AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?

ಯೂಟ್ಯೂಬ್‌ ನೋಡಿ ಐವರು ಮಕ್ಕಳು ಬಾಂಬ್ ತಯಾರಿಸಲು ಮುಂದಾಗಿದ್ದಾರೆ. ತಯಾರಿಸುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದ್ದು, ಪರಿಣಾಮ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಂತಹ ಘಟನೆಗಳು ಮರುಕಳಿಸದಿರಲು ಪೋಷಕರು ತಮ್ಮ ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Viral: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?
ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು
ಅಕ್ಷತಾ ವರ್ಕಾಡಿ
|

Updated on: Aug 09, 2024 | 11:35 AM

Share

ಪಾಟ್ನಾ: ಇತ್ತೀಚೆಗಷ್ಟೇ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಐವರು ಮಕ್ಕಳು ಯೂಟ್ಯೂಬ್‌ ನೋಡಿ ಬಾಂಬ್‌ ತಯಾರಿಸಲು ಮುಂದಾಗಿದ್ದಾರೆ. ಬೆಂಕಿಕಡ್ಡಿಗಳಿಂದ ಹಿಡಿದು ಗನ್‌ಪೌಡರ್‌ನವರೆಗೆ ಎಲ್ಲವನ್ನೂ ಸಂಗ್ರಹಿಸಿ ಟಾರ್ಚ್‌ಲೈಟ್‌ಗೆ ಸುರಿದು ಬಾಂಬ್​​​ ಒಂದನ್ನು ತಯಾರಿಸಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದ್ದು, ಪರಿಣಾಮ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಹಾರದ ಮುಜಾಫರ್‌ಪುರದ ಗೈಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನಿ ಬಂಗ್ರಾ ಕಲ್ಯಾಣ್ ಗ್ರಾಮದಲ್ಲಿ ಐವರು ಮಕ್ಕಳು ಯೂಟ್ಯೂಬ್ ವಿಡಿಯೋ ನೋಡಿ ಬಾಂಬ್ ತಯಾರಿಸಲು ಬಯಸಿದ್ದರು. ಮಕ್ಕಳು ಬೆಂಕಿಕಡ್ಡಿಗಳು ಮತ್ತು ಗನ್‌ಪೌಡರ್‌ಗಳನ್ನು ಸಂಗ್ರಹಿಸಿ ಟಾರ್ಚ್‌ಲೈಟ್‌ಗೆ ಸುರಿದಿದ್ದರು. ನಂತರ, ಅವರು ಅದರಲ್ಲಿ ಬ್ಯಾಟರಿಯನ್ನು ಹಾಕಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದೆ. ಈ ಅವಘಡದಲ್ಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯೂಟ್ಯೂಬ್ ವಿಡಿಯೋ ನೋಡಿ ಮಕ್ಕಳು ತಯಾರಿಸಲು ಪ್ರಯತ್ನಿಸಿದ್ದು ಈ ವೇಳೆ ದೊಡ್ಡ ಸ್ಫೋಟ ಸಂಭವಿಸಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪೋಷಕರು ತಮ್ಮ ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ