ಹಣ ಬೇಕಾದರೆ ಅವಳೇ ಸಂಪಾದಿಸಲಿ, 6 ಲಕ್ಷ ರೂ. ಜೀವನಾಂಶಬೇಕೆಂದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್

ಇಲ್ಲೊಂದು ವಿಚಿತ್ರ ಪ್ರಕರಣವೊಂದು ನಡೆದಿದ್ದು, ಬ್ರಾಂಡೆಡ್ ಬಟ್ಟೆ, ಐಷಾರಾಮಿ ಜೀವನಕ್ಕಾಗಿ ಮಾಜಿ ಪತಿಯಿಂದ 6 ಲಕ್ಷ ರೂ. ಮಾಸಿಕ ನಿರ್ವಹಣೆಗೆ ಮಹಿಳೆ ಬೇಡಿಕೆಯಿಟ್ಟಿದ್ದು, ತಿಂಗಳಿಗೆ ಆರು ಲಕ್ಷ ನೀಡಲೇಬೇಕೆಂದು ಮಹಿಳೆಯ ಪರ ವಕೀಲರು ವಾದ ಮಂಡಿಸಿದ್ದಾರೆ. ವಾದವನ್ನು ಆಲಿಸಿದ ನ್ಯಾಯಾಧೀಶರು ಅವಳ ಖರ್ಚಿಗೆ ಹಣ ಬೇಕಾದರೆ ಅವಳೇ ಸಂಪಾದಿಸಲಿ, ಗಂಡನಿಂದ ಕೇಳೋದಲ್ಲ ಎಂದು ಮಹಿಳೆ ಮತ್ತು ಆಕೆಯ ಪರ ವಾದಿಸಿದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ಹಣ ಬೇಕಾದರೆ ಅವಳೇ ಸಂಪಾದಿಸಲಿ, 6 ಲಕ್ಷ ರೂ. ಜೀವನಾಂಶಬೇಕೆಂದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2024 | 11:42 AM

ವಿಚ್ಛೇದನದ ಬಳಿಕ ಪತಿ ತನ್ನ ಮಾಜಿ ಪತ್ನಿಗೆ ಜೀವನ ಸಾಗಿಸಲು ಇಂತಿಷ್ಟು ಜೀವನಾಂಶ ನೀಡಲೇಬೇಕು. ಈ ಕಾನೂನುನನ್ನೇ ದುರುಪಯೋಗಪಡಿಸಿಕೊಂಡ ಮಹಿಳೆಯೊಬ್ಬಳು ಬ್ರಾಂಡೆಡ್ ಬಟ್ಟೆ, ಐಷಾರಾಮಿ ಜೀವನಕ್ಕಾಗಿ ಮಾಜಿ ಪತಿ ತಿಂಗಳಿಗೆ ರೂ 6 ಲಕ್ಷ ನೀಡಬೇಕೆಂದು ಬೇಡಿಕೆಯಿಟ್ಟಿದ್ದಾಳೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಮಹಿಳೆಯ ಪರ ವಕೀಲರು ವಾದ ಮಂಡಿಸಿದ್ದು, ವಾದವನ್ನು ಆಲಿಸಿದ ನ್ಯಾಯಾಧೀಶರು ಅವಳ ಖರ್ಚಿಗೆ ಹಣ ಬೇಕಾದರೆ ಅವಳೇ ಸಂಪಾದಿಸಲಿ, ಗಂಡನಿಂದ ಕೇಳೋದಲ್ಲ ಎಂದು ಮಹಿಳೆ ಮತ್ತು ಆಕೆಯ ಪರ ವಾದಿಸಿದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ವಿಚ್ಛೇದನ ಪ್ರಕ್ರಿಯೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ತನ್ನ ಮಾಜಿ ಪತಿಯಿಂದ ತಿಂಗಳಿಗೆ 6 ಲಕ್ಷ ರೂ ಜೀವನಾಂಶಕ್ಕಾಗಿ ಬೇಡಿಕೆ ಇಟ್ಟಿದ್ದನ್ನು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ನ್ಯಾಯಾಧೀಶರ ಈ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಹಿಳೆಯ ಪರ ವಾದ ಮಂದಿಸಿದ ವಕೀಲರು, ನನ್ನ ಕಕ್ಷಿದಾರರಿಗೆ ಅವರ ಮಾಜಿ ಪತಿ ತಿಂಗಳಿಗೆ 6 ಲಕ್ಷ ರೂ. ಜೀವನಾಂಶ ನೀಡಬೇಕು ಎಂದು ಹೇಳಿದ್ದಾರೆ. ಆಕೆಯ ಮೊಣಕಾಲು ನೋವಿನ ಚಿಕಿತ್ಸೆ, ಫಿಸಿಯೋಥೆರಪಿ , ಔಷಧಗಳು ಮತ್ತು ಇತರೆ ವೆಚ್ಚಗಳಿಗೆ ತಿಂಗಳಿಗೆ ₹ 4 ರಿಂದ 5 ಲಕ್ಷ ಬೇಕಾಗುತ್ತದೆ ಮತ್ತು ಬಳೆಗಳು, ಬ್ರಾಂಡೆಡ್ ಬಟ್ಟೆಗಳು, ಚಪ್ಪಲಿ ಇತ್ಯಾದಿ ಮೂಲಭೂತ ಅಗತ್ಯಗಳಿಗಾಗಿ 50 ಸಾವಿರ ಹಾಗೂ ಪೌಷ್ಟಿಕ ಆಹಾರಕ್ಕಾಗಿ 60 ಸಾವಿರ ಬೇಕಾಗುತ್ತದೆ. ಹೀಗೆ ಒಟ್ಟಾಗಿ ಪ್ರತಿ ತಿಂಗಳು 6,16,300ರೂ. ಮಾಸಿಕ ಜೀವನಾಂಶ ನೀಡಬೇಕು ಎಂದು ವಾದ ಮಂಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ: .

ವಾದವನ್ನು ಆಲಿಸಿದ ನ್ಯಾಯಾಧೀಶರು “ತಿಂಗಳಿಗೆ 6,16,300 ರೂ.? ಯಾರಾದರೂ ಇಷ್ಟು ಖರ್ಚು ಮಾಡುತ್ತಾರೆಯೇ? ಆಕೆ ಅಷ್ಟು ಹಣ ಖರ್ಚು ಮಾಡಲೇಬೇಕೆಂದು ಬಯಸಿದರೆ, ಅವಳೇ ಸಂಪಾದಿಸಲಿ. ಗಂಡನ ಮೇಲೆ ಏಕೆ ಅವಲಂಬಿತವಾಗಬೇಕು. ಆಕೆಗೆ ಕುಟುಂಬದ ಬೇರೆ ಯಾವುದೇ ಜವಾಬ್ದಾರಿ ಇಲ್ಲ. ಮಕ್ಕಳನ್ನು ನೋಡಿಕೊಳ್ಳಬೇಕಾಗಿಲ್ಲ. ಸ್ವಂತ ಖರ್ಚಿಗೆ ಇಷ್ಟು ಹಣ ಕೇಳುತ್ತಿದ್ದಾಳೆ. ನಿಜಕ್ಕೂ ಇದು ಅಸಮಂಜಸವಾಗಿದೆ. ಜೀವನಾಂಶವು ಯಾವುದೇ ಕಾರಣಕ್ಕೂ ಗಂಡನಿಗೆ ಶಿಕ್ಷೆಯಾಗಬಾರದು” ಎಂದು ಹೇಳಿ ನ್ಯಾಯಾಧೀಶರು ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ ಮಹಿಳೆ ಮತ್ತು ಆಕೆಯ ಪರ ವಾದಿಸಿದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನಮ್ಮಪ್ಪನನ್ನು ಜೈಲಿಗೆ ಹಾಕಿ, ತಂದೆಯ ವಿರುದ್ಧ ದೂರು ನೀಡಲು ಠಾಣೆಗೆ ಬಂದ 5 ವರ್ಷದ ಬಾಲಕ

ಈ ಕುರಿತ ಪೋಸ್ಟ್ ಒಂದನ್ನು CeoVoice ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಅಷ್ಟು ಹಣ ಬೇಕಿದ್ರೆ ಆಕೆಯೇ ಸಂಪಾದನೆ ಮಾಡಲಿ ಎಂದು ಗಂಡನಿಂದ ತಿಂಗಳಿಗೆ 6 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆಯಿಟ್ಟ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ದೃಶ್ಯವನ್ನು ಕಾಣಬಹುದು.

ಆಗಸ್ಟ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಈ ನ್ಯಾಯಾಧೀಶರಿಗೆ ನನ್ನ ನಮನಗಳು ಸರಿಯಾದ ಜಡ್ಜ್ಮೆಂಟ್ ಕೊಟ್ಟಿದ್ದಾರೆ’ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಇದ್ದರೆ ಇಂತಹ ನ್ಯಾಯಾಧೀಶರಿರಬೇಕು’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್