AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 2 ವರ್ಷದ ಮಗುವಿನ ಮೇಲೆ ಹರಿದ ಕಸದ ಟ್ರಕ್‌; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಎಲಿನಾ ಎಂದು ಗುರುತಿಸಲಾಗಿರುವ ಎರಡು ವರ್ಷದ ಮಗು ತನ್ನ ಸಹೋದರಿಯೊಂದಿಗೆ ಮನೆಯ ಹೊರಗೆ ರಸ್ತೆ ನಿಂತಿದ್ದಾಗ ಕಸದ ಟ್ರಕ್ ಆಕೆಯ ಮೇಲೆ ಹರಿದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಆರೋಪಿಯು ಟ್ರಕ್ ಅನ್ನು ರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

Video Viral: 2 ವರ್ಷದ ಮಗುವಿನ ಮೇಲೆ ಹರಿದ ಕಸದ ಟ್ರಕ್‌; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Follow us
ಅಕ್ಷತಾ ವರ್ಕಾಡಿ
|

Updated on: Sep 01, 2024 | 5:34 PM

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭಾನುವಾರ ಟ್ರಕ್ ಚಾಲಕನೊಬ್ಬ ಎರಡು ವರ್ಷದ ಮಗುವಿನ ಮೇಲೆ ಟ್ರಕ್ ಹರಿಸಿರುವ ಭೀಕರ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಆಘಾತಕಾರಿ ಘಟನೆ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಗರ ನಿಗಮ ಗಾಜಿಯಾಬಾದ್ (ಜಿಎನ್‌ಎನ್) ಎಂದೂ ಕರೆಯಲ್ಪಡುವ ಗಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಕಸದ ಟ್ರಕ್‌ ಡ್ರೈವರ್​​​ ಪುಟ್ಟ ಬಾಲಕಿಯ ನಿಂತಿರುವುದನ್ನು ನೋಡಿಯೂ ಆಕೆಯ ಮೇಲೆ ಟ್ರಕ್ ಹರಿಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಇಂದು(ಸೆ.01) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೈಲಾ ಭಟ್ಟ ವಾರ್ಡ್ ಸಂಖ್ಯೆ 93 ರ ಇಸ್ಲಾಂ ನಗರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಲಿನಾ ಎಂದು ಗುರುತಿಸಲಾಗಿರುವ ಬಾಲಕಿ ತನ್ನ ಸಹೋದರಿಯೊಂದಿಗೆ ಲೇನ್‌ನಲ್ಲಿ ನಿಂತಿದ್ದಾಗ ಕಸದ ಟ್ರಕ್ ಆಕೆಯ ಮೇಲೆ ಹರಿದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಬಾಲಕಿಯನ್ನು ಸಂತೋಷ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಟ್ರಕ್ ಚಾಲಕ ಆಕೆಗೆ ಡಿಕ್ಕಿ ಹೊಡೆದಿದ್ದು, ಕಸದ ಲಾರಿಯ ಮುಂಭಾಗದ ಟೈರ್ 2 ವರ್ಷದ ಬಾಲಕಿಯ ಮೇಲೆ ಹರಿದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ಟ್ರಕ್‌ನತ್ತ ಧಾವಿಸಿ ಬಾಲಕಿಯನ್ನು ಟ್ರಕ್‌ನ ಕೆಳಗೆಯಿಂದ ಎಳೆದಿದ್ದಾನೆ.

ಇದನ್ನೂ ಓದಿ: ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ಗೂಬೆಗಳೆರಡು ಚುಂಬಿಸುತ್ತಿರುವ ಅಪರೂಪದ ದೃಶ್ಯ

ಟ್ರಕ್ ಚಾಲಕ ವಾಹನದಿಂದ ಇಳಿದು ಸಹಾಯ ಮಾಡುವ ಬದಲು ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತ ಸಂಭವಿಸಿದ ನಂತರ ಆರೋಪಿಯು ಟ್ರಕ್ ಅನ್ನು ಲೇನ್ ಮಧ್ಯದಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗುತ್ತಿರುವಾಗ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ವರದಿಗಳಿಲ್ಲ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ