AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾವಿನ ಹಣ್ಣು ಕದ್ದರೆಂದು 3 ಮಕ್ಕಳನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಮಾಲೀಕ; ವಿಡಿಯೋ ವೈರಲ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ಮನಸ್ಸಿಗೆ ಘಾಸಿಯುಂಟುಮಾಡುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮಾವಿನ ಹಣ್ಣು ಕದ್ದರೆಂಬ ಒಂದೇ ಒಂದು ಕಾರಣಕ್ಕೆ ತೋಟದ ಮಾಲೀಕ ಮೂವರು ಪುಟ್ಟ ಮಕ್ಕಳನ್ನು ಮರಕ್ಕೆ ಕಟ್ಟಿ ಹಾಕಿ, ಅವರ ಬಾಯಿಗೆ ಮಾವು ತುರುಕಿ ಅಮಾನುಷವಾಗಿ ಥಳಿಸಿದ್ದಾನೆ. ಮಾಲೀಕನ ಈ ಅಮಾನವೀಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Viral Video: ಮಾವಿನ ಹಣ್ಣು ಕದ್ದರೆಂದು 3 ಮಕ್ಕಳನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಮಾಲೀಕ; ವಿಡಿಯೋ ವೈರಲ್‌
ಮಾಲಾಶ್ರೀ ಅಂಚನ್​
| Edited By: |

Updated on: Jul 14, 2024 | 3:08 PM

Share

ಸಾಮಾನ್ಯವಾಗಿ ಈ ತುಂಟ ಮಕ್ಕಳಿಗೆ ಮರಗಳಲ್ಲಿ ಹಣ್ಣುಗಳು ಕಂಡ್ರೆ ಅದನ್ನು ಕಿತ್ತು ತಿನ್ನುವ ಅಭ್ಯಾಸ ಇರುತ್ತೆ. ಅದೇ ರೀತಿ ಇಲ್ಲೊಂದು ಮೂವರು ಮಕ್ಕಳು ತೋಟವೊಂದರಲ್ಲಿ ಮಾವು ಬೆಳೆದಿರುವುದನ್ನು ಕಂಡು, ಅಲ್ಲಿಗೆ ಹೋಗಿ ಮಾವಿನ ಹಣ್ಣನ್ನು ಕಿತ್ತಿದ್ದಾರೆ. ಈ ವಿಷಯ ತಿಳಿದ ತೋಟದ ಮಾಲೀಕ ಆ ಮಕ್ಕಳನ್ನು ಮರಕ್ಕೆ ಕಟ್ಟಿ, ಅವರ ಬಾವಿಗೆ ಮಾವಿನ ಕಾಯಿ ತುರುಕಿ ಅಮಾನುಷವಾಗಿ ಥಳಿಸಿದ್ದಾನೆ. ಈ ಆಘಾತಕಾರಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಎಂಬಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಮಾವಿನ ಹಣ್ಣನ್ನು ಕದ್ದರೆಂಬ ಒಂದೇ ಒಂದು ಕಾರಣಕ್ಕೆ ತೋಟದ ಮಾಲೀಕ ಮೂವರು ಪುಟ್ಟ ಮಕ್ಕಳನ್ನು ಮರಕ್ಕೆ ಕಟ್ಟಿಹಾಕಿ, ಮಕ್ಕಳು ಕಿರಿಚಾಡುವ ಸದ್ದು ಯಾರಿಗೂ ಕೇಳಬಾರದೆಂದು ಅವರ ಬಾಯಿಗೆ ಮಾವಿನ ಹಣ್ಣು ತುರುಕಿ, ಕ್ರೂರವಾಗಿ ಥಳಿಸಿದ್ದಾನೆ. ತೋಟದ ಮಾಲೀಕ ಸುದರ್ಶನ್‌ ಎಂದು ಗುರುತಿಸಲಾಗಿದೆ. ಇದೀಗ ಈತನ ವಿರುದ್ಧ ಚೌಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ವಿಡಿಯೋ ತುಣುಕು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಮಾಲೀಕನನ್ನು ಬಂಧಿಸಲಾಗಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಸಚಿನ್‌ ಗುಪ್ತಾ (sachinGuptaUP) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ತೋಟದ ಮಾಲೀಕ ಎಷ್ಟು ಕ್ರೂರಿ ನೋಡಿ… ತೋಟದಲ್ಲಿ ಮಾವಿನ ಕಾಯಿ ಕೀಳಲು ಬಂದ ಮಕ್ಕಳನ್ನು ಹಗ್ಗದಿಂದ ಕಟ್ಟಿ ಥಳಿಸಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಸುಮಾರು 6 ವರ್ಷ ವಯಸ್ಸಿನ ಮೂವರು ಮಕ್ಕಳನ್ನು ತೋಟದ ಮಾಲೀಕ ಮರಕ್ಕೆ ಕಟ್ಟಿ ಹಾಕಿರುವಂತಹ ದೃಶ್ಯವನ್ನು ಕಾಣಬಹುದು.

ಜುಲೈ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಿಷ್ಕಲ್ಮಶ ಮನಸ್ಸಿನ ಮಕ್ಕಳೊಂದಿಗೆ ಇಷ್ಟು ಕ್ರೂರವಾಗಿ ವರ್ತಿಸುವುದು ಎಷ್ಟು ಸರಿ ಎಂದು ನೆಟ್ಟಿಗರು ಮಾಲೀಕನ ವಿರುದ್ಧ ಕಿಡಿ ಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​