AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು 15 ವರ್ಷದ ಬಾಲಕ ಬರ್ಬರವಾಗಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿರುವುದಾಗಿ ಒಪ್ಪಿಕೊಂಡ ಬಾಲಾಪರಾಧಿಯನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Crime: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ
ತಂದೆ-ತಾಯಿ ಹಾಗೂ ಸಹೋದರನನ್ನು ಕೊಂದ 15 ರ ಬಾಲಕ
ಅಕ್ಷತಾ ವರ್ಕಾಡಿ
|

Updated on: Jul 11, 2024 | 10:55 AM

Share

ವಾರಣಾಸಿ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಜುಲೈ 7 ಮತ್ತು 8 ರ ಮಧ್ಯರಾತ್ರಿ ಘಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಆತನ ತಂದೆ ಮುನ್ಷಿ ಬಿಂದ್ (45), ತಾಯಿ ದೇವಂತಿ ಬಿಂದ್(40) ಮತ್ತು ಸಹೋದರನ ಕತ್ತು ಸೀಳಲು ಬಳಸಿದ್ದ ಹರಿತವಾದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಎಂದು ಗಾಜಿಪುರ ಎಸ್ಪಿ ಓಂವಿರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಅತ್ಯಾಚಾರ: ತಮ್ಮೊಂದಿಗೆ ಬಂದಿದ್ದ ಯುವಕರಿಂದಲೇ ಕೃತ್ಯ

ಹಲವು ದಿನಗಳ ಹಿಂದೆ ಮೂವರನ್ನು ಕೊಲ್ಲಲು ನಿರ್ಧರಿಸಿದ್ದೆ, ಆದರೆ ಸಾಧ್ಯವಾಗಲಿಲ್ಲಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಭಾನುವಾರ ರಾತ್ರಿ, ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾಗ ಮದ್ಯ ಸೇವಿಸಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಂದ ಬಾಲಕ ತಂದೆ, ತಾಯಿ ಹಾಗೂ ಸಹೋದರನ ಕತ್ತು ಸೀಳಿದ್ದಾನೆ. ಅಪರಾಧ ಮಾಡಿದ ನಂತರ, ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಚಾಕುವನ್ನು ಬಚ್ಚಿಟ್ಟು ಹತ್ತಿರದ ಆರ್ಕೆಸ್ಟ್ರಾ ಪ್ರದರ್ಶನವನ್ನು ನೋಡಲು ಹೋಗಿದ್ದಾನೆ. ಬಳಿಕ ಬೆಳಗಿನ ಜಾವ 1.45 ರ ಸುಮಾರಿಗೆ ಮನೆಗೆ ಹಿಂದಿರುಗಿದ ಬಾಲಕ ಮನೆಯವರನ್ನು ಯಾರೋ ಕೊಂದು ಹೋಗಿರುವುದಾಗಿ ಗ್ರಾಮಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಪೊಲೀಸ್​​ ವಿಚಾರಣೆ ವೇಳೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ