AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜೆಸಿಬಿ ಟೈಯರ್​ಗೆ ಗಾಳಿ ತುಂಬಿಸುತ್ತಿದ್ದಾಗ ಸ್ಫೋಟ; ಇಬ್ಬರು ಕಾರ್ಮಿಕರ ದುರ್ಮರಣ, ಗಾಳಿಯಲ್ಲಿ ಹಾರಿಬಿದ್ದ ಮೃತದೇಹ

ರಾಯ್ಪುರದ ಸಿಲ್ಟಾರಾ ಕೈಗಾರಿಕಾ ಪ್ರದೇಶದಲ್ಲಿ ಎರಡು ದಿನಗಳ ಹಿಂದೆಯೇ ಘಟನೆ ನಡೆದಿದ್ದು ಈಗ ವಿಡಿಯೋ ವೈರಲ್ ಆಗಿದ್ದಾಗಿ ವರದಿಯಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಸಿಕ್ಕಾಪಟೆ ಹರಿದಾಡುತ್ತಿದೆ. 

Video: ಜೆಸಿಬಿ ಟೈಯರ್​ಗೆ ಗಾಳಿ ತುಂಬಿಸುತ್ತಿದ್ದಾಗ ಸ್ಫೋಟ; ಇಬ್ಬರು ಕಾರ್ಮಿಕರ ದುರ್ಮರಣ, ಗಾಳಿಯಲ್ಲಿ ಹಾರಿಬಿದ್ದ ಮೃತದೇಹ
ಟೈಯರ್​ ಸ್ಫೋಟದ ಚಿತ್ರ
TV9 Web
| Edited By: |

Updated on:May 05, 2022 | 5:23 PM

Share

ಜೆಸಿಬಿ ಬುಲ್ಡೋಜರ್​ನ ಟೈಯರ್​ ಸ್ಫೋಟವಾಗಿ ಇಬ್ಬರು ಕೆಲಸಗಾರರು ಮೃತಪಟ್ಟ ದುರ್ಘಟನೆ ಛತ್ತೀಸ್​ಗಢ್​​ನ ರಾಯ್ಪುರದಲ್ಲಿ ನಡೆದಿದೆ. ಟೈಯರ್​ಗೆ ಗಾಳಿ ತುಂಬಿಸುತ್ತಿದ್ದಾಗ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ಭಯಾನಕ ದೃಶ್ಯ ವೈರಲ್ ಆಗಿದೆ.  ಈ ಇಬ್ಬರು ಕಾರ್ಮಿಕರು ಜೆಸಿಬಿಯಿಂದ  ಟೈಯರ್​​ ತೆಗೆದು, ಅದಕ್ಕೆ ಗಾಳಿ ತುಂಬುವ ಜತೆ ಅದನ್ನು ಒತ್ತಿ ಚೆಕ್​ ಮಾಡುತ್ತಿದ್ದರು. ಆಗ ಟೈಯರ್ ಸ್ಫೋಟಗೊಂಡು ಇವರಿಬ್ಬರೂ ಗಾಳಿಯಲ್ಲಿ ಹಾರಿ ಬಿದ್ದು ಮೃತಪಟ್ಟಿದ್ದಾರೆ. 

ರಾಯ್ಪುರದ ಸಿಲ್ಟಾರಾ ಕೈಗಾರಿಕಾ ಪ್ರದೇಶದಲ್ಲಿ ಎರಡು ದಿನಗಳ ಹಿಂದೆಯೇ ಘಟನೆ ನಡೆದಿದ್ದು ಈಗ ವಿಡಿಯೋ ವೈರಲ್ ಆಗಿದ್ದಾಗಿ ವರದಿಯಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಸಿಕ್ಕಾಪಟೆ ಹರಿದಾಡುತ್ತಿದೆ.  ಜೆಸಿಬಿ ಟೈಯರ್​​ಗಳು ಸಹಜವಾಗಿಯೇ ದೊಡ್ಡದಾಗಿರುತ್ತವೆ.  ಅದಕ್ಕೆ ಇವರಿಬ್ಬರೂ ಸೇರಿ ಗಾಳಿ ತುಂಬುತ್ತಿದ್ದರು. ಗಾಳಿ ತುಂಬಿದ್ದು ಸಾಕೋ, ಇನ್ನಷ್ಟು ತುಂಬಬೇಕೋ ಎಂದು ನೋಡಲು ಶಕ್ತಿ ಹಾಕಿ ಒತ್ತುತ್ತಿದ್ದರು. ದುರದೃಷ್ಟಕ್ಕೆ ಅದು ಸ್ಫೋಟಗೊಂಡಿದೆ. ಈ ಟೈಯರ್​​ಗೆ ಅಗತ್ಯಕ್ಕಿಂತ ಹೆಚ್ಚು ಗಾಳಿ ತುಂಬಿದ್ದರಿಂದ ಹೀಗಾಯಿತೋ ಅಥವಾ ಟೈಯರ್​​ ಹಾನಿಯಾಗಿತ್ತಾ ಎಂಬುದು ಗೊತ್ತಾಗಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: BMTC Protest: ಮುಷ್ಕರದಲ್ಲಿ ಭಾಗಿಯಾಗಿದ್ದಕ್ಕೆ ಕೆಲಸದಿಂದ ವಜಾಗೊಂಡಿದ್ದ ಬಿಎಂಟಿಸಿ ಚಾಲಕ ಬೇಸತ್ತು ಆತ್ಮಹತ್ಯೆ

Published On - 5:22 pm, Thu, 5 May 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು