AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2025

Year Ender 2025

2025 ಮುಗಿಯುತ್ತ ಬಂತು. ಮುಂದಿನ ವರ್ಷಕ್ಕಾಗಿ ಕನಸು ಕಾಣುವ ತವಕ ಎಲ್ಲರದ್ದು ಅಲ್ಲವೇ? ಇದೇ ಹೊತ್ತಲ್ಲಿ, 2025 ರ ಪ್ರಾರಂಭದಲ್ಲಿ ನಾವು ಎಲ್ಲಿದ್ದೆವು?  ಈ ವರ್ಷದಲ್ಲಿ ಏನೇನು ಮಾಡಿದ್ವಿ. ಇವೆಲ್ಲ ನೋಡುವ ಕ್ಷಣ ಬಂದೇ ಬಿಟ್ಟಿದೆ. ಒಮ್ಮೆ ಹಿಂದೆ ನೋಡಿದರೆ ಮುಂದೆ ನಡೆಯಲು ಹುಮ್ಮಸ್ಸು ಬರುವುದು. ವಿವಿಧ ಕ್ಷೇತ್ರಗಳಲ್ಲಿ ಭಾರತ ಮಾಡಿದ ಸಾಧನೆಯ ಪುನರಾವಲೋಕನ ಮಾಡುವ ಕ್ಷಣ ಇದು. ಹಾಗೂ ಭಾರತೀಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿರುವ ಅದ್ವಿತೀಯ ಸಾಧನೆಯ ಸಿಂಹಾವಲೋಕನ ಮಾಡುವ ಕೂಡ ಪ್ರಯತ್ನ ಇಲ್ಲಿದೆ.

ಇನ್ನೂ ಹೆಚ್ಚು ಓದಿ

Year Ender 2025: ಪಹಲ್ಗಾಮ್​ನಿಂದ ಶ್ವೇತ ಭವನದವರೆಗೆ 2025ರಲ್ಲಿ ಪ್ರಪಂಚದಲ್ಲಿ ಏನೇನಾಯ್ತು?

2025ರಲ್ಲಿ ಭಯ, ನೋವು, ಗೆಲುವು ಹಾಗೂ ಭರವಸೆಯ ಮಿಶ್ರಣವಾಗಿತ್ತು. ಭಾರತೀಯರ ಪಾಲಿಗೆ ಕಹಿ ವರ್ಷವೇ ಆಗಿತ್ತು. ಪಹಲ್ಗಾಮ್ ದಾಳಿ, ಏರ್ ಇಂಡಿಯಾ ಅಪಘಾತಗಳು ಆಘಾತ ತಂದರೆ ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿ ಭಾರತಕ್ಕೆ ಹೆಮ್ಮೆ ತಂದಿದ್ದರು. ಭಾರತ ಸೇರಿ ಪ್ರಪಂಚಾದ್ಯಂತ 2025ರಲ್ಲಿ ನಡೆದ ಪ್ರಮುಖ ಘಟನೆಗಳ ಕುರಿತ ಒಂದಿಷ್ಟು ಮಾಹಿತಿ ಇಲ್ಲಿದೆ.

Sankashti Chaturthi 2025: ಇಂದು ವರ್ಷದ ಕೊನೆಯ ಸಂಕಷ್ಟ ಚತುರ್ಥಿ; ಪೂಜಾ ವಿಧಾನ ಮತ್ತು ಮಹತ್ವ ತಿಳಿಯಿರಿ

ಸಂಕಷ್ಟ ಚತುರ್ಥಿ ಗಣೇಶನ ಆರಾಧನೆಗೆ ಮೀಸಲಾದ ವಿಶೇಷ ದಿನ. ಹುಣ್ಣಿಮೆ ನಂತರ ಸಂಕಷ್ಟಹರ ಚತುರ್ಥಿ, ಅಮಾವಾಸ್ಯೆ ಬಳಿಕ ವಿನಾಯಕ ಚತುರ್ಥಿ ಬರುತ್ತದೆ. ಇದು ಜೀವನದ ಅಡೆತಡೆಗಳನ್ನು ನಿವಾರಿಸಿ, ಸುಖ-ಸಮೃದ್ಧಿ ತರುತ್ತದೆ ಎಂಬ ನಂಬಿಕೆ. ಈ ದಿನ ಉಪವಾಸವಿದ್ದು, ಗಣೇಶನನ್ನು ಪೂಜಿಸಿ, ಚಂದ್ರೋದಯದ ನಂತರ ವ್ರತ ಮುರಿಯುವುದು ರೂಢಿ. ಈ ಆಚರಣೆಗಳಿಂದ ಇಷ್ಟಾರ್ಥ ಸಿದ್ಧಿಸುತ್ತವೆ.

Year Ender 2025: ಈ ವರ್ಷ ಭಾರೀ ಗಮನ ಸೆಳೆದ ಭಾರತದ ಪ್ರಮುಖ ದೇವಾಲಯಗಳಿವು

2025ರಲ್ಲಿ ಭಾರತದ ಹಲವು ಪ್ರಮುಖ ದೇವಾಲಯಗಳು ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದವು. ಪ್ರಯಾಗ್‌ರಾಜ್ ಮಹಾಕುಂಭ ಮೇಳ, ಅಯೋಧ್ಯೆ ರಾಮಮಂದಿರದ ಧ್ವಜಾರೋಹಣ, ಪುರಿ ಜಗನ್ನಾಥ ದೇವಾಲಯದಲ್ಲಿ ಗರುಡ ಪಕ್ಷಿಯ ಘಟನೆ, ವಾರಣಾಸಿಯ ಕಾಶಿ ವಿಶ್ವನಾಥ ದೇಗುಲದಲ್ಲಿ ಬಿಳಿ ಗೂಬೆಯ ದರ್ಶನ ಹಾಗೂ ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದ ಅಗ್ನಿ ಅವಘಡದಂತಹ ಪ್ರಮುಖ ಘಟನೆಗಳು ವರ್ಷವಿಡೀ ಸುದ್ದಿಯಲ್ಲಿದ್ದವು. ಈ ದೇಗುಲಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Aries Yearly Horoscope 2026: 2026ರ ಹೊಸ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಮೇಷ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವರ್ಷ ಭವಿಷ್ಯದ ವಿವರ ಇಲ್ಲಿದೆ. ಇದು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸುವಂಥ ಭವಿಷ್ಯವಾಗಿದೆ. ಹೆಚ್ಚು ಅವಧಿಗೆ ಒಂದೇ ರಾಶಿಯಲ್ಲಿ ಸ್ಥಿತವಾಗಿರುವಂಥ ಶನಿ, ರಾಹು-ಕೇತು ಹಾಗೂ ಗುರು ಗ್ರಹದ ಸಂಚಾರವನ್ನು ಪರಿಗಣಿಸಿ, ಮೇಷ ರಾಶಿಯವರಿಗೆ 2026ನೇ ಇಸವಿಯಲ್ಲಿ ಶುಭಾಶುಭ ಫಲಗಳು ಹೇಗಿರಲಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು.

ಸೈಬರ್​​ ಕ್ರೈಂ​ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್​​ಗಳ ಸಂಖ್ಯೆ 13,000ಕ್ಕೆ ಇಳಿಕೆ

ರಾಜ್ಯ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಕಳೆದ ವರ್ಷಗಳಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಕರ್ನಾಟಕದಲ್ಲಿ ಗಣನೀಯವಾಗಿ ಇಳಿಕೆ ಕಂಡಿವೆ. ಡಿಜಿಪಿ ನೇಮಕ, ಹೆಚ್ಚಿನ ಸೆನ್ ಠಾಣೆಗಳು, ಮತ್ತು ಸಹಾಯವಾಣಿ ಸೇವೆ ಆರಂಭದಿಂದಾಗಿ ಈ ಸಾಧನೆ ಸಾಧ್ಯವಾಗಿದ್ದು, ಡಿಜಿಟಲ್​​ ವಂಚಕರಿಗೆ ಕರ್ನಾಟಕ ಪೊಲೀಸರು ಸಿಂಹಸ್ವಪ್ನವಾಗಿ ಮಾರ್ಪಟ್ಟಿದ್ದಾರೆ.

ಈ ವರ್ಷ ಪೋಷಕರಾದ ಬಾಲಿವುಡ್ ಸೆಲೆಬ್ರಿಟಿಗಳು ಇವರೇ ನೋಡಿ

Year End 2025: ಬಾಲಿವುಡ್ ಪಾಲಿಗೆ 2025 ಬಹಳ ವಿಶೇಷವಾಗಿತ್ತು. ಅನೇಕ ಹಿಟ್ ಚಿತ್ರಗಳು ಬಂದವು. ಅನೇಕರು ವಿವಾಹ ಆದರು. ಇನ್ನೂ ಕೆಲವು ಕಹಿ ಘಟನೆಗಳು ನಡೆದಿವೆ ಎಂಬುದು ನಿಜ. ಅದೇ ರೀತಿ ಅನೇಕರ ನಟ-ನಟಿಯರು ಮಗುವಿಗೆ ಪಾಲಕರಾಗಿದ್ದಾರೆ. ಆ ವಿಷಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ವರ್ಷ ತಂದೆ-ತಾಯಿ ಆದ ಸೆಲೆಬ್ರಿಟಿಗಳ ವಿವರ ಇಲ್ಲಿದೆ.

ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11 ತಿಂಗಳಲ್ಲಿ 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು ಪೊಲೀಸರು 2025ರಲ್ಲಿ 146 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 19-35 ವರ್ಷದ ಯುವಕರನ್ನು ಗುರಿಯಾಗಿಸಿಕೊಂಡ ಡ್ರಗ್ ಮಾಫಿಯಾ ವಿರುದ್ಧ ಸಿಸಿಬಿ ಸೇರಿದಂತೆ ಬೆಂಗಳೂರು ಪೊಲೀಸರ ಹಲವು ತಂಡಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ.

ಭಾರತದ ಅತ್ಯಂತ ಜನಪ್ರಿಯ ತಾರೆಯರ​ ಪಟ್ಟಿಯಲ್ಲಿ ಕನ್ನಡದ ಮೂವರಿಗೆ ಸ್ಥಾನ

IMDb 2025ರ ಭಾರತದ ಅತ್ಯಂತ ಜನಪ್ರಿಯ ತಾರೆಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ಶಾರುಖ್, ಸಲ್ಮಾನ್ ಸ್ಥಾನ ಪಡೆದಿಲ್ಲ. ಟಾಪ್ 10ರಲ್ಲಿ ಬಹುತೇಕ ಹೊಸ ಮುಖಗಳಿದ್ದು, ಮೂವರು ಕನ್ನಡದ ಕಲಾವಿದರಾದ ರಶ್ಮಿಕಾ ಮಂದಣ್ಣ (6), ರುಕ್ಮಿಣಿ ವಸಂತ್ (9), ರಿಷಬ್ ಶೆಟ್ಟಿ (10) ಸ್ಥಾನ ಗಳಿಸಿದ್ದಾರೆ.

ಬೆಂಗಳೂರು: 2024 ರ ಕೊನೆಯ ದಿನ 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಸ್ವಾಗತ ಭರ್ಜರಿಯಾಗಿ ನಡೆದಿದೆ. ನಗರದ ಹಲವು ಕಡೆಗಳಲ್ಲಿ ಪಾರ್ಟಿ, ಮೋಜು ಮಸ್ತಿ ನಡೆದಿವೆ. ಆದರೆ, ಈ ಪಾರ್ಟಿಗಳಿಗೆ ಪೂರೈಕೆ ಆಗಬೇಕಿದ್ದ ಸುಮಾರು ಎರಡುವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 2024ರ ಕೊನೆಯ ದಿನದ ಸಿಸಿಬಿ ಬೇಟೆಯ ವಿವರ ಇಲ್ಲಿದೆ.

2024ರಲ್ಲಿ ಬೆಂಗಳೂರಿನಲ್ಲಿ ಈಡೇರದೇ ಬಾಕಿ ಉಳಿದ 18 ವಿಷಯಗಳಿವು

Bengaluru News: ಇಂದು ರಾತ್ರಿ ಕಳೆಯುವಷ್ಟರಲ್ಲಿ 2024 ಕಳೆದು 2025ನೇ ವರ್ಷ ಬಂದಿರುತ್ತದೆ. ಕಳೆದೊಂದು ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲೂ ಅನೇಕ ಏರಿಳಿತಗಳು ಸಂಭವಿಸಿವೆ. ಟೆಕ್ ರಾಜಧಾನಿ ಎಂದೇ ಹೆಸರಾಗಿರುವ ಬೆಂಗಳೂರು ಕೂಡ ಈ ಒಂದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ಆದರೆ, 2024ರಲ್ಲಿ ಬೆಂಗಳೂರಿನಲ್ಲಿ ಆಗಬೇಕಾಗಿದ್ದ ಕೆಲವು ವಿಷಯಗಳು ಬಾಕಿ ಉಳಿದಿವೆ. ಅವು ಯಾವುವು? ಕೈಗೆ ಬಂದಿದ್ದು ಬಾಯಿಗೆ ಬಾರದಿರಲು ಕಾರಣವೇನು? ಎಂಬಿತ್ಯಾದಿ ವಿಷಯಗಳ ಬಗ್ಗೆ ಸಣ್ಣ ಕಿರುನೋಟ ಇಲ್ಲಿದೆ.

ಭಾರತಕ್ಕೆ 2024ರ ಸಿಹಿ; ಆರ್ಥಿಕತೆಯಿಂದ ಹಿಡಿದು ಬಾಹ್ಯಾಕಾಶದವರೆಗೆ ಭಾರತ ಇಟ್ಟ ದೈತ್ಯ ಹೆಜ್ಜೆಗಳಿವು…

India at 2024: 2024ರಲ್ಲಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಮೈಲಿಗಲ್ಲುಗಳನ್ನು ಕಂಡಿದೆ. ಜಾಗತಿಕ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟುಗಳ ನಡುವೆ ಭಾರತ ಗಟ್ಟಿ ಹೆಜ್ಜೆಗಳನ್ನಿಟ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ದರ ಶೇ. 8.2ರ ಮಟ್ಟದಲ್ಲಿತ್ತು. ಈ ವರ್ಷ ಶೇ. 6.5ರ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. 2024ರಲ್ಲಿ ಷೇರು ಮಾರುಕಟ್ಟೆ ಮಿಂಚಿನ ಬಂಡವಾಳ ಹರಿವು ಕಂಡಿದೆ. ಬಾಹ್ಯಾಕಾಶ ಯೋಜನೆಗಳು ದಟ್ಟವಾಗತೊಡಗಿವೆ.

Year Ender 2024: ರತನ್ ಟಾಟಾ, ಮನಮೋಹನ್ ಸಿಂಗ್, ಜಾಕಿರ್ ಹುಸೇನ್; ಈ ವರ್ಷ ನಿಧನರಾದ ಭಾರತೀಯ ಗಣ್ಯರಿವರು

2024 ವರ್ಷ ಸದ್ದಿಲ್ಲದೆ ಮುಗಿಯುತ್ತಿದೆ. ಈ 12 ತಿಂಗಳಲ್ಲಿ ಭಾರತದಲ್ಲಿ ಅನೇಕ ವಿದ್ಯಮಾನಗಳು ನಡೆದಿವೆ, ಹಲವು ದುರ್ಘಟನೆಗಳು ಸಂಭವಿಸಿವೆ. ಅನೇಕ ಗಣ್ಯರು ನಮ್ಮನ್ನು ಅಗಲಿದ್ದಾರೆ. ಅವರ ಪೈಕಿ ಅತಿ ಮುಖ್ಯರಾದವರ ಬಗ್ಗೆ ಮಾಹಿತಿ ಇಲ್ಲಿದೆ. ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಭಾರತೀಯ ಸೆಲೆಬ್ರಿಟಿಗಳಲ್ಲಿ ಕೈಗಾರಿಕೋದ್ಯಮಿ ರತನ್ ಟಾಟಾ, ತಬಲಾ ವಾದಕ ಜಾಕಿರ್ ಹುಸೇನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಸೇರಿದಂತೆ ಹಲವರಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ