AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೋಳಿ ಹೆಸರಲ್ಲಿ ರಸ್ತೆಯಲ್ಲಿ ಯುವತಿಯರಿಬ್ಬರ ಅಸಭ್ಯ ವರ್ತನೆ; 33,000 ರೂ ದಂಡ​​

ಪವಿತ್ರ ಸಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಹೋಲಿ ಹಬ್ಬವನ್ನು ಯುವತಿಯರಿಬ್ಬರು ಅಸಭ್ಯವಾಗಿ ವರ್ತಿಸುವ ಮೂಲಕ ಆಚರಿಸಿರುವುದನ್ನು ಕಂಡು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಇದಲ್ಲದೇ ಸ್ಕೂಟರ್​ ಓಡಿಸಿದ ಯುವಕ ಹಾಗೂ ಹಿಂಬದಿಯಲ್ಲಿ ಕುಳಿತು ರೀಲ್ಸ್​​ ಮಾಡುತ್ತಿದ್ದ ಯುವತಿಯರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

Viral Video: ಹೋಳಿ ಹೆಸರಲ್ಲಿ ರಸ್ತೆಯಲ್ಲಿ ಯುವತಿಯರಿಬ್ಬರ ಅಸಭ್ಯ ವರ್ತನೆ; 33,000 ರೂ ದಂಡ​​
ಅಕ್ಷತಾ ವರ್ಕಾಡಿ
|

Updated on: Mar 26, 2024 | 12:11 PM

Share

ಯುವತಿಯರಿಬ್ಬರ ಹೋಳಿ ಆಚರಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಯುವತಿಯರಿಬ್ಬರ ಅಸಭ್ಯ ವರ್ತನೆಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್​​ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿ, ಇಬ್ಬರು ಯುವತಿಯರು ಮೋಹೆ ರಂಗ್ ಲಗಾ ದೇ ಹಾಡಿಗೆ ಸ್ಕೂಟರ್‌ನ ಹಿಂಭಾಗದಲ್ಲಿ ಕುಳಿತು ಪರಸ್ಪರ ಬಣ್ಣ ಹಚ್ಚುತ್ತಾ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ನೋಯ್ಡಾ ಪೊಲೀಸರು ಮೂವರ ವಿರುದ್ದ 33,000 ರೂ ದಂಡ​​ ವಿಧಿಸಿದ್ದಾರೆ.

ಪವಿತ್ರ ಸಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಹೋಲಿ ಹಬ್ಬವನ್ನು ಯುವತಿಯರಿಬ್ಬರು ಅಸಭ್ಯವಾಗಿ ವರ್ತಿಸುವ ಮೂಲಕ ಆಚರಿಸಿರುವುದನ್ನು ಕಂಡು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಇದಲ್ಲದೇ ಸ್ಕೂಟರ್​ ಓಡಿಸಿದ ಯುವಕ ಹಾಗೂ ಹಿಂಬದಿಯಲ್ಲಿ ಕುಳಿತು ರೀಲ್ಸ್​​ ಮಾಡುತ್ತಿದ್ದ ಯುವತಿಯರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹಾಳಾದ ಹಾಲಿನ ಹಣ ವಾಪಸ್ ಪಡೆಯಲು ಹೋಗಿ 77 ಸಾವಿರ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ 

ಮಾರ್ಚ್​​​ 25ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು “ಈ ಇಬ್ಬರು ಹುಡುಗಿಯರು ಇಂತಹ ಅಸಭ್ಯ ಕೆಲಸಗಳನ್ನು ಮಾಡಿ ಸಮಾಜಕ್ಕೆ ಏನು ಸಂದೇಶ ನೀಡುತ್ತಾರೆ ಎಂದು ಕಾಮೆಂಟ್​​ನಲ್ಲಿ ಬರೆದಿದ್ದಾರೆ. ಈ ವೀಡಿಯೋದಿಂದ ಮಕ್ಕಳಿಗೂ ತೊಂದರೆಯಾಗುವ ಅಪಾಯವಿದೆ ಎಂದು ಮತ್ತೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ನೋಯ್ಡಾ ಪೊಲೀಸರು ಮೂವರ ವಿರುದ್ದ 33,000 ರೂ ದಂಡ​​ ವಿಧಿಸಿದ್ದಾರೆ. “ಮೇಲಿನ ದೂರಿನ ಆಧಾರದ ಮೇಲೆ,ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಸಂಬಂಧಪಟ್ಟ ವಾಹನದ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ” ಎಂದು ನೋಯ್ಡಾ ಪೊಲೀಸರು ಈ ಹಿಂದೆ ತಿಳಿದಿರುವ ಎಕ್ಸ್‌ನಲ್ಲಿ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ