AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದಿನ ಸ್ಮಶಾನದಲ್ಲಿ ಆರು ಅಡಿ ಉದ್ದದ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

Python : ಒಂದಲ್ಲ ಎರಡಲ್ಲ ಬರೋಬ್ಬರಿ 6 ಅಡಿ. ಯಾರಿಗೆ ತಾನೆ ಭಯ ಆಗದು? ಸ್ಮಶಾನದ ಸುತ್ತಮುತ್ತ ಇರುವ ಮನೆಗಳಿಂದ ಹುಣಸೆಹಣ್ಣು ಕೀಳಲು ಬರುವ ಮಕ್ಕಳನ್ನು ಕಾಪಾಡು ದೇವರೇ ಎಂದು ನೆಟ್ಟಿಗರು ಪ್ರಾರ್ಥಿಸುತ್ತಿದ್ದಾರೆ.

ಹೈದರಾಬಾದಿನ ಸ್ಮಶಾನದಲ್ಲಿ ಆರು ಅಡಿ ಉದ್ದದ ಹೆಬ್ಬಾವು ಪತ್ತೆ, ವಿಡಿಯೋ ವೈರಲ್
ಹೆಬ್ಬಾವು
TV9 Web
| Edited By: |

Updated on:Oct 06, 2022 | 2:39 PM

Share

Viral Video :  ಹಾವು ಎಂದ ತಕ್ಷಣ ಎಂಥವರಿಗೂ ಒಂದು ಕ್ಷಣ ಭಯ ಉಂಟಾಗುತ್ತದೆ. ಅದು ಚಿಕ್ಕದಿರಲಿ ದೊಡ್ಡದೇ ಇರಲಿ. ಅದು ಅಷ್ಟೊಂದು ವಿಷಕಾರಿ. ಒಮ್ಮೆ ಕಚ್ಚಿದರೆ ಜೀವವನ್ನೇ ತೆಗೆಯಬಲ್ಲುದು ಎಂದು ಗೊತ್ತಿದ್ದೇ ಎಲ್ಲರಿಗೂ ಅಷ್ಟು ಭಯ. ಇತ್ತೀಚೆಗೆ ಹೈದರಾಬಾದಿನ ಫಲಕ್ನುಮಾದ ಸ್ಮಶಾನದಲ್ಲಿ ಆರು ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ. ಅಷ್ಟು ದೈತ್ಯ ಹಾವು ನೋಡುಗರಲ್ಲಿ ಎಂಥ ಭಯ ಹುಟ್ಟುಹಾಕಿರಬೇಡ! ಆ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿಯ ಸ್ಥಳೀಯರು ಖ್ವಾದ್ರಿ ಚಮನ್ ಸ್ಮಶಾನದಲ್ಲಿ ಹರಿದು ಹೋಗುತ್ತಿರುವ ಹಾವಿನ ವಿಡಿಯೋ ಅನ್ನು ಚಿತ್ರೀಕರಿಸಿದ್ದಾರೆ. ಈ ಹಾವು ಕಾಣಿಸಿಕೊಂಡಾಗ ಮಧ್ಯರಾತ್ರಿ.

ಶುಕ್ರವಾರ ಮಧ್ಯರಾತ್ರಿ ಈ ಹಾವು ಸ್ಮಶಾನದಲ್ಲಿ ಕಾಣಿಸಿಕೊಂಡಿದೆ. ಸ್ಮಶಾನದ ಸುತ್ತಮುತ್ತ ಹುಣಸೆಗಿಡಗಳಿದ್ದು, ಸ್ಥಳೀಯ ವಸತಿಗೃಹಗಳಲ್ಲಿ ವಾಸಿಸುತ್ತಿರುವ ಮಕ್ಕಳು ಹುಣಸೆಹಣ್ಣು ಕೀಳಲು ಹೋಗುವ ಪರಿಪಾಠವಿದೆ. ಹಾಗಾಗಿ ಇದು ಅಪಾಯಕಾರಿ ಎಂದರಿತ ಸ್ಥಳೀಯರು ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದಾರೆ. ಹೇಗಾದರೂ ಈ ಹೆಬ್ಬಾವನ್ನು ಪತ್ತೆ ಹಚ್ಚಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡುವಂತೆ ವಿನಂತಿಸಿಕೊಂಡಿದ್ದಾರೆ.

ಈ ವಿಡಿಯೋ ನೋಡಿದ ನೆಟ್ಟಿಗರು ಭಯಬಿದ್ದು, ಸುತ್ತಮುತ್ತಲಿನ ನಿವಾಸಿಗಳ ಸುರಕ್ಷತೆಗೆ ಪ್ರಾರ್ಥಿಸುತ್ತಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:01 pm, Thu, 6 October 22

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್