AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?

ಯೂಟ್ಯೂಬ್‌ ನೋಡಿ ಐವರು ಮಕ್ಕಳು ಬಾಂಬ್ ತಯಾರಿಸಲು ಮುಂದಾಗಿದ್ದಾರೆ. ತಯಾರಿಸುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದ್ದು, ಪರಿಣಾಮ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಂತಹ ಘಟನೆಗಳು ಮರುಕಳಿಸದಿರಲು ಪೋಷಕರು ತಮ್ಮ ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Viral: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?
ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು
ಅಕ್ಷತಾ ವರ್ಕಾಡಿ
|

Updated on: Aug 09, 2024 | 11:35 AM

Share

ಪಾಟ್ನಾ: ಇತ್ತೀಚೆಗಷ್ಟೇ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಐವರು ಮಕ್ಕಳು ಯೂಟ್ಯೂಬ್‌ ನೋಡಿ ಬಾಂಬ್‌ ತಯಾರಿಸಲು ಮುಂದಾಗಿದ್ದಾರೆ. ಬೆಂಕಿಕಡ್ಡಿಗಳಿಂದ ಹಿಡಿದು ಗನ್‌ಪೌಡರ್‌ನವರೆಗೆ ಎಲ್ಲವನ್ನೂ ಸಂಗ್ರಹಿಸಿ ಟಾರ್ಚ್‌ಲೈಟ್‌ಗೆ ಸುರಿದು ಬಾಂಬ್​​​ ಒಂದನ್ನು ತಯಾರಿಸಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದ್ದು, ಪರಿಣಾಮ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಹಾರದ ಮುಜಾಫರ್‌ಪುರದ ಗೈಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನಿ ಬಂಗ್ರಾ ಕಲ್ಯಾಣ್ ಗ್ರಾಮದಲ್ಲಿ ಐವರು ಮಕ್ಕಳು ಯೂಟ್ಯೂಬ್ ವಿಡಿಯೋ ನೋಡಿ ಬಾಂಬ್ ತಯಾರಿಸಲು ಬಯಸಿದ್ದರು. ಮಕ್ಕಳು ಬೆಂಕಿಕಡ್ಡಿಗಳು ಮತ್ತು ಗನ್‌ಪೌಡರ್‌ಗಳನ್ನು ಸಂಗ್ರಹಿಸಿ ಟಾರ್ಚ್‌ಲೈಟ್‌ಗೆ ಸುರಿದಿದ್ದರು. ನಂತರ, ಅವರು ಅದರಲ್ಲಿ ಬ್ಯಾಟರಿಯನ್ನು ಹಾಕಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದೆ. ಈ ಅವಘಡದಲ್ಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯೂಟ್ಯೂಬ್ ವಿಡಿಯೋ ನೋಡಿ ಮಕ್ಕಳು ತಯಾರಿಸಲು ಪ್ರಯತ್ನಿಸಿದ್ದು ಈ ವೇಳೆ ದೊಡ್ಡ ಸ್ಫೋಟ ಸಂಭವಿಸಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪೋಷಕರು ತಮ್ಮ ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು