AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಮಕರ ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದು, ಹಬ್ಬದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
TV9 Web
| Edited By: |

Updated on:Jan 13, 2024 | 6:27 PM

Share

ಹೈದರಾಬಾದ್: ಪ್ರತಿವರ್ಷ ವರ್ಷದ ಆರಂಭದಲ್ಲಿ  ಆಚರಿಸುವ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ಕೂಡಾ ಒಂದು. ಎಳ್ಳು ಬೆಲ್ಲವನ್ನು ಹಂಚಿ ಜನರು ಈ ದಿನ ಸಂಭ್ರಮಿಸುತ್ತಾರೆ. ಮಕರ ಸಂಕ್ರಾಂತಿಯ ಸಂಭ್ರಮದಲ್ಲಿ ಗಾಳಿಪಟ ಹಾರಿಸುವ ಪದ್ಧತಿ ಕೂಡಾ ಬೆಸೆದುಕೊಂಡಿದೆ. ಈ ದಿನ ಎಲ್ಲರೂ ಒಟ್ಟಾಗಿ ಖುಷಿಯಿಂದ ಗಾಳಿಪಟ ಹಾರಿಸಿ ಸಂಭ್ರಮಿಸುತ್ತಾರೆ. ಆದರೆ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ. ಮನೆಗೆ ತಂದಿದ್ದ ಗಾಳಿಪಟ ಹಾರಿಸುವ ಖಷಿಯಲ್ಲಿ ಪುಟ್ಟ ಬಾಲಕ ಮನೆಯ ಟೆರೇಸ್ ಮೇಲೆ ಹೋಗಿದ್ದಾನೆ. ಆದರೆ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವುದು ಹಬ್ಬದ ಮನೆಯಲ್ಲಿ ಸೂತಕದ ವಾತಾವಾರಣಕ್ಕೆ ಕಾರಣವಾಗಿದೆ.

ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕಿನಿಗೆ ವಿದ್ಯುತ್​ ಪ್ರವಹಿಸಿದೆ. ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇಂತಹ ಘಟನೆಗಳು ಇದೇ ಮೊದಲೇನಲ್ಲಾ ಕಳೆದ ವರ್ಷವೂ ಕೂಡ ಇಂತಹದ್ದೇ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಉತ್ತರ ಬೆಂಗಳೂರಿನ ಆರ್‌ಟಿ ನಗರದ ಎಚ್‌ಎಂಟಿ ಲೇಔಟ್‌ನಲ್ಲಿ 13 ವರ್ಷದ ಬಾಲಕ ಗಾಳಿಪಟ ಹಾರಿಸುವಾಗ ಹೈಟೆನ್ಷನ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದ.

Published On - 6:26 pm, Sat, 13 January 24

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು