AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟು ಹಬ್ಬದಂದು ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು; ಕುಟುಂಬಸ್ಥರು ಅಸ್ವಸ್ಥ

ಮಾರ್ಚ್ 24 ರಂದು ಕೇಕ್ ಆರ್ಡರ್ ಮಾಡಲಾಗಿದ್ದು, ರಾತ್ರಿ 7 ಗಂಟೆ ಸುಮಾರಿಗೆ ಕೇಕ್ ಕತ್ತರಿಸಲಾಗಿದೆ. ರಾತ್ರಿ 10 ಗಂಟೆಯ ವೇಳೆಗೆ ಇಡೀ ಕುಟುಂಬವು ಅಸ್ವಸ್ಥಗೊಂಡಿದೆ ಎಂದು ಮೃತ ಬಾಲಕಿಯ ಅಜ್ಜ ಹರ್ಬನ್ ಲಾಲ್ ಹೇಳಿದ್ದಾರೆ.

ಹುಟ್ಟು ಹಬ್ಬದಂದು ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು; ಕುಟುಂಬಸ್ಥರು ಅಸ್ವಸ್ಥ
ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು
ಅಕ್ಷತಾ ವರ್ಕಾಡಿ
|

Updated on:Mar 31, 2024 | 5:57 PM

Share

ಹುಟ್ಟು ಹಬ್ಬದಂದು ಆನ್‌ಲೈನ್‌ನಲ್ಲಿ ಕೇಕ್​​ ಆರ್ಡರ್ ಮಾಡಿ ಕತ್ತರಿಸಿ ಪರಸ್ಪರ ತಿನ್ನಿಸುತ್ತಾ ಸಂಭ್ರಮಿಸಿದ ಕೆಲ ಹೊತ್ತಿನಲ್ಲೇ ಆರೋಗ್ಯ ಏರುಪೇರಾಗಿದ್ದು, ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ 10 ವರ್ಷದ ಬಾಲಕಿ ಮಾನ್ವಿ ಸೇರಿದಂತೆ ಕುಟುಂಬಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಹುಟ್ಟುಹಬ್ಬದಂದೇ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಅಘಾತಕಾರಿ ಘಟನೆ ಪಂಜಾಬ್​​ನ ಪಟಿಯಾಲಾದಲ್ಲಿ ನಡೆದಿದೆ.

ಮಾರ್ಚ್ 24 ರಂದು ಪಟಿಯಾಲಾದ ಬೇಕರಿಯಿಂದ ಆನ್‌ಲೈನ್‌ನಲ್ಲಿ ಕೇಕ್ ಆರ್ಡರ್ ಮಾಡಲಾಗಿದ್ದು, ರಾತ್ರಿ 7 ಗಂಟೆ ಸುಮಾರಿಗೆ ಕೇಕ್ ಕತ್ತರಿಸಲಾಗಿದೆ, ಅದೇ ರಾತ್ರಿ 10 ಗಂಟೆಯ ವೇಳೆಗೆ ಇಡೀ ಕುಟುಂಬವು ಅಸ್ವಸ್ಥಗೊಂಡಿದೆ ಎಂದು ಮೃತ ಬಾಲಕಿಯ ಅಜ್ಜ ಹರ್ಬನ್ ಲಾಲ್ ಹೇಳಿದ್ದಾರೆ. ಮಾನ್ವಿ ಸಾವಿಗೆ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಮಾನ್ವಿಯ ತಾಯಿ ಕಾಜಲ್ ನೀಡಿದ ದೂರಿನ ಮೇರೆಗೆ ಸ್ಥಳೀಯ ಪೊಲೀಸರು ‘ಕನ್ಹಾ ಬೇಕರಿ’ ಅಂಗಡಿ ವಿರುದ್ಧ ಸೆಕ್ಷನ್ 304-ಎ (ನಿರ್ಲಕ್ಷ್ಯದಿಂದ ಸಾವು) ಮತ್ತು 273ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಪಟಿಯಾಲಾದ ‘ಕೇಕ್ ಕನ್ಹಾ’ನಿಂದ ಆರ್ಡರ್ ಮಾಡಲಾಗಿದ್ದ ಚಾಕೊಲೇಟ್ ಕೇಕ್ ನಲ್ಲಿ ವಿಷಕಾರಿ ಅಂಶವಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. “ಬೇಕರಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದ್ದು, ಕೇಕ್‌ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ, ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ” ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Sun, 31 March 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್