AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ

ಪರಿಸರಕ್ಕೆ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ
ಅಭಿಯಾನ
TV9 Web
| Edited By: |

Updated on:Sep 10, 2021 | 11:08 AM

Share

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪರಿಸರಕ್ಕೆ ಯಾವುದೇ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ. ಜತೆಗೆ ಆನ್​ಲೈನ್​ನಲ್ಲಿ ಸಹ ಅಭಿಯಾನ ಕೈಗೊಂಡಿದೆ. ನೀವೂ ಸಹ ಇದರಲ್ಲಿ ಪಾಲ್ಗೊಂಡು ಪ್ರಮಾಣ ಪತ್ರವನ್ನು ಸ್ವೀಕರಿಸಬಹುದು. ಆಕರ್ಷಕ ಗಣಪನ ಮೂರ್ತಿಗೆ ಬಹುಮಾನವನ್ನೂ ಗೆಲ್ಲಬಹುದು.

ಈ ಬಾರಿ ಮಂಡಳಿಯಿಂದ ವಿಶೇಷವಾದ ಯೋಜನೆ ಆರಂಭಗೊಂಡಿದೆ. ಹಿಂದೂ ಧರ್ಮದಲ್ಲಿ ಅರಿಶಿಣಕ್ಕೆ ಶ್ರೇಷ್ಠ ಸ್ಥಾನವಿದೆ. ಜತೆಗೆ ಪರಿಸರಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ಹಾಗಾಗಿ ಈ ಬಾರಿ ಅರಿಶಿಣದಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ತಯಾರಿಸಲು ಕರೆ ನೀಡಿದೆ.

ಸೆಪ್ಟೆಂಬರ್ 8ರಿಂದ ಈ ಅಭಿಯಾನ ಕೈಗೊಳ್ಳಲಾಗಿದ್ದು, ಇಂದು ಕೊನೇಯ ದಿನಾಂಕ. ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪನ ಮೂರ್ತಿಯ ಜತೆಗೆ ನೀವೂ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಬಹುದು. ಅಲ್ಲದೇ ಆಕರ್ಷಕ ಫೋಟೋಗಳಿಗೆ ಬಹುಮಾನವನ್ನೂ ಸಹ ಪಡೆಯಬಹುದು.

ಗಮನಿಸಿ:  https://links.bsgkarnataka.org/eco-friendly-ganesha*

ಸೋಷಿಯಲ್ ಮೀಡಿಯಾದಲ್ಲಿ ನೀವು ತಯಾರಿಸಿದ ಅರಿಶಿಣ ಗಣೇಶನ ಮೂರ್ತಿಯೊಂದಿಗೆ ನಿಮ್ಮ ಫೋಟೋವನ್ನು ಕ್ಲಿಕ್ಕಿಸಿ ಈ ಕೆಳಗೆ ಸೂಚಿಸಿರುವ ಹ್ಯಾಶ್​ಟ್ಯಾಗ್​ನೊಂದಿಗೆ ಪೋಸ್ಟ್ ಮಾಡಿ.

#scoutsmakeganesha #1millionturmericganesha #bsgkarnataka #scoutsforsgds #scoutspromisetotheplanet #turmericganeshacampaign #onemillioncampaign #kspcb #greenvisarjan

ಇದನ್ನೂ ಓದಿ:

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

(10 lakh turmeric ganesha statue campaign from pollution board for ganesha chaturthi)

Published On - 10:47 am, Fri, 10 September 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ