್ಧವಾಗಿದೆ. ಈಗ ಚಿತ್ರದ ಸಂಗೀತದ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ. ಸಂಗೀತ ಸಂಯೋಜಕರಾದ ಅನಿರುದ್ಧ್ ರವಿಚಂದರ್ ಹಾಗೂ ರವಿ ಬಸ್ರೂರು ಅವರು ಟಾಕ್ಸಿಕ್ ಸಿನಿಮಾಗಾಗಿ ಒಂದಾಗಿದ್ದಾರೆ ಎನ್ನಲಾಗಿದೆ. ಅನಿರುದ್ಧ್ ಹಾಡುಗಳಿಗೆ, ರವಿ ಬಸ್ರೂರು ಹಿನ್ನೆಲೆ ಸಂಗೀತಕ್ಕೆ ಕೆಲಸ ಮಾಡಲಿದ್ದಾರೆ.

ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್​ಗೆ ಹೈಕೋರ್ಟ್ ರಿಲೀಫ್​

ನಟ ಯಶ್‌ಗೆ ಐಟಿ ಇಲಾಖೆ 2013-19ರ ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ನೀಡಿದ್ದ ನೋಟಿಸ್‌ನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೊಂಬಾಳೆ ಕನ್ಸ್​​​ಟ್ರಕ್ಷನ್ಸ್ ಸಂಬಂಧಿಸಿದ ಪ್ರಕರಣದಲ್ಲಿ ಯಶ್ ನಿವಾಸ ಶೋಧಿಸಲಾಗಿತ್ತು. ಶೋಧನೆಗೊಳಗಾಗದ ವ್ಯಕ್ತಿಗಳಿಗೆ ನೀಡುವ ನೋಟಿಸ್ ನೀಡಿದ್ದನ್ನು ಯಶ್ ಪ್ರಶ್ನಿಸಿದ್ದರು. ಹೈಕೋರ್ಟ್ ಅವರ ವಾದ ಪುರಸ್ಕರಿಸಿ ನೋಟಿಸ್ ರದ್ದು ಮಾಡಿರುವುದು ಯಶ್‌ಗೆ ದೊಡ್ಡ ರಿಲೀಫ್ ನೀಡಿದೆ.

ಸದ್ದಿಲ್ಲದೆ ಪೂರ್ಣಗೊಂಡಿತು ‘ಟಾಕ್ಸಿಕ್’ ಶೂಟ್? ಮುಂದಿರೋ ಪ್ಲ್ಯಾನ್​​ಗಳೇನು?

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಶೂಟಿಂಗ್ ಸದ್ದಿಲ್ಲದೆ ಪೂರ್ಣಗೊಂಡಿದೆ. ಈ ಕುರಿತು ಹರಡಿದ್ದ ಗಾಸಿಪ್‌ಗಳಿಗೆ ತೆರೆ ಬಿದ್ದಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ 19ರಂದು ಬಿಡುಗಡೆಯಾಗಲಿರುವ ಈ ಪ್ಯಾನ್-ವರ್ಲ್ಡ್ ಸಿನಿಮಾಕ್ಕಾಗಿ ಮೂರೂವರೆ ತಿಂಗಳ ಮೊದಲೇ ತಂಡ ಭರ್ಜರಿ ಪ್ರಚಾರಕ್ಕೆ ಸಿದ್ಧವಾಗಿದೆ. ಜನವರಿ 8ರಂದು ಯಶ್ ಜನ್ಮದಿನದಂದು ಟೀಸರ್ ಬಿಡುಗಡೆಯ ನಿರೀಕ್ಷೆಯಿದೆ.

‘ಟಾಕ್ಸಿಕ್’ ಮ್ಯೂಸಿಕ್; ಅನಿರುದ್ಧ್ ರವಿಚಂದರ್​ ಹೊರಗಿಟ್ಟು ಕನ್ನಡಿಗನಿಗೆ ಅವಕಾಶ ಕೊಟ್ಟ ಯಶ್

ಯಶ್ ನಟನೆಯ 'ಟಾಕ್ಸಿಕ್' ಚಿತ್ರಕ್ಕೆ ಕನ್ನಡಿಗರೊಬ್ಬರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅನಿರುದ್ಧ್ ರವಿಚಂದರ್ ಹೆಸರು ಕೇಳಿಬಂದಿದ್ದರೂ, ಅಂತಿಮವಾಗಿ 'ಕೆಜಿಎಫ್' ಖ್ಯಾತಿಯ ರವಿ ಬಸ್ರೂರು ಅವರನ್ನೇ ತಂಡ ಆಯ್ಕೆ ಮಾಡಿದೆ. ಮಲಯಾಳಂನ ಗೀತು ಮೋಹನ್​ದಾಸ್ ನಿರ್ದೇಶನದ ಈ ಚಿತ್ರ ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಮೂಡಿಬರಲಿದ್ದು, ಹಾಲಿವುಡ್ ಮಟ್ಟದ ಮೇಕಿಂಗ್‌ಗೆ ಸಿದ್ಧತೆ ನಡೆದಿದೆ.

‘ಟಾಕ್ಸಿಕ್’ ಎದುರು ಬರಲಿದೆ ಸಲ್ಮಾನ್ ಸಿನಿಮಾ; ಶಾರುಖ್​​ಗೆ ಆದ ಗತಿ ನೆನಪಿಸಿದ ಫ್ಯಾನ್ಸ್

ಯಶ್ ಅವರು'ಕೆಜಿಎಫ್ 2' ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಮುಂದಿನ ಸಿನಿಮಾ'ಟಾಕ್ಸಿಕ್' ಸಲ್ಮಾನ್ ಖಾನ್ ಅವರ 'ಬ್ಯಾಟಲ್ ಆಫ್ ಗಾಲ್ವಾನ್' ಜೊತೆ ಸ್ಪರ್ಧೆಗೆ ಸಿದ್ಧವಾಗಿದೆ. ಹಿಂದಿನ 'ಕೆಜಿಎಫ್' ಸಿನಿಮಾಗಳು ಬಾಲಿವುಡ್ ಚಿತ್ರಗಳನ್ನು ಮೀರಿಸಿದಂತೆ, ಈ ಬಾರಿಯೂ ಯಶ್ ಸವಾಲೆಸೆಯಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ಎಲ್ಲೂ ಹೇಳಬೇಡ ಎಂದು ಪುತ್ರನಿಗೆ ಹಣ ಸಹಾಯ

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್​ ಖಳನಟ ಹರೀಶ್ ರಾಯ್ ಅವರು ಗುರುವಾರ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಹರೀಶ್ ಅವರ ಮಕ್ಕಳಿಗೆ ಯಶ್​​ ಧೈರ್ಯ ತುಂಬಿದ್ದಾರೆ. ಕಿರಿಯ ಪುತ್ರನನ್ನು ಕರೆದು ಆರ್ಥಿಕ ನೆರವು ನೀಡಿದ್ದಾರೆ. ವಿಡಿಯೋ ನೋಡಿ.

‘ಸೀನಿಯರ್ ಹೀರೋಗಳೇ ಹಾಗೆ ನಡೆದುಕೊಂಡಾಗ’; ಯಶ್ ಹಳೆಯ ವಿಡಿಯೋ ವೈರಲ್

ಪುನೀತ್ ರಾಜ್​ಕುಮಾರ್ ನಿಧನ ಹೊಂದುವುದಕ್ಕೂ ಕೆಲವೇ ದಿನ ಮೊದಲು ಯಶ್ ಹಾಗೂ ಪುನೀತ್ ಭೇಟಿ ಆಗಿದ್ದರು. ‘ಭಜರಂಗಿ 2’ ವೇದಿಕೆ ಮೇಲೆ ಯಶ್, ಶಿವಣ್ಣ ಹಾಗೂ ಪುನೀತ್ ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿತ್ತು. ಈ ವೇದಿಕೆ ಮೇಲೆ ಪುನೀತ್ ಅವರನ್ನು ಹೊಗಳುವ ಕೆಲಸವನ್ನು ಯಶ್ ಅವರು ಮಾಡಿದ್ದರು.

ಯಶ್​ಗೆ ಹೆದರಿದ ಬನ್ಸಾಲಿ; ‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19, 2026 ರಂದು ತೆರೆಗೆ ಬರಲು ಸಿದ್ಧವಾಗಿದೆ. ಹೀಗಾಗಿ, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ತಮ್ಮ 'ಲವ್ ಆ್ಯಂಡ್ ವಾರ್' ಚಿತ್ರವನ್ನು ಮುಂದೂಡಲು ಆಲೋಚಿಸುತ್ತಿದ್ದಾರೆ. ಹಿಂದಿನ 'ಕೆಜಿಎಫ್' ಚಿತ್ರಗಳ ಎದುರು ಬಂದ ಸಿನಿಮಾಗಳು ಸೋತಿದ್ದವು. 'ಟಾಕ್ಸಿಕ್' ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಹೇಗಿತ್ತು ನೋಡಿ ಯಶ್ ಮಗ ಯಥರ್ವ್ ಬರ್ತ್​ಡೇ ಸೆಲೆಬ್ರೇಷನ್; ಇಲ್ಲಿದೆ ವಿಡಿಯೋ

Yatharv Birthday Celebration video: ಯಶ್ ಅವರ ಮಗ ಯಥರ್ವ್ ಅವರಿಗೆ ಅಕ್ಟೋಬರ್ 30 ಜನ್ಮದಿನ. ಈ ವೇಳೆ ಅದ್ದೂರಿಯಾಗಿ ಸೆಲೆಬ್ರೇಷನ್​ಗಳು ನಡೆದವು. ಆ ಸಂದರ್ಭದ ವಿಡಿಯೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದನ್ನು ಕಾಣಬಹುದು. ಆ ಬಗ್ಗೆ ಇಲ್ಲಿದೆ ವಿವರ.

‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು 'ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ' ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಕುರಿತಾದ ಎಲ್ಲಾ ವದಂತಿಗಳನ್ನು ನಿರ್ಮಾಪಕರು ತಳ್ಳಿ ಹಾಕಿದ್ದು, ಸಿನಿಮಾ ಯುಗಾದಿಗೆ ತೆರೆಗೆ ಬರಲಿದೆ.

ಯಶ್ ನಟನೆಯ ‘ಟಾಕ್ಸಿಕ್’ ಬಗ್ಗೆ ಹರಿದಾಡಿದ ವದಂತಿಗೆ ನಿರ್ಮಾಪಕರಿಂದಲೇ ಸಿಕ್ತು ಸ್ಪಷ್ಟನೆ

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಗ್ಗೆ ಹರಿದಾಡಿದ ಸುಳ್ಳು ಸುದ್ದಿಗೆ ಕೊನೆಗೂ ತೆರೆ ಬಿದ್ದಿದೆ. ಚಿತ್ರತಂಡದ ಅತೃಪ್ತಿ, ಬಿಡುಗಡೆ ವಿಳಂಬದ ವದಂತಿಗಳನ್ನು ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್ಸ್ ಸ್ಪಷ್ಟಪಡಿಸಿದೆ. ತರುಣ್ ಆದರ್ಶ್ ಟ್ವೀಟ್ ಮೂಲಕ ಮಾರ್ಚ್ 19ರಂದು ಚಿತ್ರ ನಿಗದಿತ ದಿನಾಂಕದಂದೇ ಬರಲಿದೆ ಎಂದು ಖಚಿತಪಡಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ