AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

27 ಸೆಕೆಂಡ್​ನಲ್ಲಿ 100 ಮೀಟರ್ ಓಟ ಪೂರ್ಣಗೊಳಿಸಿದ 102 ವರ್ಷದ ವೃದ್ಧ: ವಿಡಿಯೋ ವೈರಲ್

ಥೈಲ್ಯಾಂಡ್​ನ 102 ವರ್ಷದ ವೃದ್ಧ ಓಟಗಾರ 27 ಸೆಕೆಂಡ್​​ನಲ್ಲಿ 100 ಮೀಟರ್​ ಓಟ ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸವಾಂಗ್ ಜನಪ್ರಮ್ ಎನ್ನುವ ವೃದ್ಧ ಈ ಸಾಧನೆ  ಮಾಡಿದ್ದಾರೆ. 

27 ಸೆಕೆಂಡ್​ನಲ್ಲಿ 100 ಮೀಟರ್ ಓಟ ಪೂರ್ಣಗೊಳಿಸಿದ 102 ವರ್ಷದ ವೃದ್ಧ: ವಿಡಿಯೋ ವೈರಲ್
102 ವರ್ಷದ ವೃದ್ಧ
TV9 Web
| Edited By: |

Updated on: Mar 05, 2022 | 12:44 PM

Share

ಥೈಲ್ಯಾಂಡ್​ (Thailand) ನ 102 ವರ್ಷದ ವೃದ್ಧ ಓಟಗಾರ 27 ಸೆಕೆಂಡ್​​ನಲ್ಲಿ 100 ಮೀಟರ್​ ಓಟ ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸವಾಂಗ್ ಜನಪ್ರಮ್ (Sawang Janpram) ಎನ್ನುವ ವೃದ್ಧ ಈ ಸಾಧನೆ  ಮಾಡಿದ್ದಾರೆ.  ಇವರನ್ನು  ಆಗ್ನೇಯ ಏಷ್ಯಾದ  ಅತ್ಯಂತ ಹಳೆಯ ಓಟಗಾರ ಎಂತಲೇ ಹೇಳುತ್ತಾರೆ.  ಕಳೆದ ವಾರಾಂತ್ಯದಲ್ಲಿ ಥೈಲ್ಯಾಂಡ್‌ನ ನೈಋತ್ಯ ಸಮುತ್ ಸಾಂಗ್‌ಖ್ರಾಮ್ ಪ್ರಾಂತ್ಯದಲ್ಲಿ ನಡೆದ ಚಾಂಪಿಯನ್‌ಶಿಪ್‌ನ 26 ನೇ ಆವೃತ್ತಿಯಲ್ಲಿ ಈ ಸಾಧನೆ ಮಾಡಿದ್ದಾರೆ.  ಸವಾಂಗ್ ತಮ್ಮ 100-105 ವರ್ಷಗಳ  ಅವಧಿಯಲ್ಲಿ, ಓಟದ ಎಲ್ಲಾ ವಿಭಾಗಗಳಲ್ಲೂ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ ಎಂದು ವರದಿ ತಿಳಿಸಿದೆ.

102ನೇ ವರ್ಷದಲ್ಲಿಯೂ ಕುಗ್ಗದ ಆತ್ಮವಿಶ್ವಾಸ, ಧೈರ್ಯವನ್ನು ಕಂಡು ಜಗತ್ತಿನಾದ್ಯಂತ ನೆಟ್ಟಿಗರು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ಈ ಹಿಂದೆ ಉಸೇನ್​ ಬೋಲ್ಟ್​ 100 ಮೀ ಓಟವನ್ನು 9.58 ಸೆಕೆಂಡ್​ಗಳಲ್ಲಿ ಪೂರ್ಣಗೊಳಿಸಿ ಸಾರ್ವಕಾಲಿಕ ದಾಖಲೆ  ನಿರ್ಮಿಸಿದ್ದರು. ಅವರ ಬಳಿಕ ಈಗ 102 ನೇ ವಯಸ್ಸಿನಲ್ಲಿ ಇದೇ ಮೊದಲ ಬಾರಿಗೆ ಸವಾಂಗ್​ 27. 08 ಸೆಕೆಂಡ್​ನಲ್ಲಿ 100 ಮೀಟರ್​ ಓಟ ಪೂರ್ಣಗೊಳಿಸಿ  ದಾಖಲೆ ನಿರ್ಮಿಸಿದ್ದಾರೆ.

ಸಾವಾಂಗ್​ ಪ್ರತಿದಿನ ತಮ್ಮ 70 ವರ್ಷದ ಮಗಳೊಂದಿಗೆ ರನ್ನಿಂಗ್ ಅಭ್ಯಾಸ ಮಾಡುತ್ತಾರಂತೆ. ಇದೇ ಇವರ ಸಾಧನೆಯ ಗುಟ್ಟು ಎನ್ನುತ್ತಾರೆ ಅವರ ಮಗಳು. ಸದ್ಯ ಇವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಜಗತ್ತಿನಾದ್ಯಂತ ವೈರಲ್ ಆಗಿದೆ. ಈ ಕುರಿತು ರಾಯಿಟರ್ಸ್​ ವಿಡಿಯೋ ಹಂಚಿಕೊಂಡಿದೆ.

ಇದನ್ನೂ ಓದಿ:

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್