AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

27 ಸೆಕೆಂಡ್​ನಲ್ಲಿ 100 ಮೀಟರ್ ಓಟ ಪೂರ್ಣಗೊಳಿಸಿದ 102 ವರ್ಷದ ವೃದ್ಧ: ವಿಡಿಯೋ ವೈರಲ್

ಥೈಲ್ಯಾಂಡ್​ನ 102 ವರ್ಷದ ವೃದ್ಧ ಓಟಗಾರ 27 ಸೆಕೆಂಡ್​​ನಲ್ಲಿ 100 ಮೀಟರ್​ ಓಟ ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸವಾಂಗ್ ಜನಪ್ರಮ್ ಎನ್ನುವ ವೃದ್ಧ ಈ ಸಾಧನೆ  ಮಾಡಿದ್ದಾರೆ. 

27 ಸೆಕೆಂಡ್​ನಲ್ಲಿ 100 ಮೀಟರ್ ಓಟ ಪೂರ್ಣಗೊಳಿಸಿದ 102 ವರ್ಷದ ವೃದ್ಧ: ವಿಡಿಯೋ ವೈರಲ್
102 ವರ್ಷದ ವೃದ್ಧ
TV9 Web
| Updated By: Pavitra Bhat Jigalemane|

Updated on: Mar 05, 2022 | 12:44 PM

Share

ಥೈಲ್ಯಾಂಡ್​ (Thailand) ನ 102 ವರ್ಷದ ವೃದ್ಧ ಓಟಗಾರ 27 ಸೆಕೆಂಡ್​​ನಲ್ಲಿ 100 ಮೀಟರ್​ ಓಟ ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸವಾಂಗ್ ಜನಪ್ರಮ್ (Sawang Janpram) ಎನ್ನುವ ವೃದ್ಧ ಈ ಸಾಧನೆ  ಮಾಡಿದ್ದಾರೆ.  ಇವರನ್ನು  ಆಗ್ನೇಯ ಏಷ್ಯಾದ  ಅತ್ಯಂತ ಹಳೆಯ ಓಟಗಾರ ಎಂತಲೇ ಹೇಳುತ್ತಾರೆ.  ಕಳೆದ ವಾರಾಂತ್ಯದಲ್ಲಿ ಥೈಲ್ಯಾಂಡ್‌ನ ನೈಋತ್ಯ ಸಮುತ್ ಸಾಂಗ್‌ಖ್ರಾಮ್ ಪ್ರಾಂತ್ಯದಲ್ಲಿ ನಡೆದ ಚಾಂಪಿಯನ್‌ಶಿಪ್‌ನ 26 ನೇ ಆವೃತ್ತಿಯಲ್ಲಿ ಈ ಸಾಧನೆ ಮಾಡಿದ್ದಾರೆ.  ಸವಾಂಗ್ ತಮ್ಮ 100-105 ವರ್ಷಗಳ  ಅವಧಿಯಲ್ಲಿ, ಓಟದ ಎಲ್ಲಾ ವಿಭಾಗಗಳಲ್ಲೂ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ ಎಂದು ವರದಿ ತಿಳಿಸಿದೆ.

102ನೇ ವರ್ಷದಲ್ಲಿಯೂ ಕುಗ್ಗದ ಆತ್ಮವಿಶ್ವಾಸ, ಧೈರ್ಯವನ್ನು ಕಂಡು ಜಗತ್ತಿನಾದ್ಯಂತ ನೆಟ್ಟಿಗರು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ಈ ಹಿಂದೆ ಉಸೇನ್​ ಬೋಲ್ಟ್​ 100 ಮೀ ಓಟವನ್ನು 9.58 ಸೆಕೆಂಡ್​ಗಳಲ್ಲಿ ಪೂರ್ಣಗೊಳಿಸಿ ಸಾರ್ವಕಾಲಿಕ ದಾಖಲೆ  ನಿರ್ಮಿಸಿದ್ದರು. ಅವರ ಬಳಿಕ ಈಗ 102 ನೇ ವಯಸ್ಸಿನಲ್ಲಿ ಇದೇ ಮೊದಲ ಬಾರಿಗೆ ಸವಾಂಗ್​ 27. 08 ಸೆಕೆಂಡ್​ನಲ್ಲಿ 100 ಮೀಟರ್​ ಓಟ ಪೂರ್ಣಗೊಳಿಸಿ  ದಾಖಲೆ ನಿರ್ಮಿಸಿದ್ದಾರೆ.

ಸಾವಾಂಗ್​ ಪ್ರತಿದಿನ ತಮ್ಮ 70 ವರ್ಷದ ಮಗಳೊಂದಿಗೆ ರನ್ನಿಂಗ್ ಅಭ್ಯಾಸ ಮಾಡುತ್ತಾರಂತೆ. ಇದೇ ಇವರ ಸಾಧನೆಯ ಗುಟ್ಟು ಎನ್ನುತ್ತಾರೆ ಅವರ ಮಗಳು. ಸದ್ಯ ಇವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಜಗತ್ತಿನಾದ್ಯಂತ ವೈರಲ್ ಆಗಿದೆ. ಈ ಕುರಿತು ರಾಯಿಟರ್ಸ್​ ವಿಡಿಯೋ ಹಂಚಿಕೊಂಡಿದೆ.

ಇದನ್ನೂ ಓದಿ:

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ