AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ರೋಗಿಯ ಹೊಟ್ಟೆಯಲ್ಲಿತ್ತು ರಾಶಿ ನಾಣ್ಯಗಳು..!

Viral News: ಈ ಸ್ಕ್ಯಾನಿಂಗ್ ರಿಪೋರ್ಟ್ ನೋಡಿದ ವೈದ್ಯರು ಮೂರ್ಛೆ ಬೀಳುವುದೊಂದೇ ಬಾಕಿ. ಏಕೆಂದರೆ ಆತನ ಹೊಟ್ಟೆಯಲ್ಲಿ ನಾಣ್ಯಗಳ ರಾಶಿಯೇ ಕಂಡು ಬಂದಿದೆ.

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ರೋಗಿಯ ಹೊಟ್ಟೆಯಲ್ಲಿತ್ತು ರಾಶಿ ನಾಣ್ಯಗಳು..!
Viral Photo
TV9 Web
| Edited By: |

Updated on: Aug 01, 2022 | 5:43 PM

Share

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿ 63 ನಾಣ್ಯಗಳನ್ನು ಕಂಡು ವೈದ್ಯರೇ ಬೆಚ್ಚಿಬಿದ್ದ ಘಟನೆಯು ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ವ್ಯಕ್ತಿಯು ವಿಪರೀತ ಹೊಟ್ಟೆ ನೋವಾಗುತ್ತಿದೆ ಎಂದು ಮನೆಯವರಲ್ಲಿ ತಿಳಿಸಿದ್ದರು. ಹೀಗಾಗಿ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಪರಿಶೀಲಿಸಿದ ವೈದ್ಯರು ನಿಖರ ಕಾರಣವೇನು ಎಂಬುದು ಗೊತ್ತಾಗಲಿಲ್ಲ. ಹೀಗಾಗಿ ಸ್ಕ್ಯಾನ್ ಮಾಡಿಸುವಂತೆ ಸೂಚಿಸಿದ್ದಾರೆ.

ಈ ಸ್ಕ್ಯಾನಿಂಗ್ ರಿಪೋರ್ಟ್ ನೋಡಿದ ವೈದ್ಯರು ಮೂರ್ಛೆ ಬೀಳುವುದೊಂದೇ ಬಾಕಿ. ಏಕೆಂದರೆ ಆತನ ಹೊಟ್ಟೆಯಲ್ಲಿ ನಾಣ್ಯಗಳ ರಾಶಿಯೇ ಕಂಡು ಬಂದಿದೆ. ಈ ಬಗ್ಗೆ ರೋಗಿಯನ್ನು ವಿಚಾರಿಸಿದಾಗ ಒಂದಷ್ಟು ನಾಣ್ಯಗಳನ್ನು ನುಂಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿದ್ದರು. ಅದರಂತೆ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ವ್ಯಕ್ತಿಯ ಹೊಟ್ಟೆಯಿಂದ ನಾಣ್ಯಗಳನ್ನು ತೆಗೆಯಲಾಯಿತು.

ಆ ಬಳಿಕ ವೈದ್ಯರ ತಂಡವು ನಾಣ್ಯಗಳನ್ನು ಲೆಕ್ಕಹಾಕಿದ್ದಾರೆ. ಈ ವೇಳೆ ಬರೋಬ್ಬರಿ 63 ನಾಣ್ಯಗಳನ್ನು ನುಂಗಿರುವುದು ಗೊತ್ತಾಗಿದೆ. ಇದೀಗ ರೋಗಿಯು ಚೇತರಿಸಿಕೊಂಡಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವೈದ್ಯ ನರೇಂದ್ರ ಭಾರ್ಗವ್ ತಿಳಿಸಿದ್ದಾರೆ.

ಇದನ್ನೂ ಓದಿ
Image
Crime News: ಡ್ರಗ್ಸ್​ನೊಂದಿಗೆ ಯುವತಿ ಜೊತೆ ಲಾಡ್ಜ್​​ನಲ್ಲಿದ್ದ ನಾಲ್ವರ ಬಂಧನ..!
Image
Crime News: 18ನೇ ವಯಸ್ಸಿನಲ್ಲಿ ಲವ್, 19ನೇ ವಯಸ್ಸಿಗೆ ವಿವಾಹ..ಇದೀಗ ದುರಂತ ಅಂತ್ಯ..!
Image
Crime News: ಹೆಂಡ್ತಿಯ ರೀಲ್ಸ್​ ಹುಚ್ಚಿಗೆ ಗಂಡ ಬಲಿಯಾದ..!
Image
Crime News: ಪತ್ನಿಗೆ ಮೋಸ ಮಾಡಿ ಪ್ರೇಯಸಿ ಜೊತೆ ಚಕ್ಕಂದ: ವಿದೇಶಕ್ಕೆ ಹೋಗಿ ಸಿಕ್ಕಿಬಿದ್ದಿದ್ದೇ ರೋಚಕ..!

ಇನ್ನು 36 ವರ್ಷದ ರೋಗಿಯು ಮಾನಸಿಕ ಅಸ್ವಸ್ಥತೆಯನ್ನು ಹೊಂದಿದ್ದು, ಹೀಗಾಗಿ ನಾಣ್ಯವನ್ನು ನುಂಗುವ ಅಭ್ಯಾಸ ರೂಢಿಸಿಕೊಂಡಿದ್ದ. ಇದರಿಂದ ಆತನಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇದೀಗ ನಮ್ಮ ತಂಡವು ಯಶಸ್ವಿ ಶಸ್ತ್ರ ಚಿಕಿತ್ಸೆಯ ಮೂಲಕ 63 ನಾಣ್ಯಗಳನ್ನು ಹೊರತೆಗೆದಿದ್ದೇವೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯಲ್ಲೂ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ