AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟು ಹಬ್ಬದಂದು ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು; ಕುಟುಂಬಸ್ಥರು ಅಸ್ವಸ್ಥ

ಮಾರ್ಚ್ 24 ರಂದು ಕೇಕ್ ಆರ್ಡರ್ ಮಾಡಲಾಗಿದ್ದು, ರಾತ್ರಿ 7 ಗಂಟೆ ಸುಮಾರಿಗೆ ಕೇಕ್ ಕತ್ತರಿಸಲಾಗಿದೆ. ರಾತ್ರಿ 10 ಗಂಟೆಯ ವೇಳೆಗೆ ಇಡೀ ಕುಟುಂಬವು ಅಸ್ವಸ್ಥಗೊಂಡಿದೆ ಎಂದು ಮೃತ ಬಾಲಕಿಯ ಅಜ್ಜ ಹರ್ಬನ್ ಲಾಲ್ ಹೇಳಿದ್ದಾರೆ.

ಹುಟ್ಟು ಹಬ್ಬದಂದು ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು; ಕುಟುಂಬಸ್ಥರು ಅಸ್ವಸ್ಥ
ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು
ಅಕ್ಷತಾ ವರ್ಕಾಡಿ
|

Updated on:Mar 31, 2024 | 5:57 PM

Share

ಹುಟ್ಟು ಹಬ್ಬದಂದು ಆನ್‌ಲೈನ್‌ನಲ್ಲಿ ಕೇಕ್​​ ಆರ್ಡರ್ ಮಾಡಿ ಕತ್ತರಿಸಿ ಪರಸ್ಪರ ತಿನ್ನಿಸುತ್ತಾ ಸಂಭ್ರಮಿಸಿದ ಕೆಲ ಹೊತ್ತಿನಲ್ಲೇ ಆರೋಗ್ಯ ಏರುಪೇರಾಗಿದ್ದು, ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ 10 ವರ್ಷದ ಬಾಲಕಿ ಮಾನ್ವಿ ಸೇರಿದಂತೆ ಕುಟುಂಬಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಹುಟ್ಟುಹಬ್ಬದಂದೇ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಅಘಾತಕಾರಿ ಘಟನೆ ಪಂಜಾಬ್​​ನ ಪಟಿಯಾಲಾದಲ್ಲಿ ನಡೆದಿದೆ.

ಮಾರ್ಚ್ 24 ರಂದು ಪಟಿಯಾಲಾದ ಬೇಕರಿಯಿಂದ ಆನ್‌ಲೈನ್‌ನಲ್ಲಿ ಕೇಕ್ ಆರ್ಡರ್ ಮಾಡಲಾಗಿದ್ದು, ರಾತ್ರಿ 7 ಗಂಟೆ ಸುಮಾರಿಗೆ ಕೇಕ್ ಕತ್ತರಿಸಲಾಗಿದೆ, ಅದೇ ರಾತ್ರಿ 10 ಗಂಟೆಯ ವೇಳೆಗೆ ಇಡೀ ಕುಟುಂಬವು ಅಸ್ವಸ್ಥಗೊಂಡಿದೆ ಎಂದು ಮೃತ ಬಾಲಕಿಯ ಅಜ್ಜ ಹರ್ಬನ್ ಲಾಲ್ ಹೇಳಿದ್ದಾರೆ. ಮಾನ್ವಿ ಸಾವಿಗೆ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಮಾನ್ವಿಯ ತಾಯಿ ಕಾಜಲ್ ನೀಡಿದ ದೂರಿನ ಮೇರೆಗೆ ಸ್ಥಳೀಯ ಪೊಲೀಸರು ‘ಕನ್ಹಾ ಬೇಕರಿ’ ಅಂಗಡಿ ವಿರುದ್ಧ ಸೆಕ್ಷನ್ 304-ಎ (ನಿರ್ಲಕ್ಷ್ಯದಿಂದ ಸಾವು) ಮತ್ತು 273ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಪಟಿಯಾಲಾದ ‘ಕೇಕ್ ಕನ್ಹಾ’ನಿಂದ ಆರ್ಡರ್ ಮಾಡಲಾಗಿದ್ದ ಚಾಕೊಲೇಟ್ ಕೇಕ್ ನಲ್ಲಿ ವಿಷಕಾರಿ ಅಂಶವಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. “ಬೇಕರಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದ್ದು, ಕೇಕ್‌ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ, ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ” ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Sun, 31 March 24

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​