AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಮನಂತೆ ಹಾರಿ ಬಂದು ಯುವಕನ ಪ್ರಾಣ ತೆಗೆದ ನೀಲಗಾಯ್

ಅಯೋಧ್ಯೆ ನಗರದ 28 ವರ್ಷದ ಯುವಕನೊಬ್ಬ ಹೆದ್ದಾರಿಯಲ್ಲಿ ಬೈಕ್ ಅಲ್ಲಿ ಹೋಗುತ್ತಿದ್ದ ವೇಳೆ ನೀಲಗಾಯ್ ಎಂಬ ಅಪರೂಪದ ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  

Viral Video: ಯಮನಂತೆ ಹಾರಿ ಬಂದು ಯುವಕನ ಪ್ರಾಣ ತೆಗೆದ ನೀಲಗಾಯ್
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 19, 2024 | 12:51 PM

Share

ಹುಟ್ಟು ಸಾವು ಪ್ರಕೃತಿಯ ನಿಯಮ. ಮನುಷ್ಯ ಯಾವಾಗ ಹುಟ್ಟಬಹುದು ಎಂಬುದನ್ನು ಹೇಳಬಹುದು, ಆದರೆ ಮನುಷ್ಯ ಯಾವಾಗ ಸಾಯುತ್ತಾನೆ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ಹೌದು ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಯಾರು ಊಹಿಸಲು ಸಾಧ್ಯವಿಲ್ಲ. ಸಣ್ಣ ಸಣ್ಣ ಕಾರಣಗಳಿಂದಲೂ ಸಾವು ಸಂಭವಿಸಿದ ಉದಾಹರಣೆಗಳಿವೆ. ಅದೇ ರೀತಿ ಇಲ್ಲೊಬ್ಬ ಯುವಕ ರಸ್ತೆಯಲ್ಲಿ ಬೈಕ್ ಅಲ್ಲಿ ಹೋಗುತ್ತಿದ್ದ ವೇಳೆ ನೀಲಗಾಯ್ ಎಂಬ ಅಪರೂಪದ ಪ್ರಾಣಿಯೊಂದು ಡಿಕ್ಕಿಯೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೀಲಗಾಯ್ ಎಂಬ ಪ್ರಾಣಿ ಉತ್ತರ ಭಾರತದಲ್ಲಿ ಅತ್ಯಂತ ಹೆಚ್ಚಾಗಿ ಕಾಣಸಿಗುವ ಪ್ರಾಣಿಯಾಗಿದೆ. ಇದೀಗ ಈ ನೀಲಗಾಯ್ ಪ್ರಾಣಿ ಅವಸರದಲ್ಲಿ ರಸ್ತೆದಾಟುವಾಗ ಬೈಕ್ ಸವಾರರೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ನೀಲಗಾಯ್ ಕೊಂಬು ಆತನ ಎದೆಗೆ ಚುಚ್ಚಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಗೂ ಈ ಪ್ರಾಣಿಗೂ ಸಣ್ಣಪುಟ್ಟ ಗಾಯಗಳಾಗಿದ್ದು,   ಈ ದೃಶ್ಯ ಹೆದ್ದಾರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಮೃತಪಟ್ಟ ಯುವಕನನ್ನು ಮುಕೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಮುಕೇಶ್ ಇನಾಯತ್ ನಗರ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಕುರಿತ ವಿಡಿಯೋವನ್ನು ಆನಂದ್ ಶಂಕರ್ (@kalapian_) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಯೋಧ್ಯೆಯಲ್ಲಿ ಬೈಕ್ ಸವಾರನೊಬ್ಬ ನೀಲಗಾಯ್ ಪ್ರಾಣಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಆಘಾತಕಾರಿ ವಿಡಿಯೋ. ಬೈಕ್ ಸವಾರನ ಎದೆಗೆ ಈ ಪ್ರಾಣಿಯ ಕೊಂಬು ಚುಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

6 ಸೆಕೆಂಡುಗಳ ವೈರಲ್ ವಿಡಿಯೋದಲ್ಲಿ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ಹೋಗುತ್ತಿರುವ ವೇಳೆ, ವೇಗವಾಗಿ ರಸ್ತೆ ದಾಟುತ್ತಿದ್ದ ನೀಲಗಾಯ್ ಆತನ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆತ ಬೈಕಿನಿಂದ ಕೆಳಗೆ ಉರುಳಿ ಬೀಳುವ ದೃಶ್ಯವನ್ನು ಕಾಣಬಹುದು. ಈ ಭೀಕರ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ