AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ನೋವು ತಡೆಯಲಾರದೆ ನೋವು ನಿವಾರಕ ಮಾತ್ರೆ ತೆಗೆದುಕೊಳ್ಳುತ್ತಿದ್ದ 16ರ ಹರೆಯದ ಬಾಲಕಿ ಸಾವು

ಋತುಸ್ರಾವದ ಸಮಯದಲ್ಲಿ ಹೊಟ್ಟೆಯ ನೋವು, ಸೆಳೆತವನ್ನು ತಡೆಯಲಾರದೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದೆಯಾ? ಈ ನೋವು ನಿವಾರಕಗಳು ತಕ್ಷಣಕ್ಕೆ ನೋವಿನಿಂದ ಮುಕ್ತಿ ನೀಡಿದರೂ ಸಹ ಕಾಲ ಕ್ರಮೇಣ ನಿಮ್ಮ ಪ್ರಾಣಕ್ಕೆ ಕಂಟಕವಾಗಬಹುದು. ಅಂತದ್ದೇ ಘಟನೆಯೊಂದು ಇದೀಗಾ ಭಾರೀ ಸುದ್ದಿಯಲ್ಲಿದೆ.

ಮುಟ್ಟಿನ ನೋವು ತಡೆಯಲಾರದೆ ನೋವು ನಿವಾರಕ ಮಾತ್ರೆ ತೆಗೆದುಕೊಳ್ಳುತ್ತಿದ್ದ 16ರ ಹರೆಯದ ಬಾಲಕಿ ಸಾವು
Layla
ಅಕ್ಷತಾ ವರ್ಕಾಡಿ
|

Updated on: Dec 20, 2023 | 11:32 AM

Share

ವಿಪರೀತ ಮುಟ್ಟಿನ ನೋವಿನಿಂದ ಬಳಲುತ್ತಿದ್ದ ಲೈಲಾ(16) ತನ್ನ ಸ್ನೇಹಿತರ ಸಲಹೆಯ ಮೇರೆಗೆ ಪ್ರತೀ ತಿಂಗಳು ನೋವು ನಿವಾರಕ ಮಾತ್ರೆ ಸೇವಿಸುತ್ತಿದ್ದ ಪರಿಣಾಮ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ದಾರುಣ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ. ಸ್ನೇಹಿತರ ಸಲಹೆಯಂತೆ ನವೆಂಬರ್ 25ರಂದು ಋತು ಸ್ರಾವದ ಮೊದಲ ದಿನದಿಂದ ಲೈಲಾ ಮಾತ್ರೆ ಸೇವಿಸಲು ಪ್ರಾರಂಭಿಸಿದ್ದಾಳೆ. ಆದರೆ ಸಾಮಾನ್ಯವಾಗಿ ಮೂರರಿಂದ ನಾಲ್ಕು ದಿನಗಳಲ್ಲಿ ಮಹಿಳೆಯರಲ್ಲಿ ನೋವು ಕಡಿಮೆಯಾಗುತ್ತದೆ. ಆದರೆ ಈಕೆಯ ಮುಟ್ಟಿನ ನೋವು ಉಲ್ಬಣಗೊಂಡಿದೆ. ಪರಿಣಾಮ ಡಿಸೆಂಬರ್​​​ 05ರ ವೇಳೆಗೆ ಲೈಲಾ ವಿಪರೀತ ವಾಂತಿ ಭೇದಿ ಹಾಗೂ ತಲೆನೋವಿನಿಂದ ಬಳಲುತ್ತಿರುವುದನ್ನು ಕಂಡು ಪೋಷಕರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಲಕಿಯ ತೀವ್ರ ಒದ್ದಾಟವನ್ನು ಕಂಡು ಸಿಟಿ ಸ್ಕ್ಯಾನ್ ಮಾಡಿಸಿದಾಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ತಿಳಿದುಬಂದಿದೆ. ತಕ್ಷಣ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ, ಮೆದುಳು ನಿಷ್ಕ್ರಿಯಗೊಂಡು  ಡಿಸೆಂಬರ್ 13 ರಂದು ಲೈಲಾ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು.

ಇದನ್ನೂ ಓದಿ: ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ಬಾಲಕಿಯ ಸಾವಿನ ಸುದ್ದಿ ಕುಟುಂಬಕ್ಕೆ ಅಘಾತ ಉಂಟುಮಾಡಿದೆ. ಕುಟುಂಬ ಸಾವಿನ ದುಃಖದ ನುಡುವೆಯೂ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮರೆದಿದೆ.  ಕ್ರಿಸ್‌ಮಸ್‌ಗೂ ಮುನ್ನ ಇನ್ನೂ ಐವರ ಜೀವ ಉಳಿಸಲು ನಿಸ್ವಾರ್ಥವಾಗಿ ಲೈಲಾ ಕುಟುಂಬ ಮುಂದಾಗಿರುವುದು ‘ದಿ ಟೆಲಿಗ್ರಾಫ್‌’ನಲ್ಲಿ ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ