Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಮಕರ ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದು, ಹಬ್ಬದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 13, 2024 | 6:27 PM

ಹೈದರಾಬಾದ್: ಪ್ರತಿವರ್ಷ ವರ್ಷದ ಆರಂಭದಲ್ಲಿ  ಆಚರಿಸುವ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ಕೂಡಾ ಒಂದು. ಎಳ್ಳು ಬೆಲ್ಲವನ್ನು ಹಂಚಿ ಜನರು ಈ ದಿನ ಸಂಭ್ರಮಿಸುತ್ತಾರೆ. ಮಕರ ಸಂಕ್ರಾಂತಿಯ ಸಂಭ್ರಮದಲ್ಲಿ ಗಾಳಿಪಟ ಹಾರಿಸುವ ಪದ್ಧತಿ ಕೂಡಾ ಬೆಸೆದುಕೊಂಡಿದೆ. ಈ ದಿನ ಎಲ್ಲರೂ ಒಟ್ಟಾಗಿ ಖುಷಿಯಿಂದ ಗಾಳಿಪಟ ಹಾರಿಸಿ ಸಂಭ್ರಮಿಸುತ್ತಾರೆ. ಆದರೆ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ. ಮನೆಗೆ ತಂದಿದ್ದ ಗಾಳಿಪಟ ಹಾರಿಸುವ ಖಷಿಯಲ್ಲಿ ಪುಟ್ಟ ಬಾಲಕ ಮನೆಯ ಟೆರೇಸ್ ಮೇಲೆ ಹೋಗಿದ್ದಾನೆ. ಆದರೆ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವುದು ಹಬ್ಬದ ಮನೆಯಲ್ಲಿ ಸೂತಕದ ವಾತಾವಾರಣಕ್ಕೆ ಕಾರಣವಾಗಿದೆ.

ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕಿನಿಗೆ ವಿದ್ಯುತ್​ ಪ್ರವಹಿಸಿದೆ. ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇಂತಹ ಘಟನೆಗಳು ಇದೇ ಮೊದಲೇನಲ್ಲಾ ಕಳೆದ ವರ್ಷವೂ ಕೂಡ ಇಂತಹದ್ದೇ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಉತ್ತರ ಬೆಂಗಳೂರಿನ ಆರ್‌ಟಿ ನಗರದ ಎಚ್‌ಎಂಟಿ ಲೇಔಟ್‌ನಲ್ಲಿ 13 ವರ್ಷದ ಬಾಲಕ ಗಾಳಿಪಟ ಹಾರಿಸುವಾಗ ಹೈಟೆನ್ಷನ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದ.

Published On - 6:26 pm, Sat, 13 January 24

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ