ಮುಟ್ಟಿನ ನೋವು ತಡೆಯಲಾರದೆ ನೋವು ನಿವಾರಕ ಮಾತ್ರೆ ತೆಗೆದುಕೊಳ್ಳುತ್ತಿದ್ದ 16ರ ಹರೆಯದ ಬಾಲಕಿ ಸಾವು

ಋತುಸ್ರಾವದ ಸಮಯದಲ್ಲಿ ಹೊಟ್ಟೆಯ ನೋವು, ಸೆಳೆತವನ್ನು ತಡೆಯಲಾರದೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದೆಯಾ? ಈ ನೋವು ನಿವಾರಕಗಳು ತಕ್ಷಣಕ್ಕೆ ನೋವಿನಿಂದ ಮುಕ್ತಿ ನೀಡಿದರೂ ಸಹ ಕಾಲ ಕ್ರಮೇಣ ನಿಮ್ಮ ಪ್ರಾಣಕ್ಕೆ ಕಂಟಕವಾಗಬಹುದು. ಅಂತದ್ದೇ ಘಟನೆಯೊಂದು ಇದೀಗಾ ಭಾರೀ ಸುದ್ದಿಯಲ್ಲಿದೆ.

ಮುಟ್ಟಿನ ನೋವು ತಡೆಯಲಾರದೆ ನೋವು ನಿವಾರಕ ಮಾತ್ರೆ ತೆಗೆದುಕೊಳ್ಳುತ್ತಿದ್ದ 16ರ ಹರೆಯದ ಬಾಲಕಿ ಸಾವು
Layla
Follow us
|

Updated on: Dec 20, 2023 | 11:32 AM

ವಿಪರೀತ ಮುಟ್ಟಿನ ನೋವಿನಿಂದ ಬಳಲುತ್ತಿದ್ದ ಲೈಲಾ(16) ತನ್ನ ಸ್ನೇಹಿತರ ಸಲಹೆಯ ಮೇರೆಗೆ ಪ್ರತೀ ತಿಂಗಳು ನೋವು ನಿವಾರಕ ಮಾತ್ರೆ ಸೇವಿಸುತ್ತಿದ್ದ ಪರಿಣಾಮ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ದಾರುಣ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ. ಸ್ನೇಹಿತರ ಸಲಹೆಯಂತೆ ನವೆಂಬರ್ 25ರಂದು ಋತು ಸ್ರಾವದ ಮೊದಲ ದಿನದಿಂದ ಲೈಲಾ ಮಾತ್ರೆ ಸೇವಿಸಲು ಪ್ರಾರಂಭಿಸಿದ್ದಾಳೆ. ಆದರೆ ಸಾಮಾನ್ಯವಾಗಿ ಮೂರರಿಂದ ನಾಲ್ಕು ದಿನಗಳಲ್ಲಿ ಮಹಿಳೆಯರಲ್ಲಿ ನೋವು ಕಡಿಮೆಯಾಗುತ್ತದೆ. ಆದರೆ ಈಕೆಯ ಮುಟ್ಟಿನ ನೋವು ಉಲ್ಬಣಗೊಂಡಿದೆ. ಪರಿಣಾಮ ಡಿಸೆಂಬರ್​​​ 05ರ ವೇಳೆಗೆ ಲೈಲಾ ವಿಪರೀತ ವಾಂತಿ ಭೇದಿ ಹಾಗೂ ತಲೆನೋವಿನಿಂದ ಬಳಲುತ್ತಿರುವುದನ್ನು ಕಂಡು ಪೋಷಕರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಲಕಿಯ ತೀವ್ರ ಒದ್ದಾಟವನ್ನು ಕಂಡು ಸಿಟಿ ಸ್ಕ್ಯಾನ್ ಮಾಡಿಸಿದಾಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ತಿಳಿದುಬಂದಿದೆ. ತಕ್ಷಣ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ, ಮೆದುಳು ನಿಷ್ಕ್ರಿಯಗೊಂಡು  ಡಿಸೆಂಬರ್ 13 ರಂದು ಲೈಲಾ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು.

ಇದನ್ನೂ ಓದಿ: ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ಬಾಲಕಿಯ ಸಾವಿನ ಸುದ್ದಿ ಕುಟುಂಬಕ್ಕೆ ಅಘಾತ ಉಂಟುಮಾಡಿದೆ. ಕುಟುಂಬ ಸಾವಿನ ದುಃಖದ ನುಡುವೆಯೂ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮರೆದಿದೆ.  ಕ್ರಿಸ್‌ಮಸ್‌ಗೂ ಮುನ್ನ ಇನ್ನೂ ಐವರ ಜೀವ ಉಳಿಸಲು ನಿಸ್ವಾರ್ಥವಾಗಿ ಲೈಲಾ ಕುಟುಂಬ ಮುಂದಾಗಿರುವುದು ‘ದಿ ಟೆಲಿಗ್ರಾಫ್‌’ನಲ್ಲಿ ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ