Viral Video: ಯಮನಂತೆ ಹಾರಿ ಬಂದು ಯುವಕನ ಪ್ರಾಣ ತೆಗೆದ ನೀಲಗಾಯ್

ಅಯೋಧ್ಯೆ ನಗರದ 28 ವರ್ಷದ ಯುವಕನೊಬ್ಬ ಹೆದ್ದಾರಿಯಲ್ಲಿ ಬೈಕ್ ಅಲ್ಲಿ ಹೋಗುತ್ತಿದ್ದ ವೇಳೆ ನೀಲಗಾಯ್ ಎಂಬ ಅಪರೂಪದ ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  

Viral Video: ಯಮನಂತೆ ಹಾರಿ ಬಂದು ಯುವಕನ ಪ್ರಾಣ ತೆಗೆದ ನೀಲಗಾಯ್
ವೈರಲ್ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 19, 2024 | 12:51 PM

ಹುಟ್ಟು ಸಾವು ಪ್ರಕೃತಿಯ ನಿಯಮ. ಮನುಷ್ಯ ಯಾವಾಗ ಹುಟ್ಟಬಹುದು ಎಂಬುದನ್ನು ಹೇಳಬಹುದು, ಆದರೆ ಮನುಷ್ಯ ಯಾವಾಗ ಸಾಯುತ್ತಾನೆ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ಹೌದು ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಯಾರು ಊಹಿಸಲು ಸಾಧ್ಯವಿಲ್ಲ. ಸಣ್ಣ ಸಣ್ಣ ಕಾರಣಗಳಿಂದಲೂ ಸಾವು ಸಂಭವಿಸಿದ ಉದಾಹರಣೆಗಳಿವೆ. ಅದೇ ರೀತಿ ಇಲ್ಲೊಬ್ಬ ಯುವಕ ರಸ್ತೆಯಲ್ಲಿ ಬೈಕ್ ಅಲ್ಲಿ ಹೋಗುತ್ತಿದ್ದ ವೇಳೆ ನೀಲಗಾಯ್ ಎಂಬ ಅಪರೂಪದ ಪ್ರಾಣಿಯೊಂದು ಡಿಕ್ಕಿಯೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೀಲಗಾಯ್ ಎಂಬ ಪ್ರಾಣಿ ಉತ್ತರ ಭಾರತದಲ್ಲಿ ಅತ್ಯಂತ ಹೆಚ್ಚಾಗಿ ಕಾಣಸಿಗುವ ಪ್ರಾಣಿಯಾಗಿದೆ. ಇದೀಗ ಈ ನೀಲಗಾಯ್ ಪ್ರಾಣಿ ಅವಸರದಲ್ಲಿ ರಸ್ತೆದಾಟುವಾಗ ಬೈಕ್ ಸವಾರರೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ನೀಲಗಾಯ್ ಕೊಂಬು ಆತನ ಎದೆಗೆ ಚುಚ್ಚಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಗೂ ಈ ಪ್ರಾಣಿಗೂ ಸಣ್ಣಪುಟ್ಟ ಗಾಯಗಳಾಗಿದ್ದು,   ಈ ದೃಶ್ಯ ಹೆದ್ದಾರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಮೃತಪಟ್ಟ ಯುವಕನನ್ನು ಮುಕೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಮುಕೇಶ್ ಇನಾಯತ್ ನಗರ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಕುರಿತ ವಿಡಿಯೋವನ್ನು ಆನಂದ್ ಶಂಕರ್ (@kalapian_) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಯೋಧ್ಯೆಯಲ್ಲಿ ಬೈಕ್ ಸವಾರನೊಬ್ಬ ನೀಲಗಾಯ್ ಪ್ರಾಣಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಆಘಾತಕಾರಿ ವಿಡಿಯೋ. ಬೈಕ್ ಸವಾರನ ಎದೆಗೆ ಈ ಪ್ರಾಣಿಯ ಕೊಂಬು ಚುಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

6 ಸೆಕೆಂಡುಗಳ ವೈರಲ್ ವಿಡಿಯೋದಲ್ಲಿ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ಹೋಗುತ್ತಿರುವ ವೇಳೆ, ವೇಗವಾಗಿ ರಸ್ತೆ ದಾಟುತ್ತಿದ್ದ ನೀಲಗಾಯ್ ಆತನ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆತ ಬೈಕಿನಿಂದ ಕೆಳಗೆ ಉರುಳಿ ಬೀಳುವ ದೃಶ್ಯವನ್ನು ಕಾಣಬಹುದು. ಈ ಭೀಕರ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು