AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದಿನ ಸ್ಮಶಾನದಲ್ಲಿ ಆರು ಅಡಿ ಉದ್ದದ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

Python : ಒಂದಲ್ಲ ಎರಡಲ್ಲ ಬರೋಬ್ಬರಿ 6 ಅಡಿ. ಯಾರಿಗೆ ತಾನೆ ಭಯ ಆಗದು? ಸ್ಮಶಾನದ ಸುತ್ತಮುತ್ತ ಇರುವ ಮನೆಗಳಿಂದ ಹುಣಸೆಹಣ್ಣು ಕೀಳಲು ಬರುವ ಮಕ್ಕಳನ್ನು ಕಾಪಾಡು ದೇವರೇ ಎಂದು ನೆಟ್ಟಿಗರು ಪ್ರಾರ್ಥಿಸುತ್ತಿದ್ದಾರೆ.

ಹೈದರಾಬಾದಿನ ಸ್ಮಶಾನದಲ್ಲಿ ಆರು ಅಡಿ ಉದ್ದದ ಹೆಬ್ಬಾವು ಪತ್ತೆ, ವಿಡಿಯೋ ವೈರಲ್
ಹೆಬ್ಬಾವು
TV9 Web
| Updated By: ಶ್ರೀದೇವಿ ಕಳಸದ|

Updated on:Oct 06, 2022 | 2:39 PM

Share

Viral Video :  ಹಾವು ಎಂದ ತಕ್ಷಣ ಎಂಥವರಿಗೂ ಒಂದು ಕ್ಷಣ ಭಯ ಉಂಟಾಗುತ್ತದೆ. ಅದು ಚಿಕ್ಕದಿರಲಿ ದೊಡ್ಡದೇ ಇರಲಿ. ಅದು ಅಷ್ಟೊಂದು ವಿಷಕಾರಿ. ಒಮ್ಮೆ ಕಚ್ಚಿದರೆ ಜೀವವನ್ನೇ ತೆಗೆಯಬಲ್ಲುದು ಎಂದು ಗೊತ್ತಿದ್ದೇ ಎಲ್ಲರಿಗೂ ಅಷ್ಟು ಭಯ. ಇತ್ತೀಚೆಗೆ ಹೈದರಾಬಾದಿನ ಫಲಕ್ನುಮಾದ ಸ್ಮಶಾನದಲ್ಲಿ ಆರು ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ. ಅಷ್ಟು ದೈತ್ಯ ಹಾವು ನೋಡುಗರಲ್ಲಿ ಎಂಥ ಭಯ ಹುಟ್ಟುಹಾಕಿರಬೇಡ! ಆ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿಯ ಸ್ಥಳೀಯರು ಖ್ವಾದ್ರಿ ಚಮನ್ ಸ್ಮಶಾನದಲ್ಲಿ ಹರಿದು ಹೋಗುತ್ತಿರುವ ಹಾವಿನ ವಿಡಿಯೋ ಅನ್ನು ಚಿತ್ರೀಕರಿಸಿದ್ದಾರೆ. ಈ ಹಾವು ಕಾಣಿಸಿಕೊಂಡಾಗ ಮಧ್ಯರಾತ್ರಿ.

ಶುಕ್ರವಾರ ಮಧ್ಯರಾತ್ರಿ ಈ ಹಾವು ಸ್ಮಶಾನದಲ್ಲಿ ಕಾಣಿಸಿಕೊಂಡಿದೆ. ಸ್ಮಶಾನದ ಸುತ್ತಮುತ್ತ ಹುಣಸೆಗಿಡಗಳಿದ್ದು, ಸ್ಥಳೀಯ ವಸತಿಗೃಹಗಳಲ್ಲಿ ವಾಸಿಸುತ್ತಿರುವ ಮಕ್ಕಳು ಹುಣಸೆಹಣ್ಣು ಕೀಳಲು ಹೋಗುವ ಪರಿಪಾಠವಿದೆ. ಹಾಗಾಗಿ ಇದು ಅಪಾಯಕಾರಿ ಎಂದರಿತ ಸ್ಥಳೀಯರು ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದಾರೆ. ಹೇಗಾದರೂ ಈ ಹೆಬ್ಬಾವನ್ನು ಪತ್ತೆ ಹಚ್ಚಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡುವಂತೆ ವಿನಂತಿಸಿಕೊಂಡಿದ್ದಾರೆ.

ಈ ವಿಡಿಯೋ ನೋಡಿದ ನೆಟ್ಟಿಗರು ಭಯಬಿದ್ದು, ಸುತ್ತಮುತ್ತಲಿನ ನಿವಾಸಿಗಳ ಸುರಕ್ಷತೆಗೆ ಪ್ರಾರ್ಥಿಸುತ್ತಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:01 pm, Thu, 6 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್