AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1947 Calendar Viral: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ; 1947 ರ ಕ್ಯಾಲೆಂಡರ್ ವೈರಲ್​​​

ಭಾರತದ 78ನೇ ಸ್ವಾತಂತ್ರ್ಯೋತ್ಸವದಂದು, 1947 ಮತ್ತು 2025ರ ಕ್ಯಾಲೆಂಡರ್​​​​ ಹೋಲಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಗಸ್ಟ್ 15, 1947 ಮತ್ತು ಆಗಸ್ಟ್ 15, 2025 ಎರಡೂ ಶುಕ್ರವಾರದಂದು ಬಂದಿರುವುದನ್ನು ಕಾಣಬಹುದು. ಈ ಅಪರೂಪದ ಘಟನೆ 78 ವರ್ಷಗಳ ನಂತರ ಸಂಭವಿಸಿದೆ. ಈ ಈ ಹಳೆಯ ಕ್ಯಾಲೆಂಡರ್​​ನ ಫೋಟೋವನ್ನು ಸೋಶಿಯಲ್​​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ.

1947 Calendar Viral: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ;  1947 ರ ಕ್ಯಾಲೆಂಡರ್ ವೈರಲ್​​​
1947 And 2025 Calendars
ಅಕ್ಷತಾ ವರ್ಕಾಡಿ
|

Updated on:Aug 15, 2025 | 10:35 AM

Share

1947 ಆಗಸ್ಟ್‌ 15 ರಂದು ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ ಸ್ವಾತಂತ್ರ್ಯ ಪಡೆದ ದಿನ. ಈ ದಿನವು ನಮ್ಮ ದೇಶದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಪ್ರತೀ ವರ್ಷ ಆಚರಿಸಲಾಗುತ್ತಿದೆಯಾದರೂ ಈ ವರ್ಷ ಬಹಳ ವಿಶೇಷವಾಗಿದೆ. 78 ವರ್ಷಗಳ ಬಳಿಕ ಸ್ವಾತಂತ್ರ್ಯೋತ್ಸವ ಶುಕ್ರವಾರದಂದು ಬಂದಿದೆ. ಅಂದರೆ 1947 ರ ಕ್ಯಾಲೆಂಡರ್​ ಮತ್ತು 2025ರ ಕ್ಯಾಲೆಂಡರ್​​ನಲ್ಲಿ ಬಹಳಷ್ಟು ಹೋಲಿಕೆಯಿರುವುದನ್ನು ಕಾಣಬಹುದು. ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

@anasuya.shastri.96 ಎಂಬ ಫೇಸ್​​ ಬುಕ್​​ ಖಾತೆಯಲ್ಲಿ 1947 ರ ಕ್ಯಾಲೆಂಡರ್​ನ ಫೋಟೋ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ಕ್ಯಾಲೆಂಡರ್​​ನಲ್ಲಿ ಆಗಸ್ಟ್‌ 15 ಶುಕ್ರವಾರ ಬಂದಿರುವುದನ್ನು ಕಾಣಬಹುದು. ಅದಲ್ಲದೇ 2025ರ ಕ್ಯಾಲೆಂಡರ್​​​ಗೂ ಈ ಕ್ಯಾಲೆಂಡರ್​​ಗೂ ಸಾಕಷ್ಟ ಹೋಲಿಕೆ ಇರುವುದು ಇದರ ವಿಶೇಷತೆ. ಈ ಕಾಕತಾಳೀಯ ಸಂಭವಿಸಲು ಸುಮಾರು 78 ವರ್ಷಗಳು ಬೇಕಾಯಿತು.

ಇದನ್ನೂ ಓದಿ: ಸ್ಯಾಲರಿ ಕ್ರೆಡಿಟ್ ಆದ ಕೆಲವೇ ನಿಮಿಷಕ್ಕೆ ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಈ ಕ್ಯಾಲೆಂಡರ್​​​ ಮತ್ತೊಂದು ವಿಶೇಷತೆ ಏನೆಂದರೆ ಆಗಸ್ಟ್ 15 ರ ರಜೆ ಇರದ ಕೊನೆ ಯ ಕ್ಯಾಲೆಂಡರ್ ಕೂಡ ಇದು ಹೌದು. ಬೆಲ್ಲದ ಕಂಪೆನಿಯೊಂದರ ಕ್ಯಾಲೆಂಡರ್​​ ಎಂಬುದನ್ನು ಇಲ್ಲಿ ಕಾಣಬಹುದು. ಸದ್ಯ ಫೋಟೋ ಸೋಶಿಯಲ್​​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರೊದಾಡಿತ್ತಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Fri, 15 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ