Yash

Yash

1986ರ ಜನವರಿ 8ರಂದು ನವೀನ್ ಕುಮಾರ್ ಗೌಡ ಆಗಿ ಜನಿಸಿದ ಯಶ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹತ್ವದ ಪ್ರಭಾವ ಬೀರಿದ ಪ್ರಮುಖ ಭಾರತೀಯ ನಟ. ಧಾರಾವಾಹಿಗಳಲ್ಲಿ ನಟಿಸಿದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಸಿನಿಮಾ ಮೂಲಕ ಹೀರೋ ಆಗಿ ಮಿಂಚಿದರು. ಅವರು ಅಭಿನಯನದ ಮೂಲಕ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ‘ಕೆಜಿಎಫ್: ಅಧ್ಯಾಯ 1’ (2018) ಚಿತ್ರದ ಮೂಲಕ ಅಭೂತಪೂರ್ವ ಯಶಸ್ಸು ಗಳಿಸಿದರು. ಚಿತ್ರದಲ್ಲಿ ಯಶ್‌ನ ಒರಟಾದ ಮತ್ತು ಮಹತ್ವಾಕಾಂಕ್ಷೆಯ ರಾಕಿಯ ಪಾತ್ರವು ಅಪಾರ ಪ್ರಶಂಸೆಯನ್ನು ಗಳಿಸಿತು. ಇದು ಅವರನ್ನು ಪ್ಯಾನ್-ಇಂಡಿಯ ಸ್ಟಾರ್ ಆಗಿ ಮಾಡಿತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಅವರ ಭವಿಷ್ಯದ ಯೋಜನೆಗಳನ್ನು ಕುತೂಹಲದಿಂದ ನಿರೀಕ್ಷಿಸುತ್ತಿರುವ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರು ರಾಧಿಕಾ ಪಂಡಿತ್ನ ವರಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳು.

ಇನ್ನೂ ಹೆಚ್ಚು ಓದಿ

‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು

‘ಟಾಕ್ಸಿಕ್​’ ಸಿನಿಮಾದಲ್ಲಿ ನಟ ಯಶ್​ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಬಗ್ಗೆ ಸಿನಿಪ್ರಿಯರಿಗೆ ಕುತೂಹಲ ಇದೆ. ಈ ಸಿನಿಮಾದ ಶೂಟಿಂಗ್​ಗಾಗಿ ಬೃಹತ್​ ಸೆಟ್​ಗಳ ನಿರ್ಮಾಣ ಆಗುತ್ತಿದೆ. ಕಥೆಯ ವಿಚಾರದಲ್ಲಿ ‘ಕೆಜಿಎಫ್​ 2’ ರೀತಿಯೇ ರೆಟ್ರೋ ಸೂತ್ರವನ್ನು ‘ಟಾಕ್ಸಿಕ್​’ ಟೀಮ್​ ಅನುಸರಿಸುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

‘ಐಎಂಡಿಬಿ ಟಾಪ್ 100’ ಪಟ್ಟಿಯಲ್ಲಿ ಇರುವ ಏಕೈಕ ಕನ್ನಡದ ನಟ ಯಶ್​; ಎಷ್ಟನೇ ಸ್ಥಾನ?

ನಟ ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಜಾಗತಿಕ ಮಟ್ಟದಲ್ಲಿ ಅವರಿಗೆ ಜನಪ್ರಿಯತೆ ಇದೆ. ಐಎಂಡಿಬಿ ಪ್ರಕಟಿಸಿದ ಟಾಪ್​ 100 ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಯಶ್​ ಕೂಡ ಇದ್ದಾರೆ. ಇದರಲ್ಲಿ ಸ್ಥಾನ ಪಡೆದ ಕನ್ನಡದ ಏಕೈಕ ನಟ ಅವರು. ಬೇರೆ ಭಾಷೆಯ ಯಾವೆಲ್ಲ ನಟರು ಈ ಪಟ್ಟಿಯಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..

‘ಯಶ್ ಜೊತೆ ಜಗಳ ಆಗುತ್ತಾ?’; ಮುಚ್ಚುಮರೆ ಇಲ್ಲದೆ ಉತ್ತರಿಸಿದ ರಾಧಿಕಾ ಪಂಡಿತ್

ಯಶ್ ಹಾಗೂ ರಾಧಿಕಾ ಓಪನ್ ಆಗಿ ಯಾವಾಗಲೂ ಕಿತ್ತಾಡಿಕೊಂಡಿಲ್ಲ, ಫೈಟ್ ಮಾಡಿಲ್ಲ. ಹಾಗಂತ ಇವರ ಮಧ್ಯೆ ಕಿತ್ತಾಟ ನಡೆಯುವದೇ ಇಲ್ಲ ಎಂದಲ್ಲ. ಎಲ್ಲಾ ಸಂಸಾರಗಳಲ್ಲಿ ಇರುವಂತೆ ಇವರ ಮನೆಯಲ್ಲೂ ಜಗಳ ಆಗುತ್ತದೆ. ಈ ಬಗ್ಗೆ ರಾಧಿಕಾ ಮಾತನಾಡಿದ್ದಾರೆ.

ಅಬ್ಬಬ್ಬಾ… ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?

ನಟ ರಣಬೀರ್​ ಕಪೂರ್​ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಆರಂಭ ಆಗಿದೆ. ಈ ಸಿನಿಮಾದ ಬಜೆಟ್​ ಬಗ್ಗೆ ಒಂದು ಅಚ್ಚರಿಯ ಮಾಹಿತಿ ಕೇಳಿಬಂದಿದೆ. 835 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

ಯಶ್​ ಜೊತೆ ಕರೀನಾ ಕಪೂರ್​ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್​’ ಚಿತ್ರತಂಡದಿಂದ ಕರೀನಾ ಕಪೂರ್​ ಖಾನ್​ ಅವರು ಹೊರಬಂದಿದ್ದಾರೆ ಎಂಬ ಗುಸುಗುಸು ಹರಡಿದೆ. ಅದಕ್ಕೆ ಸಂಭಾವನೆಯೇ ಕಾರಣ ಎಂದು ಕೆಲವರು ಊಹಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್​ ನೀಲ್​ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳ ಕಡೆಗೆ ಗಮನ ಹರಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ಬೇರೆ ಬೇರೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಈ ಮೂವರು ಒಂದಾಗಿ ‘ಕೆಜಿಎಫ್​ 3’ ಸಿನಿಮಾ ಮಾಡುವುದು ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್​ ಜೊತೆ ನಟಿಸ್ತಾರಾ ನಯನತಾರಾ?

‘ಟಾಕ್ಸಿಕ್​’ ಸಿನಿಮಾಗೆ ಸಂಬಂಧಿಸಿದಂತೆ ಇಷ್ಟು ದಿನ ನಟಿ ಕರೀನಾ ಕಪೂರ್ ಖಾನ್​ ಹೆಸರು ಕೇಳಿಬರುತ್ತಿತ್ತು. ಆದರೆ ಈಗ ನಯನತಾರಾ ಬಗ್ಗೆ ಹೊಸ ಗಾಸಿಪ್​ ಹಬ್ಬಿದೆ. ‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸಲು ನಯನತಾರಾ ಆಸಕ್ತಿ ತೋರಿಸಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ. ಆದರೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಿಂದ ಹೊರನಡೆದ ಕರೀನಾ ಕಪೂರ್​ ಖಾನ್​?

ಬಹುನಿರೀಕ್ಷಿತ ‘ಟಾಕ್ಸಿಕ್​’ ಸಿನಿಮಾದ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ನಟ ಯಶ್​ ಅವರಿಗೆ ಇದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್​. ಈ ಸಿನಿಮಾದಲ್ಲಿ ಅವರ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಿಗೆ ಇದೆ. ಕರೀನಾ ಕಪೂರ್​ ಖಾನ್​ ಅವರು ಈ ಚಿತ್ರದಲ್ಲಿ ನಟಿಸುತ್ತಾರೆ ಎಂದು ಗಾಸಿಪ್​ ಹಬ್ಬಿತ್ತು. ಆದರೆ ಈಗ ಅವರು ಚಿತ್ರತಂಡದಿಂದ ಆಚೆ ಬಂದಿದ್ದಾರೆ ಎನ್ನಲಾಗಿದೆ.

ಸರ್ಕಾರದ ಈವರೆಗಿನ ಕೆಲಸ ತೃಪ್ತಿ ನೀಡಿದೆಯಾ? ಮತಗಟ್ಟೆಯಲ್ಲೇ ಉತ್ತರ ನೀಡಿದ ಯಶ್​

ಎಲ್ಲರೂ ಬಂದು ಮತ ಹಾಕಬೇಕು ಎಂದು ನಟ ಯಶ್​ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಯಶ್​ ಮತ ಹಾಕಿದ್ದಾರೆ. ಸದ್ಯ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಕ್ಕೆ ಬ್ರೇಕ್​ ನೀಡಿ ಅವರು ಮತದಾನ ಮಾಡಲು ಬಂದಿದ್ದಾರೆ. ಮತ ಹಾಕಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಅನಿಸಿಕೆ ತಿಳಿಸಿದರು.

ಯಶ್​ ಹಿಂದಿ ಪ್ರಾಜೆಕ್ಟ್​ ಬಗ್ಗೆ ಇನ್ನೊಂದು ವಿಷಯ ಬಹಿರಂಗ; ರಾವಣನ ಎಂಟ್ರಿ ಯಾವಾಗ?

ಏಪ್ರಿಲ್​ 2ರಂದು ನಿರ್ಮಾಪಕರ ಜನ್ಮದಿನವಾದ್ದರಿಂದ ಆ ದಿನವೇ ಸಿನಿಮಾದ ಶೂಟಿಂಗ್​ ಪ್ರಾರಂಭ ಮಾಡಬೇಕು ಎಂಬ ಆಸೆ ಅವರದ್ದಾಗಿತ್ತು. ಆದ್ದರಿಂದ ಸಣ್ಣ ಸನ್ನಿವೇಶದ ಮೂಲಕ ಅವರು ಶೂಟಿಂಗ್​ ಆರಂಭ ಮಾಡಿದರು. ಆದರೆ ಆ ಸೀನ್​ಗಳಲ್ಲಿ ಕೇವಲ ಬಾಲನಟರಷ್ಟೇ ಭಾಗಿ ಆಗಿದ್ದರು. ಯಶ್​ ಅವರು ಚಿತ್ರೀಕರಣದ ಸೆಟ್​ನತ್ತ ಸುಳಿಯಲಿಲ್ಲ.

ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ