Yash
1986ರ ಜನವರಿ 8ರಂದು ನವೀನ್ ಕುಮಾರ್ ಗೌಡ ಆಗಿ ಜನಿಸಿದ ಯಶ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹತ್ವದ ಪ್ರಭಾವ ಬೀರಿದ ಪ್ರಮುಖ ಭಾರತೀಯ ನಟ. ಧಾರಾವಾಹಿಗಳಲ್ಲಿ ನಟಿಸಿದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಸಿನಿಮಾ ಮೂಲಕ ಹೀರೋ ಆಗಿ ಮಿಂಚಿದರು. ಅವರು ಅಭಿನಯನದ ಮೂಲಕ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ‘ಕೆಜಿಎಫ್: ಅಧ್ಯಾಯ 1’ (2018) ಚಿತ್ರದ ಮೂಲಕ ಅಭೂತಪೂರ್ವ ಯಶಸ್ಸು ಗಳಿಸಿದರು. ಚಿತ್ರದಲ್ಲಿ ಯಶ್ನ ಒರಟಾದ ಮತ್ತು ಮಹತ್ವಾಕಾಂಕ್ಷೆಯ ರಾಕಿಯ ಪಾತ್ರವು ಅಪಾರ ಪ್ರಶಂಸೆಯನ್ನು ಗಳಿಸಿತು. ಇದು ಅವರನ್ನು ಪ್ಯಾನ್-ಇಂಡಿಯ ಸ್ಟಾರ್ ಆಗಿ ಮಾಡಿತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಅವರ ಭವಿಷ್ಯದ ಯೋಜನೆಗಳನ್ನು ಕುತೂಹಲದಿಂದ ನಿರೀಕ್ಷಿಸುತ್ತಿರುವ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರು ರಾಧಿಕಾ ಪಂಡಿತ್ನ ವರಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳು.
ಇನ್ನೂ ಹೆಚ್ಚು ಓದಿಯಶ್ ಎಂದಿಗೂ ಮಾತಿಗೆ ತಪ್ಪಿದವರಲ್ಲ; ಹೊಗಳಿದ ನಿರ್ಮಾಪಕ ಜಯಣ್ಣ
ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ಮಾಪಕ ಜಯಣ್ಣ ಕಾಂಬಿನೇಷನ್ನ ‘ಜಾನು’ ಸಿನಿಮಾ ಸೆಟ್ಟೇರಿದ ರೋಚಕ ಕಥೆಯನ್ನು ಜಯಣ್ಣ ಹಂಚಿಕೊಂಡಿದ್ದಾರೆ. ಬೇರೊಬ್ಬ ನಟನಿಗೆ ನಿಗದಿಯಾಗಿದ್ದ ಈ ಚಿತ್ರಕ್ಕೆ, ಯಶ್ ಅವರ ‘ಮೊದಲಸಲ’ ಹಾಗೂ ‘ಕಿರಾತಕ’ ಸಿನಿಮಾಗಳ ಯಶಸ್ಸನ್ನು ನೋಡಿ ಜಯಣ್ಣ ಅವರು ಯಶ್ ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡ ಅಪರೂಪದ ಸಂಗತಿ ಇಲ್ಲಿದೆ.
- Rajesh Duggumane
- Updated on: Jul 29, 2026
- 1:36 pm
‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ: ನಮಿತ್ ಮಲ್ಹೋತ್ರಾ ಅಧಿಕೃತ ಘೋಷಣೆ
ಅಭಿಮಾನಿಗಳ ಕಾಯುವಿಕೆಗೆ ತೆರೆಬಿದ್ದಿದೆ. ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಗೆ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ದಿನಾಂಕ ನಿಗದಿ ಮಾಡಿದ್ದಾರೆ. ಜುಲೈ 30ರಂದು ಈ ಸಿನಿಮಾದ ಟ್ರೇಲರ್ ಅನಾವರಣ ಆಗಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಅಭಿಮಾನಿಗಳ ಕಾತರ ಹೆಚ್ಚಾಗಿದೆ.
- Madan Kumar
- Updated on: Jul 28, 2026
- 10:52 pm
‘ರಾಮಾಯಣ’ ಶೂಟಿಂಗ್ ಸೆಟ್ನಲ್ಲಿ ಶಿವನ ಹಾಡುಗಳನ್ನು ದೊಡ್ಡದಾಗಿ ಹಾಕುತ್ತಿದ್ದ ನಟ ಯಶ್
ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರಕ್ಕಾಗಿ ನಟ ಯಶ್ ಸೆಟ್ನಲ್ಲಿ ದೊಡ್ಡ ಸ್ಪೀಕರ್ ಇಟ್ಟು ಶಿವನ ಹಾಡುಗಳನ್ನು ಗಟ್ಟಿಯಾಗಿ ಹಾಕುತ್ತಿದ್ದರಂತೆ. ಚಿತ್ರದ ದ್ವಿತೀಯಾರ್ಧದಲ್ಲಿ ರಣಬೀರ್ ಮತ್ತು ಯಶ್ ಮುಖಾಮುಖಿಯಾಗುವ ಸಾಧ್ಯತೆ ದಟ್ಟವಾಗಿದೆ. ಇವರಿಬ್ಬರ ಯುದ್ಧದ ದೃಶ್ಯಗಳ ಚಿತ್ರೀಕರಣ ಇನ್ನು ಬಾಕಿ ಇದೆ ಎಂದು ರಣಬೀರ್ ಕಪೂರ್ ತಿಳಿಸಿದ್ದಾರೆ.
- Rajesh Duggumane
- Updated on: Jul 28, 2026
- 7:39 am
‘ರಾಮಾಯಣ’ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ
ರಣಬೀರ್ ಕಪೂರ್ ಹಾಗೂ ಯಶ್ ಕಾಂಬಿನೇಷನ್ನ 'ರಾಮಾಯಣ' ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗವು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸುವ ಕ್ಲಿಫ್ಹ್ಯಾಂಗರ್ ತಿರುವಿನೊಂದಿಗೆ ಕೊನೆಗೊಳ್ಳಲಿದೆ ಎಂದು ನಿರ್ದೇಶಕ ನಿತೇಶ್ ತಿವಾರಿ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈ ವಿಷಯ ಕುತೂಹಲ ಹೆಚ್ಚಿಸಿದೆ.
- Rajesh Duggumane
- Updated on: Jul 27, 2026
- 9:30 am
ರಾಮಾಯಣ: ಯಶ್ ಜತೆಗಿನ ಕ್ಲೈಮ್ಯಾಕ್ಸ್ ಶೂಟಿಂಗ್ ಇನ್ನೂ ಬಾಕಿಯಿದೆ ಎಂದ ರಣಬೀರ್ ಕಪೂರ್
ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದೆ. ‘ರಾಮಾಯಣ: ಪಾರ್ಟ್ 1’ ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಕಾಣಲಿದ್ದು, ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ರಾಮ ಮತ್ತು ರಾವಣನ ಮುಖಾಮುಖಿ ದೃಶ್ಯದ ಶೂಟಿಂಗ್ ಇನ್ನೂ ನಡೆದಿಲ್ಲ ಎಂದು ರಣಬೀರ್ ಕಪೂರ್ ಹೇಳಿದ್ದಾರೆ.
- Madan Kumar
- Updated on: Jul 26, 2026
- 12:08 pm
‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್ಗೆ ಕೌಂಟ್ಡೌನ್; ಈ ಬಾರಿಯೂ ರೊಮ್ಯಾಂಟಿಕ್ ಹಾಡು
‘ಟಾಕ್ಸಿಕ್’ ಸಿನಿಮಾದ ಬ್ಯಾಕ್-ಟು-ಬ್ಯಾಕ್ ರೊಮ್ಯಾಂಟಿಕ್ ಹಾಡುಗಳ ಯಶಸ್ಸಿನ ಬೆನ್ನಲ್ಲೇ ಈಗ ಮೂರನೇ ಸಾಂಗ್ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ. ಗ್ಯಾಂಗ್ಸ್ಟರ್ ಹಿನ್ನೆಲೆಯ ಈ ಚಿತ್ರದಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಕಾಂಬಿನೇಷನ್ನ ಮತ್ತೊಂದು ಪ್ರಣಯ ಗೀತೆ ವಿಶಾಲ್ ಮಿಶ್ರಾ ಸಂಗೀತದಲ್ಲಿ ಮೂಡಿಬರಲಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.
- Rajesh Duggumane
- Updated on: Jul 25, 2026
- 2:52 pm
‘ರಾಮಾಯಣ’ ಚಿತ್ರದ ಪ್ರಚಾರದ ಬಜೆಟ್ ಹಣದಲ್ಲಿ 4 ‘ಕೆಜಿಎಫ್’ ಸಿನಿಮಾ ನಿರ್ಮಿಸಬಹುದು
ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಪ್ರಚಾರದ ಬಜೆಟ್ ಕೇಳಿ ಇಡೀ ಚಿತ್ರರಂಗವೇ ಬೆಚ್ಚಿಬಿದ್ದಿದೆ. ಸೋನಿ ಪಿಕ್ಚರ್ಸ್ ಸಹಯೋಗದೊಂದಿಗೆ ಈ ಮಹಾಕಾವ್ಯವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಬರೋಬ್ಬರಿ 375 ಕೋಟಿ ರೂಪಾಯಿಯನ್ನು ಕೇವಲ ಪ್ರಚಾರಕ್ಕಾಗಿಯೇ ಮೀಸಲಿಡಲಾಗಿದೆ.
- Rajesh Duggumane
- Updated on: Jul 25, 2026
- 10:45 am
‘ಶ್ರೀರಾಮನ ಪಾತ್ರ ಮಾಡಲು ಭಯ, ಅನುಮಾನ ಇತ್ತು’: ವಿವರಿಸಿದ ರಣಬೀರ್ ಕಪೂರ್
ಈ ವರ್ಷ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಆಗಲು ಸಜ್ಜಾಗಿರುವ ‘ರಾಮಾಯಣ’ ಸಿನಿಮಾವನ್ನು ವಿಶ್ವಾದ್ಯಂತ ಪ್ರಚಾರ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರಾಮನ ಪಾತ್ರ ಮಾಡುವ ಅವಕಾಶ ಸಿಕ್ಕಿದ್ದರ ಬಗ್ಗೆ ರಣಬೀರ್ ಕಪೂರ್ ಮಾತನಾಡಿದ್ದಾರೆ.
- Madan Kumar
- Updated on: Jul 24, 2026
- 10:16 pm
ಕ್ಯಾಲಿಫೋರ್ನಿಯಾದಲ್ಲಿ ಯಶ್ ನೋಡಿ ‘ಡ್ಯಾಡಿಸ್ ಹೋಂ’ ಎಂದ ಫ್ಯಾನ್ಸ್
'ರಾಮಾಯಣ' ಸಿನಿಮಾದ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ರಾಕಿಂಗ್ ಸ್ಟಾರ್ ಯಶ್, ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್ನಲ್ಲಿ ಭಾರಿ ಸದ್ದು ಮಾಡಿದ್ದಾರೆ. ಯಶ್ ಅವರನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಭಾರತೀಯ ಅಭಿಮಾನಿಗಳು ಮುಗಿಬಿದ್ದಿದ್ದು, ಇದೇ ವೇಳೆ ಅವರ ಮುಂದಿನ ಚಿತ್ರ 'ಟಾಕ್ಸಿಕ್' ನ ಪ್ರಸಿದ್ಧ 'ಡ್ಯಾಡಿಸ್ ಹೋಂ' ಡೈಲಾಗ್ ಕೂಡ ಜಾಗತಿಕ ವೇದಿಕೆಯಲ್ಲಿ ಭಾರಿ ಸದ್ದು ಮಾಡಿದೆ.
- Rajesh Duggumane
- Updated on: Jul 24, 2026
- 1:22 pm
ಹೊಸ ರೀತಿಯಲ್ಲಿ ರಾವಣನ ಪಾತ್ರ ತೋರಿಸಲು ಹೊರಟ ಯಶ್
ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್ನಲ್ಲಿ ಪಾಲ್ಗೊಂಡಿದ್ದ ನಟ ಯಶ್, ತಮ್ಮ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಹಾಗೂ ರಾವಣನ ಪಾತ್ರದ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಮನಾಗಿ ನಟಿಸುತ್ತಿರುವ ರಣಬೀರ್ ಕಪೂರ್ ಅವರ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ರಾವಣನ ಅಹಂಕಾರ ಮತ್ತು ಮಾನಸಿಕ ಸ್ಥಿತಿಯನ್ನು ತೆರೆಮೇಲೆ ತರಲು ತಾವು ನಡೆಸಿದ ಸಿದ್ಧತೆಗಳ ಕುರಿತು ಮಾತನಾಡಿದ್ದಾರೆ.
- Rajesh Duggumane
- Updated on: Jul 24, 2026
- 12:00 pm
‘ರಾಮಾಯಣ’ ಚಿತ್ರಕ್ಕೆ ಎದುರಾಗಿದೆ ದೊಡ್ಡ ಸವಾಲು; ವಿವರಿಸಿದ ಯಶ್
ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್ನಲ್ಲಿ ಪಾಲ್ಗೊಂಡಿದ್ದ ನಟ ಯಶ್, ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿರುವುದು ತಮಗೆ ಸಿಕ್ಕ ದೊಡ್ಡ ಸಂತೋಷ ಎಂದಿದ್ದಾರೆ. ಎಲ್ಲರಿಗೂ ತಿಳಿದಿರುವ ಕಥೆಯನ್ನು ಜಾಗತಿಕ ಮಟ್ಟದಲ್ಲಿ ವಿಭಿನ್ನವಾಗಿ ಹಾಗೂ ನೈಜವಾಗಿ ಪ್ರಸ್ತುತಪಡಿಸುವುದು ದೊಡ್ಡ ಸವಾಲಾಗಿತ್ತು ಎಂದಿರುವ ಅವರು, ತಾವು ಈ ಚಿತ್ರಕ್ಕೆ ಸಹ-ನಿರ್ಮಾಪಕರೂ ಆಗಿರುವುದಾಗಿ ತಿಳಿಸಿದ್ದಾರೆ.
- Shreelaxmi H
- Updated on: Jul 24, 2026
- 7:48 am
ಕೊನೆಯ ಕ್ಷಣದಲ್ಲಿ ‘ರಾಮಾಯಣ’ ಟ್ರೇಲರ್ ರಿಲೀಸ್ ರದ್ದು; ಕಾರಣ ಕೊಟ್ಟ ನಮಿತ್ ಮಲ್ಹೋತ್ರಾ
ದೆಹಲಿಯಲ್ಲಿ ನಡೆದ ವಿಶೇಷ ಪ್ರಿವ್ಯೂ ಬಳಿಕ ಇಂದು (ಜುಲೈ 24) ಯೂಟ್ಯೂಬ್ನಲ್ಲಿ ‘ರಾಮಾಯಣ’ ಚಿತ್ರದ ಬಿಡುಗಡೆಯಾಗಬೇಕಿತ್ತು. ಬಹುನಿರೀಕ್ಷಿತ ಟ್ರೇಲರ್ ಕೊನೆಯ ಕ್ಷಣದಲ್ಲಿ ಮುಂದೂಡಲ್ಪಟ್ಟಿದೆ. ಸೋನಿ ಪಿಕ್ಚರ್ಸ್ ಎಂಟರ್ಟೈನ್ಮೆಂಟ್ ಜೊತೆಗಿನ ಜಾಗತಿಕ ಪಾಲುದಾರಿಕೆಯಿಂದಾಗಿ ಟ್ರೇಲರ್ ಅನ್ನು ವಿಶ್ವದಾದ್ಯಂತ ಏಕಕಾಲಕ್ಕೆ ರಿಲೀಸ್ ಮಾಡಲು ನಿರ್ಧರಿಸಲಾಗಿದೆ.
- Rajesh Duggumane
- Updated on: Jul 24, 2026
- 7:14 am