AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ಗೆ ಸರ್ಕಾರಿ ಕೆಲಸದಲ್ಲಿರುವ ಗಂಡನೇ ಬೇಕು, ತಿಂಗಳಿಗೆ 1.2 ಲಕ್ಷ ರೂ. ಸಂಬಳ ಗಳಿಸುವ ವರನನ್ನು ತಿರಸ್ಕರಿಸಿದ ವಧು

ಅನೇಕ ಕಾರಣಗಳಿಗೆ ಮದುವೆ ಮಂಟಮದಲ್ಲಿಯೇ ಅದೆಷ್ಟೋ ಮದುವೆಗಳು ಮುರಿದು ಬಿದ್ದಿರುವ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಇಲ್ಲೊಂದು ಅಂತಹದ್ದೇ ವಿಚಿತ್ರ ಘಟನೆ ನಡೆದಿದ್ದು, ಮದುಮಗ ಸರ್ಕಾರಿ ಕೆಲಸದಲ್ಲಿಲ್ಲ ಎಂಬ ವಿಚಾರ ತಿಳಿದು ಆತನಿಗೆ ತಿಂಗಳಿಗೆ 1.2 ಲಕ್ಷ ಸಂಬಳ ಇದ್ರೂ ನನಗೆ ಸರ್ಕಾರಿ ಕೆಲಸದ ಗಂಡನೇ ಬೇಕೆಂದು ಪಟ್ಟು ಹಿಡಿದು ವಧು ಮದುವೆ ಮಂಟಪದಲ್ಲಿಯೇ ಮದುವೆಯನ್ನು ಮುರಿದಿದ್ದಾಳೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ನನ್ಗೆ ಸರ್ಕಾರಿ ಕೆಲಸದಲ್ಲಿರುವ ಗಂಡನೇ ಬೇಕು, ತಿಂಗಳಿಗೆ 1.2 ಲಕ್ಷ ರೂ. ಸಂಬಳ ಗಳಿಸುವ ವರನನ್ನು ತಿರಸ್ಕರಿಸಿದ ವಧು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Nov 27, 2024 | 4:46 PM

Share

ಹೆಚ್ಚಿನ ಹುಡುಗಿಯರು ತಾವು ಮದುವೆಯಾಗುವ ಹುಡುಗ ಹ್ಯಾಂಡ್ಸಮ್‌ ಆಗಿರ್ಬೇಕು, ಉತ್ತಮ ಸಂಬಳವನ್ನು ಪಡೆಯುವ ಉದ್ಯೋಗದಲ್ಲಿರಬೇಕು ಎಂದು ಬಯಸುತ್ತಾರೆ. ಇನ್ನೂ ಕೆಲವರು ಹುಡುಗ ಹೇಗಿದ್ರೂ ಪರವಾಗಿಲ್ಲ ಆತನಿಗೆ ಸರ್ಕಾರಿ ಕೆಲಸ ಇದ್ರೆ ಸಾಕಪ್ಪಾ ಎನ್ನುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಯುವತಿ ಕೂಡಾ ತನಗೆ ಸರ್ಕಾರಿ ಕೆಲಸದಲ್ಲಿರುವ ಗಂಡನೇ ಬೇಕೆಂದು ಮದುವೆ ಮಂಟಪದಲ್ಲಿಯೇ ಖಾಸಗಿ ಕಂಪೆನಿಯಲ್ಲಿ ತಿಂಗಳಿಗೆ 1.2 ಲಕ್ಷ ಸಂಬಳ ಗಳಿಸುವ ವರನನ್ನು ತಿರಸ್ಕರಿಸಿ, ಆಗಬೇಕಿದ್ದ ಮದುವೆಯನ್ನೇ ಮುರಿದಿದ್ದಾಳೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ವಿಚಿತ್ರ ಘಟನೆ ಉತ್ರರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದಿದ್ದು, ಸಂಪ್ರದಾಯಬದ್ಧವಾಗಿ ವರ ಮಾಲೆಯನ್ನು ವಿನಿಯಮ ಮಾಡಿಕೊಂಡ ಬಳಿಕ ವರ ಸರ್ಕಾರಿ ಕೆಲಸದಲ್ಲಿಲ್ಲ ಎಂಬ ವಿಚಾರ ತಿಳಿದು ವಧು ಮದುವೆಗೆ ಒಲ್ಲೆ ಎಂದಿದ್ದಾಳೆ. ವರದಿಗಳ ಪ್ರಕಾರ ವಧುವಿನ ಕುಟುಂಬವು ಛತ್ತೀಸ್‌ಗಢದ ಬಲರಾಮ್‌ಪುರದ ಹುಡುಗನೊಂದಿಗೆ ಮದುವೆಯನ್ನು ಏರ್ಪಡಿಸಿದ್ದರು. ಮದುವೆ ಬ್ರೋಕರ್‌ ಹುಡುಗ ಸರ್ಕಾರಿ ಇಂಜಿನಿಯರ್‌, ಆತನ ಹೆಸರಲ್ಲಿ ಆರು ನಿವೇಶನಗಳಿವೆ ಜೊತೆಗೆ ಕೃಷಿ ಭೂಮಿಯೂ ಕೂಡಾ ಇದೆ ಎಂದು ಹೇಳಿ ಮದುವೆಗೆ ಒಪ್ಪಿಸಿದ್ದರು. ವಾಸ್ತವದಲ್ಲಿ ಹುಡುಗನ ಕುಟುಂಬ ಕನೌಜ್‌ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಜೊತೆಗೆ ವರನಿಗೆ ಯಾವುದೇ ಸರ್ಕಾರಿ ಕೆಲಸ ಕೂಡಾ ಇರಲಿಲ್ಲ ಬದಲಾಗಿ ಆತ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದ.

ಮದುವೆಯ ದಿನ ವರ ಮಾಲೆಯನ್ನು ವಿನಿಮಯ ಮಾಡಿಕೊಂಡ ಬಳಿಕ ವಧುವಿಗೆ ಈ ಸತ್ಯ ತಿಳಿದಿದ್ದು, ನನಗೆ ಈ ಹುಡುಗ ಬೇಡ ಎಂದು ಮದುವೆಯನ್ನು ನಿರಾಕರಿಸಿದ್ದಾಳೆ. ನಂತರ ಎರಡೂ ಕುಟುಂಬದವರು ವಧುವಿನ ಮನವೊಲಿಸಲು ಪ್ರಯತ್ನಿಸಿದರೂ ಆಕೆ ನನಗೆ ಈತ ಬೇಡ್ವೇ ಬೇಡಾ ಎಂದು ಪಟ್ಟು ಹಿಡಿದಿದ್ದಾಳೆ. ಅಷ್ಟೇ ಅಲ್ಲದೆ ವರ ತನ್ನ ಸ್ಯಾಲರಿ ಸ್ಲಿಪ್‌ ತೋರಿಸಿ ನೋಡು ನನಗೆ ಸರ್ಕಾರಿ ಕೆಲಸ ಇಲ್ಲಂದ್ರೆ ಏನಂತೆ ನಾನು ತಿಂಗಳಿಗೆ 1.2 ಲಕ್ಷ ಸಂಪಾದನೆ ಮಾಡುತ್ತೇನೆ ಎಂದು ಹೇಳಿದ್ದಾನೆ. ಇವರ ಯಾವ ಮಾತಿಗೂ ಬಗ್ಗದ ವಧು ನಾನು ಮದುವೆಯಾದ್ರೆ ಸರ್ಕಾರಿ ಕೆಲಸದ ಹುಡುಗನನ್ನೇ ಎಂದು ಹೇಳಿದ್ದಾಳೆ.

ಇದನ್ನೂ ಓದಿ: 89 ರ ನಡುವೆ ಅಡಗಿರುವ ನಂಬರ್‌ 88 ಅನ್ನು ಹುಡುಕಬಲ್ಲಿರಾ?

ಬಳಿಕ ಎರಡೂ ಕುಟುಂಬದವರು ಮಾತುಕತೆ ನಡೆಸಿ ಮದುವೆಗಾದ ಖರ್ಚನ್ನು ಸಮಪಾಲು ಮಾಡೋಣ ಎಂಬ ಒಪ್ಪಂದಕ್ಕೆ ಬಂದು ಮದುವೆಯನ್ನು ನಿಲ್ಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 4:15 pm, Wed, 27 November 24

Follow Us
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ