AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1947 Calendar Viral: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ; 1947 ರ ಕ್ಯಾಲೆಂಡರ್ ವೈರಲ್​​​

ಭಾರತದ 78ನೇ ಸ್ವಾತಂತ್ರ್ಯೋತ್ಸವದಂದು, 1947 ಮತ್ತು 2025ರ ಕ್ಯಾಲೆಂಡರ್​​​​ ಹೋಲಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಗಸ್ಟ್ 15, 1947 ಮತ್ತು ಆಗಸ್ಟ್ 15, 2025 ಎರಡೂ ಶುಕ್ರವಾರದಂದು ಬಂದಿರುವುದನ್ನು ಕಾಣಬಹುದು. ಈ ಅಪರೂಪದ ಘಟನೆ 78 ವರ್ಷಗಳ ನಂತರ ಸಂಭವಿಸಿದೆ. ಈ ಈ ಹಳೆಯ ಕ್ಯಾಲೆಂಡರ್​​ನ ಫೋಟೋವನ್ನು ಸೋಶಿಯಲ್​​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ.

1947 Calendar Viral: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ;  1947 ರ ಕ್ಯಾಲೆಂಡರ್ ವೈರಲ್​​​
1947 And 2025 Calendars
ಅಕ್ಷತಾ ವರ್ಕಾಡಿ
|

Updated on:Aug 15, 2025 | 10:35 AM

Share

1947 ಆಗಸ್ಟ್‌ 15 ರಂದು ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ ಸ್ವಾತಂತ್ರ್ಯ ಪಡೆದ ದಿನ. ಈ ದಿನವು ನಮ್ಮ ದೇಶದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಪ್ರತೀ ವರ್ಷ ಆಚರಿಸಲಾಗುತ್ತಿದೆಯಾದರೂ ಈ ವರ್ಷ ಬಹಳ ವಿಶೇಷವಾಗಿದೆ. 78 ವರ್ಷಗಳ ಬಳಿಕ ಸ್ವಾತಂತ್ರ್ಯೋತ್ಸವ ಶುಕ್ರವಾರದಂದು ಬಂದಿದೆ. ಅಂದರೆ 1947 ರ ಕ್ಯಾಲೆಂಡರ್​ ಮತ್ತು 2025ರ ಕ್ಯಾಲೆಂಡರ್​​ನಲ್ಲಿ ಬಹಳಷ್ಟು ಹೋಲಿಕೆಯಿರುವುದನ್ನು ಕಾಣಬಹುದು. ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

@anasuya.shastri.96 ಎಂಬ ಫೇಸ್​​ ಬುಕ್​​ ಖಾತೆಯಲ್ಲಿ 1947 ರ ಕ್ಯಾಲೆಂಡರ್​ನ ಫೋಟೋ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಈ ಕ್ಯಾಲೆಂಡರ್​​ನಲ್ಲಿ ಆಗಸ್ಟ್‌ 15 ಶುಕ್ರವಾರ ಬಂದಿರುವುದನ್ನು ಕಾಣಬಹುದು. ಅದಲ್ಲದೇ 2025ರ ಕ್ಯಾಲೆಂಡರ್​​​ಗೂ ಈ ಕ್ಯಾಲೆಂಡರ್​​ಗೂ ಸಾಕಷ್ಟ ಹೋಲಿಕೆ ಇರುವುದು ಇದರ ವಿಶೇಷತೆ. ಈ ಕಾಕತಾಳೀಯ ಸಂಭವಿಸಲು ಸುಮಾರು 78 ವರ್ಷಗಳು ಬೇಕಾಯಿತು.

ಇದನ್ನೂ ಓದಿ: ಸ್ಯಾಲರಿ ಕ್ರೆಡಿಟ್ ಆದ ಕೆಲವೇ ನಿಮಿಷಕ್ಕೆ ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಈ ಕ್ಯಾಲೆಂಡರ್​​​ ಮತ್ತೊಂದು ವಿಶೇಷತೆ ಏನೆಂದರೆ ಆಗಸ್ಟ್ 15 ರ ರಜೆ ಇರದ ಕೊನೆ ಯ ಕ್ಯಾಲೆಂಡರ್ ಕೂಡ ಇದು ಹೌದು. ಬೆಲ್ಲದ ಕಂಪೆನಿಯೊಂದರ ಕ್ಯಾಲೆಂಡರ್​​ ಎಂಬುದನ್ನು ಇಲ್ಲಿ ಕಾಣಬಹುದು. ಸದ್ಯ ಫೋಟೋ ಸೋಶಿಯಲ್​​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರೊದಾಡಿತ್ತಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Fri, 15 August 25

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್