AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash

Yash

1986ರ ಜನವರಿ 8ರಂದು ನವೀನ್ ಕುಮಾರ್ ಗೌಡ ಆಗಿ ಜನಿಸಿದ ಯಶ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹತ್ವದ ಪ್ರಭಾವ ಬೀರಿದ ಪ್ರಮುಖ ಭಾರತೀಯ ನಟ. ಧಾರಾವಾಹಿಗಳಲ್ಲಿ ನಟಿಸಿದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಸಿನಿಮಾ ಮೂಲಕ ಹೀರೋ ಆಗಿ ಮಿಂಚಿದರು. ಅವರು ಅಭಿನಯನದ ಮೂಲಕ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ‘ಕೆಜಿಎಫ್: ಅಧ್ಯಾಯ 1’ (2018) ಚಿತ್ರದ ಮೂಲಕ ಅಭೂತಪೂರ್ವ ಯಶಸ್ಸು ಗಳಿಸಿದರು. ಚಿತ್ರದಲ್ಲಿ ಯಶ್‌ನ ಒರಟಾದ ಮತ್ತು ಮಹತ್ವಾಕಾಂಕ್ಷೆಯ ರಾಕಿಯ ಪಾತ್ರವು ಅಪಾರ ಪ್ರಶಂಸೆಯನ್ನು ಗಳಿಸಿತು. ಇದು ಅವರನ್ನು ಪ್ಯಾನ್-ಇಂಡಿಯ ಸ್ಟಾರ್ ಆಗಿ ಮಾಡಿತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಅವರ ಭವಿಷ್ಯದ ಯೋಜನೆಗಳನ್ನು ಕುತೂಹಲದಿಂದ ನಿರೀಕ್ಷಿಸುತ್ತಿರುವ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರು ರಾಧಿಕಾ ಪಂಡಿತ್ನ ವರಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳು.

ಇನ್ನೂ ಹೆಚ್ಚು ಓದಿ

‘ಟಾಕ್ಸಿಕ್’ ಸೆಟ್‌ನಿಂದ ಬಿಗ್ ಅಪ್ಡೇಟ್: ಗೀತು ಮೋಹನ್‌ದಾಸ್ ಹುಟ್ಟುಹಬ್ಬಕ್ಕೆ ಮೇಕಿಂಗ್ ಝಲಕ್ ರಿಲೀಸ್

'ಟಾಕ್ಸಿಕ್' ಸಿನಿಮಾದ ನಿರ್ದೇಶಕಿ ಗೀತು ಮೋಹನ್‌ದಾಸ್ ಹುಟ್ಟುಹಬ್ಬಕ್ಕೆ ವಿಶೇಷ ಬಿಟಿಎಸ್ ವಿಡಿಯೋ ಬಿಡುಗಡೆಯಾಗಿದೆ. ಈ ವಿಡಿಯೋ, ಚಿತ್ರದ ಬೃಹತ್ ಮೇಕಿಂಗ್, ಅದ್ದೂರಿ ಆಕ್ಷನ್ ಹಾಗೂ ಗೀತು ಮೋಹನ್‌ದಾಸ್ ಅವರ ಅದ್ಭುತ ನಿರ್ದೇಶನ ಶೈಲಿಯನ್ನು ಅನಾವರಣಗೊಳಿಸಿದೆ. ಪ್ಯಾನ್-ಇಂಡಿಯಾ ಪ್ರಾಜೆಕ್ಟ್ 'ಟಾಕ್ಸಿಕ್' ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಲೆಕ್ಕ ಕೊಟ್ಟ ನಿರ್ದೇಶಕ

ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾಗಾಗಿ 2-3 ಹಾಡುಗಳನ್ನು ಬರೆದಿದ್ದಾಗಿ ಯೋಗರಾಜ್ ಭಟ್ ಅವರು ಒಪ್ಪಿಕೊಂಡಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಅತೀವ ಸಂಭ್ರಮ ಮೂಡಿಸಿದೆ. ಚಿತ್ರವು ಅಂತರರಾಷ್ಟ್ರೀಯ ತಂತ್ರಜ್ಞರ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿದ್ದು, ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದೆ. ರಿಲೀಸ್‌ಗೆ ಕಾಯುತ್ತಿರುವ ಫ್ಯಾನ್ಸ್, ಚಿತ್ರವು ಅದ್ಭುತ ದೃಶ್ಯಕಾವ್ಯವಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

‘ಟಾಕ್ಸಿಕ್’ ರಿಶೂಟ್, ಮುಂದಿನ ವರ್ಷ ರಿಲೀಸ್ ಎಂದು ಹೇಳಿ ಉಲ್ಟಾ ಹೊಡೆದ ಬಾಕ್ಸ್ ಆಫೀಸ್ ಪಂಡಿತ

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮುಂದಕ್ಕೆ ಹೋಗಿದೆ, ರೀಶೂಟ್ ಆಗುತ್ತಿದೆ ಎಂಬ ಕಾಲಿವುಡ್ ವದಂತಿಗಳಿಗೆ ತೆರೆ ಬಿದ್ದಿದೆ. ಕೆಲ ಬಾಕ್ಸ್ ಆಫೀಸ್ ಪಂಡಿತರು ಹಬ್ಬಿಸಿದ 2027 ರಿಲೀಸ್ ಸುದ್ದಿ ಸುಳ್ಳು ಎಂದು ನಿರ್ಮಾಣ ಸಂಸ್ಥೆ ಸ್ಪಷ್ಟಪಡಿಸಿದೆ. ಕನ್ನಡ ಚಿತ್ರರಂಗದ ಬೆಳೆಯುತ್ತಿರುವ ಜನಪ್ರಿಯತೆ ನೋಡಿ ಕಾಲಿವುಡ್ ಮಂದಿ ಹೊಟ್ಟೆ ಉರಿದುಕೊಂಡು ಇಂತಹ ತಂತ್ರ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಭಾರೀ ನಿರೀಕ್ಷೆಗಳಿವೆ. ಜೂನ್ 8ರಂದು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಜನ್ಮದಿನದಂದು ಪ್ರಮುಖ ಅಪ್‌ಡೇಟ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. 'ಕೆಜಿಎಫ್' ನಂತರ ಯಶ್ ಅವರ ಈ ಜಾಗತಿಕ ಯೋಜನೆ ಕುತೂಹಲ ಮೂಡಿಸಿದ್ದು, ಅಂದೇ ಹೊಸ ಪೋಸ್ಟರ್ ಅಥವಾ ಖಚಿತ ದಿನಾಂಕ ಘೋಷಣೆ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುವ ಸಾಧ್ಯತೆಯಿದೆ.

‘ನಿಮ್ಮ ಲೈಫ್ ನೋಡಿಕೊಳ್ಳಿ’; ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಮಾತನಾಡಿದ ಯಶ್

ರಾಕಿಂಗ್ ಸ್ಟಾರ್ ಯಶ್ ಕ್ಯಾನ್ಸರ್ ಪೀಡಿತ ಅಭಿಮಾನಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿ ಧೈರ್ಯ ತುಂಬಿದ್ದಾರೆ. 'ಟಾಕ್ಸಿಕ್' ಚಿತ್ರದ ಬಗ್ಗೆ ಮಾತನಾಡಿದಾಗ, ‘ನಿಮ್ಮ ಲೈಫ್ ನೋಡಿಕೊಳ್ಳಿ. ಸಿನಿಮಾ ಬರುತ್ತೆ, ಹೋಗುತ್ತೆ, ಆರೋಗ್ಯ ಮೊದಲು’ ಎಂದು ಯಶ್ ಹೇಳಿದ್ದಾರೆ. ಅಭಿಮಾನಿಗಳಿಗೆ ಯಶ್ ಅವರ ಈ ಮಾನವೀಯತೆ ಮತ್ತು ಪ್ರೀತಿಯ ಸಂದೇಶ ವ್ಯಾಪಕ ಮೆಚ್ಚುಗೆ ಗಳಿಸಿದ್ದು, ವಿಡಿಯೋ ವೈರಲ್ ಆಗಿದೆ.

ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್

ಬಹುನಿರೀಕ್ಷಿತ ಸಿನಿಮಾಗಳಾದ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಬಿಡುಗಡೆಯ ಕೆಲಸಗಳಲ್ಲಿ ನಟ ಯಶ್ ಅವರು ಬ್ಯುಸಿಯಾಗಿದ್ದಾರೆ. ಅದರ ನಡುವೆ ಅವರು ಖರೀದಿಸಿರುವ ಹೊಸ ಆಸ್ತಿಯ ಬಗ್ಗೆ ಸುದ್ದಿ ಆಗಿದೆ. ಬಾಲಿವುಡ್ ಸೆಲೆಬ್ರಿಟಿಗಳ ರೀತಿ ಯಶ್ ಮತ್ತು ರಾಧಿಕಾ ಪಂಡಿತ್ ಕೂಡ ಅಲಿಬಾಗ್​ನಲ್ಲಿ ಆಸ್ತಿ ಖರೀದಿಸಿದ್ದಾರೆ.

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ

ರಾಕಿಂಗ್ ಸ್ಟಾರ್ ಯಶ್ ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರದ ಜೊತೆಗೆ ಸಹ-ನಿರ್ಮಾಪಕರಾಗಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಪ್ರಕಾರ, ಯಶ್ ಕೇವಲ ನಟರಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ವಿಶ್ವದರ್ಜೆಯ ಚಿತ್ರವನ್ನು ನಿರ್ಮಿಸುವ ದೃಷ್ಟಿಕೋನ ಹೊಂದಿದ್ದಾರೆ. ಭಾರತದಿಂದ ವಿಶ್ವಕ್ಕೆ ಅನನ್ಯ ಸಿನಿಮಾ ನೀಡುವ ಅವರ ಬದ್ಧತೆಯನ್ನು ನಮಿತ್ ಶ್ಲಾಘಿಸಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ಹಾಡಿಹೊಗಳಿದ ಕಿಯಾರಾ ಅಡ್ವಾಣಿ; ಹೆಚ್ಚಿತು ನಿರೀಕ್ಷೆ

ಕಿಯಾರಾ ಅಡ್ವಾಣಿ 'ಟಾಕ್ಸಿಕ್' ಚಿತ್ರದ ಕುರಿತು ಮಾತನಾಡಿ, ಅದು ಸಂಬಂಧಗಳ ಬಗೆಗಿನ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಎಂದಿದ್ದಾರೆ. ಯಶ್ ನಟನೆಯ ಈ ಸಿನಿಮಾದ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಚಿತ್ರೀಕರಣ ತಮಗೆ ಸವಾಲಾಗಿತ್ತೆಂದು ಅವರು ವಿವರಿಸಿದರು. ತಮ್ಮ ವೃತ್ತಿಪರತೆಯಿಂದ ಕನ್ನಡ ಸಂಭಾಷಣೆಗಳನ್ನು ಕಂಠಪಾಠ ಮಾಡಿದ ಅನುಭವ ಹಂಚಿಕೊಂಡ ಕಿಯಾರಾ, 'ಟಾಕ್ಸಿಕ್' ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ

ನಟ ಯಶ್ ಅವರ ತಾಯಿ ಪುಷ್ಪಾ ಅರುಣ್​ಕುಮಾರ್ ಅವರು ಬೆಂಗಳೂರಿನಲ್ಲಿ ಡಿಜಿಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪೊಲೀಸರ ಹತ್ತಿರ ರಿಪೋರ್ಟ್ ತರಬೇಕಿತ್ತು. ಅಲ್ಲಿನ ಎಸ್ ಪಿ ಪ್ರತಿಕ್ರಿಯೆ ಮಾಡಿರಲಿಲ್ಲ. ನಿಧಾನ ಆಯ್ತು, ಅದಕ್ಕೆ ಡಿಜಿಪಿಯವರನ್ನ ಭೇಟಿಯಾಗಿದ್ದೇವೆ’ ಎಂದಿದ್ದಾರೆ.

ಮಗ ಯಶ್ ಪರ ನಿಂತ ಯಶ್ ತಾಯಿ ಪುಷ್ಪಾ: ‘ಟಾಕ್ಸಿಕ್’ ಬಗ್ಗೆ ಹೇಳಿದ್ದಿಷ್ಟು

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ, 'ಟಾಕ್ಸಿಕ್' ಟೀಸರ್‌ನ ಬೋಲ್ಡ್ ದೃಶ್ಯ ಮತ್ತು ಚಿತ್ರದ ವಿಳಂಬದ ಟೀಕೆಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಕೇವಲ ಟೀಸರ್ ನೋಡಿ ನಿರ್ಧರಿಸಬೇಡಿ, ದೊಡ್ಡ ಬಜೆಟ್ ಕನ್ನಡ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಮಯ ತೆಗೆದುಕೊಳ್ಳುವುದು ಹೆಮ್ಮೆಯ ವಿಷಯ ಎಂದಿದ್ದಾರೆ. ತಮ್ಮ ಮಗ ಯಶ್ ಮಾಡುವ ಸಿನಿಮಾಗಳಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದಲ್ಲಿ ಅನೇಕ ಮಹಿಳೆಯರು ಕೆಲಸ ಮಾಡಿದ್ದಾರೆ. ನಿರ್ದೇಶಕಿ ಗೀತು ಮೋಹನ್‌ದಾಸ್ ಆ್ಯಕ್ಷನ್-ಕಟ್ ಹೇಳಿರುವ ಈ ಚಿತ್ರದಲ್ಲಿ ಯಶ್ ಜೊತೆಗೆ ರುಕ್ಮಿಣಿ ವಸಂತ್, ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮುಂತಾದ ನಟಿಯರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ

‘ಕೆಜಿಎಫ್ 3’ ಸಿನಿಮಾ ಯಾವಾಗ ಸೆಟ್ಟೇರಬಹುದು ಎಂದು ಕೇಳುವ ಅಭಿಮಾನಿಗಳಿಗೆ ಕೊಂಚ ನಿರಾಸೆ ಆಗಿದೆ. ಈ ಸಿನಿಮಾ ಬಗ್ಗೆ ಪ್ರಶಾಂತ್ ನೀಲ್ ಅವರು ಸದ್ಯಕ್ಕೆ ಯಾವುದೇ ನಿರ್ಧಾರ ಮಾಡಿಲ್ಲ. ‘ಡ್ರ್ಯಾಗನ್’ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ‘ಸಲಾರ್ 2’ ಚಿತ್ರದ ಕೆಲಸ ಆರಂಭಿಸಲಿದ್ದಾರೆ.

ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್