ಕೊವಿಡ್​ನಿಂದ ಮೃತಪಟ್ಟ ಸಿಂಹ; ಪ್ರಾಣಿಗಳನ್ನೂ ಬಾಧಿಸುತ್ತಿದೆ ಅಪಾಯ

ಸದ್ಯ ತಮಿಳುನಾಡಿನಲ್ಲಿ ಕೊವಿಡ್ ನಿಯಂತ್ರಿಸಲೋಸುಗ ಲಾಕ್​ಡೌನ್ ಜಾರಿಯಲ್ಲಿದೆ. ಹೀಗಾಗಿ ಪ್ರಾಣಿ ಸಂಗ್ರಹಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಇದೇ ಮೃಗಾಲಯದ 8 ಸಿಂಹಗಳಿಗೆ ಕಳೆದ ತಿಂಗಳು ಕೊವಿಡ್ ಸೋಂಕು ದೃಢಪಟ್ಟಿತ್ತು ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.  

ಕೊವಿಡ್​ನಿಂದ ಮೃತಪಟ್ಟ ಸಿಂಹ; ಪ್ರಾಣಿಗಳನ್ನೂ ಬಾಧಿಸುತ್ತಿದೆ ಅಪಾಯ
ಪ್ರಾತಿನಿಧಿಕ ಚಿತ್ರ
Follow us
| Updated By: guruganesh bhat

Updated on: Jun 04, 2021 | 5:57 PM

ಚೆನ್ನೈ: ತಮಿಳುನಾಡಿನ ಅರಿಗ್ನಾರ್ ಅಣ್ಣಾ ಪ್ರಾಣಿ ಸಂಗ್ರಹಾಲಯದಲ್ಲಿ ಗಂಡು ಸಿಂಹವೊಂದು ಮೃತಪಟ್ಟಿದ್ದು, ಕೊವಿಡ್ ಸೋಂಕಿನಿಂದ ಸಾವನ್ನಪ್ಪಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಖಚಿತತೆಗಾಗಿ ಭೂಪಾಲ್​ನ ಪ್ರಾಣಿಗಳ ಖಾಯಿಲೆಗಳ ಕುರಿತು ಸಂಶೋಧನೆ ನಡೆಸುವ ರಾಷ್ಟ್ರೀಯ ಸಂಸ್ಥೆಗೆ ಮೃತಪಟ್ಟ ಸಿಂಹದ ಮಾದರಿ ರವಾನಿಸಲಾಗಿದ್ದು, ಪರೀಕ್ಷೆಯಲ್ಲಿ ಸಿಂಹಕ್ಕೆ ಕೊವಿಡ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಲಾಗಿದೆ.

ಮೃತಪಟ್ಟ ಗಂಡು ಸಿಂಹದ ಜತೆಗೆ ಇನ್ನೂ ಕೆಲವು ಸಿಂಹಗಳಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಕೊವಿಡ್ ಪರೀಕ್ಷೆಗಾಗಿ ಈ ಎಲ್ಲ ಸಿಂಹಗಳ ಅಗತ್ಯ ಮಾದರಿಗಳನ್ನು ಭೂಪಾಲ್​ಗೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ ಸಿಂಹಗಳಿಕೆ ಕೊವಿಡ್ ಸೋಂಕು ಇರುವುದು ಖಚಿತವಾಗಿದೆ. ಮೃತಪಟ್ಟ ಸಿಂಹ ಕಳೆದ ವಾರ ಅನಾರೋಗ್ಯಕ್ಕೆ ಈಡಾಗಿದ್ದು, ಪ್ರಾಣಿ ಸಂಗ್ರಹಾಲಯದ ಅಧಿಕಾರಿಗಳು ಕೊವಿಡ್ ಇರುವ ಬಗ್ಗೆ ಅನುಮಾನಗೊಂಡು ಪರೀಕ್ಷೆಗೆ ಮಾದರಿ ಕಳುಹಿಸಿದ್ದರು.

ಸದ್ಯ ತಮಿಳುನಾಡಿನಲ್ಲಿ ಕೊವಿಡ್ ನಿಯಂತ್ರಿಸಲೋಸುಗ ಲಾಕ್​ಡೌನ್ ಜಾರಿಯಲ್ಲಿದೆ. ಹೀಗಾಗಿ ಪ್ರಾಣಿ ಸಂಗ್ರಹಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಇದೇ ಮೃಗಾಲಯದ 8 ಸಿಂಹಗಳಿಗೆ ಕಳೆದ ತಿಂಗಳು ಕೊವಿಡ್ ಸೋಂಕು ದೃಢಪಟ್ಟಿತ್ತು ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.

ಹೈದರಾಬಾದ್​ನಲ್ಲೂ ದೃಢಪಟ್ಟಿತ್ತು ಸಿಂಹಗಳಿಗೆ ಸೋಂಕು

ಹೈದರಾಬಾದ್​ ನಗರದ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿತ್ತು

ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿತ್ತು

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿತ್ತು.. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗಿತ್ತು.

ಬೇರೆ ಕೆಲವು ದೇಶಗಳಲ್ಲಿ ಕಳೆದ ವರ್ಷವೇ ಇಂಥ ಕೇಸ್​ಗಳು ವರದಿಯಾಗಿವೆ. ಕಳೆದ ಏಪ್ರಿಲ್​ನಲ್ಲಿ ನ್ಯೂಯಾರ್ಕ್​ ಸಿಟಿಯಲ್ಲಿ ಹುಲಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಮನುಷ್ಯನ ಮೂಲಕ ಪ್ರಾಣಿಗಳಿಗೆ ಕೊರೊನಾ ಸೋಂಕು ತಗುಲುತ್ತದೆ ಎಂದು ತಜ್ಞರು ತಿಳಿಸುತ್ತಾರೆ. ಕೊರೊನಾ ಸೋಂಕು ಇದ್ದರೂ ಕೆಲವರಲ್ಲಿ ಅದರ ಲಕ್ಷಣಗಳು ಗೋಚರಿಸುವುದಿಲ್ಲ. ಅಂಥವರಿಂದಲೇ ಪ್ರಾಣಿಗಳಿಗೆ ಕೊವಿಡ್ ತಗುಲುತ್ತದೆ ಎಂಬುದು ದೃಢಪಟ್ಟಿದೆ.

ಇದನ್ನೂ ಓದಿ:  ಮೈಸೂರು ಮೃಗಾಲಯಕ್ಕೂ ಎದುರಾಯ್ತು ಲಾಕ್​ಡೌನ್ ಸಂಕಷ್ಟ; ಪ್ರಾಣಿಗಳ ನೆರವಿಗೆ ಬರುವಂತೆ ಪ್ರಾಧಿಕಾರದಿಂದ ಮನವಿ

ಲಾಕ್​ಡೌನ್ ಯಶಸ್ವಿಗೊಳಿಸಲು, ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ನಾವು ಸಿದ್ಧ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿಕೆ (1 lion died from Covid 19 in Tamil Nadu)

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್